Home namma chikmagalur ಮನೆಕಳವು ಮಾಡಿ ಸಂಪಾದಿಸಿದ ಹಣದಲ್ಲಿ 20 ಮಕ್ಕಳ ವಿದ್ಯಾಭ್ಯಾಸ ಹಣ
namma chikmagalurchikamagalurCrime NewsHomeLatest News

ಮನೆಕಳವು ಮಾಡಿ ಸಂಪಾದಿಸಿದ ಹಣದಲ್ಲಿ 20 ಮಕ್ಕಳ ವಿದ್ಯಾಭ್ಯಾಸ ಹಣ

Share
Share

ಬೆಂಗಳೂರು: ಮನೆಕಳವು ಮಾಡಿ ಸಂಪಾದಿಸಿದ ಹಣದಲ್ಲಿ ತನ್ನ ಸ್ನೇಹಿತರಿಗೆ ಆಟೋ ಹಾಗೂ 20 ಮಕ್ಕಳ ವಿದ್ಯಾಭ್ಯಾಸಕ್ಕಾಗಿ 14 ಲಕ್ಷ ರು.ಗಳನ್ನು ನೆರವು ನೀಡಿದ್ದ ‘ಆಧುನಿಕ ರಾಬಿನ್‌ಹುಡ್’ ಹಾಗೂ ಆತನ ಇಬ್ಬರು ಸಹಚರರು ಈಗ ಸೆಂಟ್ರಲ್‌ ಜೈಲು ಸೇರಿದ್ದಾರೆ.

ತಮಿಳುನಾಡು ಮೂಲದ ಶಿವು ಕುಟುಂಬ ಹಲವು ವರ್ಷಗಳ ಹಿಂದೆಯೇ ನಗರಕ್ಕೆ ಬಂದು ನೆಲೆಸಿತ್ತು. ಮೊದಲು ಸಣ್ಣಪುಟ್ಟ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಆತ, ತರುವಾಯ ಸುಲಭವಾಗಿ ಹಣ ಸಂಪಾದನೆಗೆ ಅಡ್ಡದಾರಿ ಹಿಡಿದಿದ್ದಾನೆ. ಮನೆಗಳ್ಳತನವನ್ನೇ ವೃತ್ತಿಯಾಗಿಸಿಕೊಂಡ ಶಿವು ವಿರುದ್ಧ ನಗರದ ಬೇಗೂರು, ಎಲೆಕ್ಟ್ರಾನಿಕ್ ಸಿಟಿ, ಆನೇಕಲ್ ಹಾಗೂ ಜಿಗಣಿ ಸೇರಿದಂತೆ ಇತರೆ ಠಾಣೆಗಳಲ್ಲಿ 10ಕ್ಕೂ ಹೆಚ್ಚಿನ ಪ್ರಕರಣಗಳು ದಾಖಲಾಗಿವೆ.
ಮನೆಗಳ್ಳತನಕ್ಕೆ ಕುಖ್ಯಾತನಾಗಿದ್ದ ಆತ, ತಾನು ಕಳ್ಳತನದಲ್ಲಿ ಸಂಪಾದಿಸಿದ್ದ ಹಣದಲ್ಲಿ ಸ್ಪಲ್ಪ ಹಣವನ್ನು ಜನರಿಗೆ ದಾನ ಮಾಡಿ ಕೊಡುಗೈ ದಾನಿ ಹಾಗೂ ರಾಬಿನ್‌ಹುಡ್‌ ಎಂದೆಲ್ಲ ಕರೆಸಿಕೊಳ್ಳುತ್ತಿದ್ದ ಎಂದು ಪೊಲೀಸರು ವಿವರಿಸಿದ್ದಾರೆ.
Money earned by robbing houses was used to pay for the education of 20 children
Share

