Home namma chikmagalur ಮೂರು ಗುಂಪುಗಳಲ್ಲಿ 40ಕ್ಕೂ ಅಧಿಕ ಕಾಡಾನೆಗಳು ದಾಳಿ
namma chikmagalurchikamagalurHomeLatest News

ಮೂರು ಗುಂಪುಗಳಲ್ಲಿ 40ಕ್ಕೂ ಅಧಿಕ ಕಾಡಾನೆಗಳು ದಾಳಿ

Share
Share

ಮೂಡಿಗೆರೆ: ತಾಲ್ಲೂಕಿನ ಗೋಣಿಬಿಡು ಹೋಬಳಿಯ ಜಿ.ಹೊಸಳ್ಳಿ, ಹೊಸಪುರ, ಕಸ್ಕೇಬೈಲ್ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮೂರು ಗುಂಪುಗಳಲ್ಲಿ ಸುಮಾರು 40ಕ್ಕೂ ಅಧಿಕ ಕಾಡಾನೆಗಳು ದಾಳಿ ನಡೆಸಿದ್ದು ಭಯದ ವಾತಾವರಣ ಸೃಷ್ಟಿಯಾಗಿದೆ.

ಒಂದು ತಿಂಗಳಿನಿಂದ ಭುವನೇಶ್ವರಿ ಗುಂಪಿನ 25, ಬೀಟಮ್ಮ 2 ಗುಂಪಿನ 8 ಕಾಡಾನೆಗಳು ಜಿ. ಹೊಸಳ್ಳಿ, ಟಾಟಾ ಎಸ್ಟೇಟ್, ಸಿಲ್ವರ್ ಕಾನು ಎಸ್ಟೇಟ್, ಪಡಿಯ ಕಾಲೊನಿ, ಹೊಸಪುರ, ಹನುಮನಹಳ್ಳಿ ಗ್ರಾಮಗಳಲ್ಲಿ ನಿರಂತರವಾಗಿ ತಿರುಗಾಡುತ್ತಾ ಸಾರ್ವಜನಿಕರಿಗೆ ಉಪಟಳ ನೀಡುತ್ತಿವೆ.

ಬೀಟಮ್ಮ ಗುಂಪಿನ 8 ಆನೆಗಳು ಮೂರು ದಿನದಿಂದ ಹೊಸಪುರ ಗ್ರಾಮದಲ್ಲಿ ಬೀಡುಬಿಟ್ಟಿವೆ. ಭುವನೇಶ್ವರಿ ಗುಂಪಿನಿಂದ ಬೇರ್ಪಟ್ಟ ಮೂರು ಕಾಡಾನೆಗಳು ಜಿ. ಹೊಸಳ್ಳಿಯಿಂದ ಬುಧವಾರ ರಾತ್ರಿ ಹೊರಟು ಬೆಳಿಗ್ಗೆ 5.45ಕ್ಕೆ ಆನೆದಿಬ್ಬ ಗ್ರಾಮದ ಮೂಲಕ ತುಮಕೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಸ್ಕೇಬೈಲ್ ಗ್ರಾಮದ ಮೂಲಕ ಕಮ್ಮರಗೋಡು ಗ್ರಾಮದತ್ತ ಸಾಗಿವೆ.

