ಚಿಕ್ಕಮಗಳೂರು: ಗಾರೆ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿಯೊಬ್ಬರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಡೂರು ತಾಲ್ಲೂಕಿನ ಕಾಮೇನಹಳ್ಳಿ ಗ್ರಾಮದ ಕುಮಾರ ಎಂಬುವರು ರಾತ್ರಿ ತಮ್ಮ ಸ್ಕೂಟರ್ನಲ್ಲಿ ಬರುತ್ತಿದ್ದಾಗ, ಸಖರಾಯಪಟ್ಟಣದ ಬಾಣಾವಾರ ರಸ್ತೆಯ ಡಾಬಾ ಕ್ರಾಸ್ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ.
ಅಪಘಾತದ ರಭಸಕ್ಕೆ ಸ್ಕೂಟರ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಕ್ಕದ ಕಾಲುವೆಗೆ ಬಿದ್ದಿದೆ. ತೀವ್ರವಾಗಿ ಗಾಯಗೊಂಡ ಕುಮಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಸಂಬಂಧ ಮೃತರ ಅಣ್ಣ ಆಂಜನಪ್ಪ ನೀಡಿದ ದೂರಿನ ಮೇರೆಗೆ ಸಖರಾಯಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಅಪಘಾತ ಎಸಗಿ ಪರಾರಿಯಾದ ವಾಹನ ಚಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
Mortar worker dies in road accident
Leave a comment