Home namma chikmagalur chikamagalur ಕಾಡಾನೆಗಳ ದಾಳಿಯಿಂದ 500ಕ್ಕೂ ಹೆಚ್ಚು ಅಡಿಕೆ ಗಿಡ ನಾಶ
chikamagalurHomeLatest Newsnamma chikmagalur

ಕಾಡಾನೆಗಳ ದಾಳಿಯಿಂದ 500ಕ್ಕೂ ಹೆಚ್ಚು ಅಡಿಕೆ ಗಿಡ ನಾಶ

Share
Share

ನರಸಿಂಹರಾಜಪುರ: ತಾಲ್ಲೂಕಿನ ಮಡಬೂರು ಗ್ರಾಮ ವ್ಯಾಪ್ತಿಯಲ್ಲಿ ಕಾಡಾನೆಗಳ ಹಿಂಡು ಬೀಡು ಬಿಟ್ಟಿದ್ದು, ಅಡಿಕೆ ಗಿಡಗಳನ್ನು ಧರೆಗುರುಳಿಸಿ ನಾಶ ಮಾಡಿವೆ. ಮಡಬೂರು ಗ್ರಾಮದ ನಿವಾಸಿ ವನಮಾಲಮ್ಮ ಅವರ ಅಡಿಕೆ ತೋಟಕ್ಕೆ ಹೆಚ್ಚು ಕಾಡಾನೆಗಳ ಹಿಂಡು ದಾಳಿ ಮಾಡಿ. ೩ರಿಂದ ೪ ವರ್ಷದ ಸುಮಾರು ೫೦೦ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ಧರೆಗುರುಳಿಸಿವೆ.

ಮಡಬೂರು ಗ್ರಾಮದ ವ್ಯಾಪ್ತಿಗೆ, ಆರಂಬಳ್ಳಿ ಮೀಸಲು ಅರಣ್ಯ ವ್ಯಾಪ್ತಿಗೆ ಭದ್ರಾ ವನ್ಯಜೀವಿ ವಿಭಾಗದಿಂದ ಭದ್ರಾ ಹಿನ್ನೀರು ದಾಟಿ ಐದಾರು ಅನೆಗಳು ಬಂದಿದ್ದವು. ಇಂದು ಮರಿ ಆನೆಗಳು ಸೇರಿ ಒಟ್ಟು ೧೬ ಕಾಡಾನೆಗಳು ಬಂದಿದ್ದು, ಅರಣ್ಯ ಸಿಬ್ಬಂದಿ ಹಾಗೂ ಆನೆ ಕಾರ್ಯಪಡೆ ತಂಡದ ಸಹಯೋಗದಲ್ಲಿ ಅವುಗಳನ್ನು ಅರಣ್ಯಕ್ಕೆ ಓಡಿಸುವ ಕಾರ್ಯಾಚರಣೆ ಮಾಡಲಾಗಿದೆ.

ಅಡಿಕೆ ಗಿಡ ನಾಶ ಮಾಡಿದ ತೋಟಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಲಾಗಿದೆ ಎಂದು ನರಸಿಂಹರಾಜಿಪುರ ವಲಯ ಅರಣ್ಯಾಧಿಕಾರಿ ಪ್ರವೀಣ್ ಕುಮಾರ್ ಮಾಹಿತಿ ನೀಡಿದರು. ಕಳೆದ ಹಲವು ದಿನಗಳಿಂದ ಕಡಿಮೆಯಾಗಿದ್ದ ಕಾಡಾನೆಗಳ ಹಾವಳಿ ಭದ್ರಾಹಿನ್ನೀರು ಕಡಿಮೆಯಾಗುತ್ತಿದ್ದಂತೆ ಹೆಚ್ಚಾಗಿದ್ದು, ಭದ್ರಾ ಹಿನ್ನೀರು ದಾಟಿ ಗ್ರಾಮಗಳತ್ತ ಕಾಡಾನೆಗಳು ದಾಂಗುಡಿ ಇಡುತ್ತಿರು ವುದು ರೈತರಲ್ಲಿ ಮತ್ತು ಗ್ರಾಮಸ್ಥರಲ್ಲಿ ಆತಂಕವನ್ನು ಹೆಚ್ಚಿಸಿದೆ.

ಕಾಡಾನೆಗಳನ್ನು ಅಭಯಾರಣ್ಯಕ್ಕೆ ಓಡಿಸುವ ಕೆಲಸ ಅರಣ್ಯ ಇಲಾಖೆಯವರು ಮಾಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

More than 500 areca nut plants destroyed by wild elephant attacks

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದ ಇಲಿಗೆ ‘ಹಣದ ಮೋಹ’

ಚಿಕ್ಕಮಗಳೂರು : ತುಮಕೂರಿನಲ್ಲಿ ಇತ್ತೀಚೆಗೆ ಇಲಿಯೊಂದು ಚಿನ್ನದ ಆಭರಣಗಳನ್ನು ಎಗರಿಸಿ ಸುದ್ದಿಯಾಗಿದ್ದರೆ, ಇತ್ತ ಚಿಕ್ಕಮಗಳೂರಿನಲ್ಲಿ ಮತ್ತೊಂದು ಚಾಣಾಕ್ಷ ಇಲಿ ಒಂದು ಹೆಜ್ಜೆ ಮುಂದೆ ಹೋಗಿ ನೇರವಾಗಿ ಹಣವನ್ನೇ ಕದ್ದು ತನ್ನ ಸಾಮ್ರಾಜ್ಯ...

ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಹೆಸರಿನಲ್ಲಿಯೂ ನಕಲಿ ವಾಟ್ಸಪ್ ಖಾತೆ

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಹ್ಯಾಕರ್‌ಗಳು ಮತ್ತು ವಂಚಕರು ವಾಟ್ಸಪ್, ಫೇಸ್‌ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಮುಖರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಜನರನ್ನು...

Related Articles

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...

ಮನೆಯ ಮೇಲ್ಛಾವಣಿಯ ಹೆಂಚು ತೆಗೆದು ನುಗ್ಗಿ ಸರಗಳ್ಳತನ

ನರಸಿಂಹರಾಜಪುರ: ಮನೆಯಲ್ಲಿ ದಂಪತಿ ಮಲಗಿದ್ದ ವೇಳೆ ಮೇಲ್ಛಾವಣಿಯ ಹೆಂಚು ತೆಗೆದು ಒಳನುಗ್ಗಿದ ಕಳ್ಳನೊಬ್ಬ ಮಹಿಳೆಯ ಕೊರಳಿನಲ್ಲಿದ್ದ...

ಕನಸು ಫೈನಾನ್ಸ್ ಹೆಸರಿನಲ್ಲಿ ₹1.60 ಲಕ್ಷ ವಂಚನೆ ಆರೋಪ

ಕಡೂರು: ಪ್ರತಿದಿನ ಉಳಿತಾಯದ ಹಣವನ್ನು ಸ್ವೀಕರಿಸಿ ಶೇ.7ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿ, ಹಣವನ್ನು ವಾಪಸ್ ನೀಡದೆ...