ಭುವನೇಶ್ವರಿ ಹಾಗೂ ಬೀಟಮ್ಮ ಎರಡು ಗುಂಪಿನ ಕಾಡಾನೆಗಳು ಜಿ.ಹೊಸಳ್ಳಿ ವ್ಯಾಪ್ತಿಯಲ್ಲಿ ಬೀಡುಬಿಟ್ಟಿವೆ. ಗೋಣಿಬೀಡು ಹೋಬಳಿಯಲ್ಲಿಯೇ 40ಕ್ಕೂ ಅಧಿಕ ಕಾಡಾಣೆಗಳು ತಿರುಗಾಡುತ್ತಿದ್ದು, ರೈತರ ಬೆಳೆಯನ್ನು ದ್ವಂಸಗೊಳಿಸುತ್ತಿವೆ. ಅರಣ್ಯ ಇಲಾಖೆಯ ಕಾಡಾನೆ ಟಾಸ್ಕ್ ಪೋರ್ಸ್ ಸಿಬ್ಬಂದಿ ಕಾಡಾನೆಯಿರುವ ಪ್ರದೇಶದಲ್ಲಿ ಬೀಡು ಬಿಟ್ಟಿದ್ದಾರೆ. ಟಾಸ್ಕ್ ಪೋರ್ಸ್ ಸಿಬ್ಬಂದಿ ಅರ್ಧ ಗಂಟೆಗೊಮ್ಮೆ ವಾಟ್ಸ್‌ಆ್ಯಪ್‌ ಗ್ರೂಪ್ ಮೂಲಕ ಕಾಡಾನೆಗಳು ಇರುವ ಗ್ರಾಮಗಳ ಜನರಿಗೆ ಮಾಹಿತಿ ರವಾನಿಸುತ್ತಾ ಪಟಾಕಿ ಸಿಡಿಸಿ ಜನವಸತಿ ಪ್ರದೇಶದತ್ತ ಲಗ್ಗೆ ಇಡದಂತೆ ಎಚ್ಚರ ವಹಿಸಿದ್ದಾರೆ.

ಜಿ.ಹೊಸಳ್ಳಿ ಗ್ರಾಮದ ದೀಪಕ್, ರಾಜೇಗೌಡ, ಪೂರ್ಣೇಶ್, ವಿನಾಯಕ ಎಸ್ಟೇಟ್, ಶೈಲೇಶ್, ಯೋಗೇಶ್, ಹನುಮನಹಳ್ಳಿ ಗ್ರಾಮದ ಆದರ್ಶ, ಕಮ್ಮರಗೋಡು ಗ್ರಾಮದ ಅರುಣ್ ಸೆರಾವೋ, ಕಣ್ಣಪ್ಪ ಗೌಡ, ಕಸ್ಕೇಬೈಲ್ ಗ್ರಾಮದ ಬಿಳಿಗೌಡ ಸೇರಿದಂತೆ 25ಕ್ಕೂ ಹೆಚ್ಚು ರೈತರ ತೋಟಗಳನ್ನು ನಾಶಪಡಿಸಿವೆ. ವಾಟ್ಸ್‌ಆ್ಯಪ್‌ ಗ್ರೂಪ್ ನಲ್ಲಿ ಟಾಸ್ಕ್ ಫೋರ್ಸ್ ಸಿಬ್ಬಂದಿ ಸಂದೇಶ ರವಾನಿಸುತ್ತಿದ್ದರೂ ನಿರ್ದಿಷ್ಟವಾಗಿ ಯಾವ ಸ್ಥಳದಲ್ಲಿ ಕಾಡಾನೆ ಗುಂಪು ಇರುತ್ತವೆಂದು ತಿಳಿಯದೆ ಜನ ಕಂಗಾಲಾಗಿದ್ದಾರೆ.

ಅಗತ್ಯ ವಸ್ತುಗಳ ಖರೀದಿಗೆ ತೆರಳಲು ಜನ ಭಯಪಡುತ್ತಿದ್ದಾರೆ. ಸಂಜೆ 5 ರ ನಂತರ ಗೋಣಿಬಿಡು ಹೋಬಳಿಯ ಬಹುತೇಕ ಗ್ರಾಮಗಳಲ್ಲಿ ಜನರಿಲ್ಲದೆ ಬಿಕೋ ಎನ್ನುತ್ತಿವೆ. ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ರೂಪಿಸಬೇಕು ಎಂದು ಗ್ರಾಮಸ್ಥರು ಹಾಗೂ  ಗೋಣಿಬೀಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಜಿ.ಎಸ್.ದಿನೇಶ್ ಒತ್ತಾಯಿಸಿದರು.