Leave a comment

Leave a Reply

Your email address will not be published. Required fields are marked *

Don't Miss

ಮೂಡಿಗೆರೆ ತಾಲ್ಲೂಕಿನಾದ್ಯಂತ ಮಳೆಯಿಂದ ಜನಜೀವನ ಅಸ್ತವ್ಯಸ್ತ

ಮೂಡಿಗೆರೆ: ತಾಲ್ಲೂಕಿನಾದ್ಯಂತ ಭಾನುವಾರ ಇಡೀ ದಿನ‌ ಬಿಡುವಿಲ್ಲದೇ ಸುರಿದ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿತು. ತಾಲ್ಲೂಕಿನ ಗಂಗನಮಕ್ಕಿ ಗ್ರಾಮದಲ್ಲಿ ಮಂಜುನಾಥ್ ಹಾಗೂ ಗಿರೀಶ್ ಅವರಿಗೆ ಸೇರಿದ ಹಳೆಯ ಕಟ್ಟಡವೊಂದು ಕುಸಿದಿದ್ದು, ಅಪಾರ ಪ್ರಮಾಣದ...

40 ಸಾವಿರ ಮೌಲ್ಯದ 400 ಮೀಟರ್ ಪೈಪ್‌  ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ 9ನೇ ಮೈಲಿಕಲ್ಲು ಸಮೀಪದಲ್ಲಿ ಪೈಪ್‌ಲೈನ್ ಕಾಮಗಾರಿ ಜಾಗದಲ್ಲಿದ್ದ ₹ 40ಸಾವಿರ ಮೌಲ್ಯದ 400 ಮೀಟರ್ ಪೈಪ್‌  ಕಳವು ಮಾಡಿದ್ದ ಮೂವರು ಆರೋಪಿಗಳನ್ನು ಸಿಂಗಟಗೆರೆ ಪೊಲೀಸರು ಬಂಧಿಸಿ,...

Related Articles

ವೇದಾನದಿಯಿಂದ ಕೆರೆ ತುಂಬಿಸುವ ಯೋಜನೆ ಸ್ಥಗಿತಗೊಳಿಸಬೇಕು

ಚಿಕ್ಕಮಗಳೂರು:  ವೇದಾ ನದಿಯ ಅಗ್ರಹಾರ ಬಳಿ ಇರುವ ಚೆಕ್‌ಡ್ಯಾಂನಿಂದ ಹುಲಿಕೆರೆ, ಬೆರಟಿಕೆರೆ, ನಾಗೇನಹಳ್ಳಿಯ ಕೆರೆಗಳಿಗೆ ನೀರೊದಗಿಸುವುದನ್ನು...

ನಿಷೇಧಿತ ಅರಣ್ಯ ಪ್ರದೇಶದಲ್ಲಿ ಟ್ರಕ್ಕಿಂಗ್-103 ಪ್ರವಾಸಿಗರು ಪೊಲೀಸರು ವಶಕ್ಕೆ

ಚಿಕ್ಕಮಗಳೂರು: ಪಶ್ಚಿಮ ಘಟ್ಟದ ನಿಷೇಧಿತ ಅರಣ್ಯ ಪ್ರದೇಶ ಬಿದಿರುತಳದಲ್ಲಿ ಅನುಮತಿ ಇಲ್ಲದೆ ಟ್ರಕ್ಕಿಂಗ್ ನಡೆಸುತ್ತಿದ್ದ ೧೦೩...

ಕೇಂದ್ರ ಗುಪ್ತಚರ ಇಲಾಖೆ ಪೇದೆ ಆತ್ಮಹತ್ಯೆ

ಚಿಕ್ಕಮಗಳೂರು: ಅನಾರೋಗ್ಯದ ಸಮಸ್ಯೆ ಹಿನ್ನೆಲೆ ಗುಪ್ತಚರ ಇಲಾಖೆಯ ಪೇದೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ...

ದೇಶ ಸುಭದ್ರಗೊಳಿಸಲು ಯುವಕರು ಯೋಧರಾಗಿ

ಚಿಕ್ಕಮಗಳೂರು:  ಭವ್ಯ ಭಾರತದ ಕನಸನ್ನು ಹೊತ್ತಿರುವ ಯುವಕರು ವಯಸ್ಸಿನಲ್ಲಿ ವ್ಯಸ ನಗಳ ಚಟಕ್ಕೆ ಬಲಿಯಾಗದೇ, ದೇಶವನ್ನು...