Home namma chikmagalur ಮೂರು ಗುಂಪುಗಳಲ್ಲಿ 40ಕ್ಕೂ ಅಧಿಕ ಕಾಡಾನೆಗಳು ದಾಳಿ
namma chikmagalurchikamagalurHomeLatest News

ಮೂರು ಗುಂಪುಗಳಲ್ಲಿ 40ಕ್ಕೂ ಅಧಿಕ ಕಾಡಾನೆಗಳು ದಾಳಿ

Share
Share

ಮೂಡಿಗೆರೆ: ತಾಲ್ಲೂಕಿನ ಗೋಣಿಬಿಡು ಹೋಬಳಿಯ ಜಿ.ಹೊಸಳ್ಳಿ, ಹೊಸಪುರ, ಕಸ್ಕೇಬೈಲ್ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮೂರು ಗುಂಪುಗಳಲ್ಲಿ ಸುಮಾರು 40ಕ್ಕೂ ಅಧಿಕ ಕಾಡಾನೆಗಳು ದಾಳಿ ನಡೆಸಿದ್ದು ಭಯದ ವಾತಾವರಣ ಸೃಷ್ಟಿಯಾಗಿದೆ.

ಒಂದು ತಿಂಗಳಿನಿಂದ ಭುವನೇಶ್ವರಿ ಗುಂಪಿನ 25, ಬೀಟಮ್ಮ 2 ಗುಂಪಿನ 8 ಕಾಡಾನೆಗಳು ಜಿ. ಹೊಸಳ್ಳಿ, ಟಾಟಾ ಎಸ್ಟೇಟ್, ಸಿಲ್ವರ್ ಕಾನು ಎಸ್ಟೇಟ್, ಪಡಿಯ ಕಾಲೊನಿ, ಹೊಸಪುರ, ಹನುಮನಹಳ್ಳಿ ಗ್ರಾಮಗಳಲ್ಲಿ ನಿರಂತರವಾಗಿ ತಿರುಗಾಡುತ್ತಾ ಸಾರ್ವಜನಿಕರಿಗೆ ಉಪಟಳ ನೀಡುತ್ತಿವೆ.

ಬೀಟಮ್ಮ ಗುಂಪಿನ 8 ಆನೆಗಳು ಮೂರು ದಿನದಿಂದ ಹೊಸಪುರ ಗ್ರಾಮದಲ್ಲಿ ಬೀಡುಬಿಟ್ಟಿವೆ. ಭುವನೇಶ್ವರಿ ಗುಂಪಿನಿಂದ ಬೇರ್ಪಟ್ಟ ಮೂರು ಕಾಡಾನೆಗಳು ಜಿ. ಹೊಸಳ್ಳಿಯಿಂದ ಬುಧವಾರ ರಾತ್ರಿ ಹೊರಟು ಬೆಳಿಗ್ಗೆ 5.45ಕ್ಕೆ ಆನೆದಿಬ್ಬ ಗ್ರಾಮದ ಮೂಲಕ ತುಮಕೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಸ್ಕೇಬೈಲ್ ಗ್ರಾಮದ ಮೂಲಕ ಕಮ್ಮರಗೋಡು ಗ್ರಾಮದತ್ತ ಸಾಗಿವೆ.