More than 40 wild elephants attacked in three groups

Share

Leave a comment

Leave a Reply

Your email address will not be published. Required fields are marked *

Don't Miss

ಗಿರಿ ಪ್ರದೇಶದ ಪ್ರವಾಸೋದ್ಯಮ ಸ್ಥಳಗಳಿಗೆ ತಾತ್ಕಾಲಿಕ ನಿರ್ಬಂಧ

ಚಿಕ್ಕಮಗಳೂರು: : ಜಿಲ್ಲೆಗೆ ಆಗಮಿಸುತ್ತಿರುವ ಪ್ರವಾಸಿಗರು ಮತ್ತು ಸ್ಥಳೀಯ ಜನತೆಯ ಹಿತದೃಷ್ಟಿಯಿಂದ ಗಿರಿ ಪ್ರದೇಶದ ಕೆಲವು ಪ್ರವಾಸೋದ್ಯಮ ಸ್ಥಳಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ...

ದೇವನಹಳ್ಳಿ 1,777 ಎಕರೆ ಭೂ ಸ್ವಾಧೀನ ನೋಟಿಫಿಕೇಶನ್ ರದ್ದು

ಬೆಂಗಳೂರು: ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಸುತ್ತಮುತ್ತಲಿನ ಒಟ್ಟ 13 ಹಳ್ಳಿಗಳ 1,777 ಎಕರೆ ಭೂ ಸ್ವಾಧೀನ ನಿರ್ಧಾರವನ್ನು ರಾಜ್ಯ ಸರ್ಕಾರ ಹಿಂತೆಗೆದುಕೊಂಡಿದೆ. ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ  ನೇತೃತ್ವದಲ್ಲಿ ನಡೆದ ರೈತರು,...

Related Articles

ರೈತ ಸಂಘಟನೆ ದಾರಿ ಬಿಟ್ಟಿತು ? ಎಲ್ಲಿಗೆ ಪಯಣ ಯಾವುದೋ ದಾರಿ !

ಮಾಸದಿರಲಿ ಬದಲಾಯಿಸದಿರಲಿ ರೈತರ ಹೆಗಲ ಮೇಲೇರಿರುವ ಶಾಲಿನ ಹಸಿರು ಬಣ್ಣ. ದೇಶಕ್ಕೆ ಅನ್ನ ಕೊಡುವ ರೈತ...

ದೇಶಭಕ್ತಿಯ ಪ್ರತೀಕ ಮಹಾರಾಣಾ ಪ್ರತಾಪ್‌ಸಿಂಗ್

ಚಿಕ್ಕಮಗಳೂರು:  ಪರಾಕ್ರಮ-ಆದರ್ಶ ದೇಶಭಕ್ತಿಯ ಪ್ರತೀಕ ಮಹಾರಾಣಾ ಪ್ರತಾಪಸಿಂಗ್ ಎಂದು ಕರ್ನಾಟಕ ರಜಪೂತ ಮಹಾಸಭಾ ನಿರ್ದೇಶಕ ಬೆಂಗಳೂರಿನ...

ದತ್ತು ಸಂಸ್ಥೆಯ ಸಿಬ್ಬಂದಿ ಆಯಾ ಅಮಾನತು

ಚಿಕ್ಕಮಗಳೂರು: ನಗರದ ದತ್ತು ಸಂಸ್ಥೆಯ ಸಿಬ್ಬಂದಿ ನಿರ್ಲಕ್ಷ್ಯದಿಂದ ಒಂದು ವರ್ಷ ಮೂರು ತಿಂಗಳ ಹೆಣ್ಣುಮಗು ಸುಟ್ಟ...

ವೈದ್ಯ ಇಲ್ಲದ ಕಳಸ ತಾಲೂಕು ಆಸ್ಪತ್ರೆ

ಚಿಕ್ಕಮಗಳೂರು: ಕಳಸ ತಾಲೂಕು ಆಸ್ಪತ್ರೆಯಲ್ಲಿ ಓರ್ವ ವೈದ್ಯರೂ ಇಲ್ಲದೆ ಜನರು ಚಿಕಿತ್ಸೆಗೆ ಪರದಾಡುವಂತಾಗಿದೆ. ಸುತ್ತಮುತ್ತಲಿನ ಗ್ರಾಮಸ್ಥರು...