Home namma chikmagalur chikamagalur ರೈತರ ತೋಟ-ಜಮೀನುಗಳಿಂದ ಮೋಟಾರ್ ಕಳ್ಳತನ
chikamagalurCrime NewsHomeLatest Newsnamma chikmagalur

ರೈತರ ತೋಟ-ಜಮೀನುಗಳಿಂದ ಮೋಟಾರ್ ಕಳ್ಳತನ

Share
Share

ಚಿಕ್ಕಮಗಳೂರು: ಸರಣಿ ಕಳ್ಳತನ ಪ್ರಕರಣಗಳು ವರದಿಯಾಗಿದ್ದು, ರೈತರ ತೋಟ ಹಾಗೂ ಜಮೀನುಗಳಿಂದ ಮೋಟಾರ್,ಸ್ಟಾರ್ಟರ್ ಬಾಕ್ಸ್ ಮತ್ತು ಕೇಬಲ್‌ಗಳನ್ನು ಕಳ್ಳರು ಎಗರಿಸಿದ್ದಾರೆ.

ಲಕ್ಯಾ ಹೋಬಳಿಯ ಪಾಯಗೊಂಡನಹಳ್ಳಿ ಗ್ರಾಮದ ಜಮೀನೊಂದರಲ್ಲಿ ಎಲೆಕ್ಟ್ರಿಕಲ್ ಕಾಂಟ್ರಾಕ್ಟರ್ ದೇವರಾಜು ಎಂಬುವರಿಗೆ ಸೇರಿದ ಅಡಕೆ ತೋಟಕ್ಕೆ ನುಗ್ಗಿದ ಕಳ್ಳರು, ಮೂರು ಕೊಳವೆ ಬಾವಿಗಳ ಮೋಟಾರ್ ಸ್ಟಾರ್ಟರ್ ಬಾಕ್ಸ್‌ಗಳನ್ನು ಕಳವು ಮಾಡಿದ್ದಾರೆ.

ಮೇ ೬ರ ರಾತ್ರಿಯಿಂದ ಮೇ ೯ರ ಬೆಳಗಿನ ಅವಧಿಯಲ್ಲಿ ಈ ಕೃತ್ಯ ನಡೆದಿದ್ದು, ಕಳುವಾದ ಸ್ವತ್ತಿನ ಅಂದಾಜು ಮೌಲ್ಯ ೫೨ಸಾವಿರ ರೂಪಾಯಿಗಳಾಗಿದೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳವಾಡಿ ಗ್ರಾಮದ ಬಸವರಾಜು ಎಂಬುವವರಿಗೆ ಸೇರಿದ ಜಮೀನಿನ ಕೊಳವೆ ಬಾವಿಯಿಂದ ೧೦ಸಾವಿರ ರೂಪಾಯಿ ಬೆಲೆಯ ೫೦ ಮೀಟರ್ ಉದ್ದದ ಮೋಟಾರ್ ಕೇಬಲನ್ನು ಕಳ್ಳವು ಮಾಡಲಾಗಿದೆ ಏಪ್ರಿಲ್ ೨೭ರ ಸಂಜೆಯಿಂದ ಏಪ್ರಿಲ್ ೨೮ರ ಬೆಳಗಿನ ಜಾವದ ಅವಧಿಯಲ್ಲಿ ಈ ಕಳ್ಳತನ ನಡೆದಿದೆ.ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ, ನಾಗರಹಳ್ಳಿ ಗ್ರಾಮದ ಸಣ್ಣಯ್ಯ ಎಂಬುವವರ ಜಮೀನಿನ ಕೊಳವೆ ಬಾವಿಗೆ ಅಳವಡಿಸಲಾಗಿದ್ದ ೧೦ಸಾವಿರ ಮೌಲ್ಯದ ೬೦ ಮೀಟರ್ ಉದ್ದದ ಮೋಟಾರ್ ಕೇಬಲನ್ನು ಕತ್ತರಿಸಿ ಕಳ್ಳರು ಕೈಚಳಕ ತೋರಿಸಿದ್ದಾರೆ.

Motore theft from farmers’ farms

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...