ಭುವನೇಶ್ವರಿ ಹಾಗೂ ಬೀಟಮ್ಮ ಎರಡು ಗುಂಪಿನ ಕಾಡಾನೆಗಳು ಜಿ.ಹೊಸಳ್ಳಿ ವ್ಯಾಪ್ತಿಯಲ್ಲಿ ಬೀಡುಬಿಟ್ಟಿವೆ. ಗೋಣಿಬೀಡು ಹೋಬಳಿಯಲ್ಲಿಯೇ 40ಕ್ಕೂ ಅಧಿಕ ಕಾಡಾಣೆಗಳು ತಿರುಗಾಡುತ್ತಿದ್ದು, ರೈತರ ಬೆಳೆಯನ್ನು ದ್ವಂಸಗೊಳಿಸುತ್ತಿವೆ. ಅರಣ್ಯ ಇಲಾಖೆಯ ಕಾಡಾನೆ ಟಾಸ್ಕ್ ಪೋರ್ಸ್ ಸಿಬ್ಬಂದಿ ಕಾಡಾನೆಯಿರುವ ಪ್ರದೇಶದಲ್ಲಿ ಬೀಡು ಬಿಟ್ಟಿದ್ದಾರೆ. ಟಾಸ್ಕ್ ಪೋರ್ಸ್ ಸಿಬ್ಬಂದಿ ಅರ್ಧ ಗಂಟೆಗೊಮ್ಮೆ ವಾಟ್ಸ್‌ಆ್ಯಪ್‌ ಗ್ರೂಪ್ ಮೂಲಕ ಕಾಡಾನೆಗಳು ಇರುವ ಗ್ರಾಮಗಳ ಜನರಿಗೆ ಮಾಹಿತಿ ರವಾನಿಸುತ್ತಾ ಪಟಾಕಿ ಸಿಡಿಸಿ ಜನವಸತಿ ಪ್ರದೇಶದತ್ತ ಲಗ್ಗೆ ಇಡದಂತೆ ಎಚ್ಚರ ವಹಿಸಿದ್ದಾರೆ.

ಜಿ.ಹೊಸಳ್ಳಿ ಗ್ರಾಮದ ದೀಪಕ್, ರಾಜೇಗೌಡ, ಪೂರ್ಣೇಶ್, ವಿನಾಯಕ ಎಸ್ಟೇಟ್, ಶೈಲೇಶ್, ಯೋಗೇಶ್, ಹನುಮನಹಳ್ಳಿ ಗ್ರಾಮದ ಆದರ್ಶ, ಕಮ್ಮರಗೋಡು ಗ್ರಾಮದ ಅರುಣ್ ಸೆರಾವೋ, ಕಣ್ಣಪ್ಪ ಗೌಡ, ಕಸ್ಕೇಬೈಲ್ ಗ್ರಾಮದ ಬಿಳಿಗೌಡ ಸೇರಿದಂತೆ 25ಕ್ಕೂ ಹೆಚ್ಚು ರೈತರ ತೋಟಗಳನ್ನು ನಾಶಪಡಿಸಿವೆ. ವಾಟ್ಸ್‌ಆ್ಯಪ್‌ ಗ್ರೂಪ್ ನಲ್ಲಿ ಟಾಸ್ಕ್ ಫೋರ್ಸ್ ಸಿಬ್ಬಂದಿ ಸಂದೇಶ ರವಾನಿಸುತ್ತಿದ್ದರೂ ನಿರ್ದಿಷ್ಟವಾಗಿ ಯಾವ ಸ್ಥಳದಲ್ಲಿ ಕಾಡಾನೆ ಗುಂಪು ಇರುತ್ತವೆಂದು ತಿಳಿಯದೆ ಜನ ಕಂಗಾಲಾಗಿದ್ದಾರೆ.

ಅಗತ್ಯ ವಸ್ತುಗಳ ಖರೀದಿಗೆ ತೆರಳಲು ಜನ ಭಯಪಡುತ್ತಿದ್ದಾರೆ. ಸಂಜೆ 5 ರ ನಂತರ ಗೋಣಿಬಿಡು ಹೋಬಳಿಯ ಬಹುತೇಕ ಗ್ರಾಮಗಳಲ್ಲಿ ಜನರಿಲ್ಲದೆ ಬಿಕೋ ಎನ್ನುತ್ತಿವೆ. ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ರೂಪಿಸಬೇಕು ಎಂದು ಗ್ರಾಮಸ್ಥರು ಹಾಗೂ  ಗೋಣಿಬೀಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಜಿ.ಎಸ್.ದಿನೇಶ್ ಒತ್ತಾಯಿಸಿದರು.

More than 40 wild elephants attacked in three groups

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...