Home ಕಾಡಾನೆಗಳ ನಿಯಂತ್ರಣಕ್ಕೆ ಕೇಂದ್ರ ಸಚಿವರಲ್ಲಿ ಸಂಸದರ ಮನವಿ
HomechikamagalurLatest Newsnamma chikmagalur

ಕಾಡಾನೆಗಳ ನಿಯಂತ್ರಣಕ್ಕೆ ಕೇಂದ್ರ ಸಚಿವರಲ್ಲಿ ಸಂಸದರ ಮನವಿ

Share
Share

ಚಿಕ್ಕಮಗಳೂರು: ಜೀವ ಹಾನಿ, ಬೆಳೆ ಹಾನಿ ಜೊತೆಗೆ ಭಯಭೀತಿ ನಿಯಂತ್ರಣ ಮಾಡಲು ಚಿಕ್ಕಮಗಳೂರು ಜಿಲ್ಲೆಯಲ್ಲಿ ವೈಜ್ಞಾನಿಕ ರೀತಿಯಲ್ಲಿ ಶಾಶ್ವತ ಕಾರ್ಯ ಯೋಜನೆ ರೂಪಿಸುವುದಾಗಿ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಭೂಪೇಂದ್ರ ಯಾದವ್ ಭರವಸೆ ನೀಡಿರುವುದಾಗಿ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ದೆಹಲಿಯಲ್ಲಿ ಮಂಗಳವಾರ ಸಚಿವರನ್ನು ಭೇಟಿ ಮಾಡಿದ್ದ ಸಂದರ್ಭದಲ್ಲಿ ಆನೆ ದಾಳಿಯಿಂದ ಜಿಲ್ಲೆಯಲ್ಲಿ ಸಂಭವಿಸುತ್ತಿರುವ ಬೆಳೆ ಹಾನಿ, ಜೀವ ಹಾನಿಗಳ ಬಗ್ಗೆ ವಿವರವಾದ ಮಾಹಿತಿಗಳನ್ನು ಹಂಚಿಕೊಂಡಿದ್ದೇನೆ. ಸಚಿವರು ಮಾಹಿತಿಗಳನ್ನು ಆಲಿಸಿದ ನಂತರ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಅವರು ಬುಧವಾರ ನೀಡಿರುವ ಹೇಳಿಕೆಯಲ್ಲಿ ವಿವರಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಶೃಂಗೇರಿ, ಚಿಕ್ಕಮಗಳೂರು ತಾಲೂಕಿನ ವಿವಿಧ ಕಡೆಗಳಲ್ಲಿ ಆನೆ ದಾಳಿಯಿಂದ ೫ ಜನರು ಸಾವನ್ನಪ್ಪಿದ್ದಾರೆ. ಕಳೆದ ಒಂದು ವಾರದಲ್ಲೇ ಬನ್ನೂರಿನ ಅನಿತಾ, ಶೃಂಗೇರಿಯ ಸುಬ್ಬೇಗೌಡ ಸೇರಿದಂತೆ ಹಲವರು ಆನೆ ದಾಳಿಯಿಂದ ಮೃತಪಟ್ಟಿದ್ದಾರೆ. ಆನೆ ದಾಳಿಯಿಂದ ಹಳ್ಳಿಗಳ ಜನರು ತಮ್ಮ ಜಮೀನಿನಲ್ಲಿ ಕೃಷಿ ಚಟುವಟಿಕೆ ನಡೆಸಲು ಕಷ್ಟವಾಗುತ್ತಿದೆ. ಆತಂಕಗೊಂಡಿರುವ ಜನರು ನಿತ್ಯ ಭೀತಿಯಿಂದಲೇ ಬದುಕು ಸಾಗಿಸುತ್ತಿದ್ದಾರೆ ಎಂದು ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದಾಗಿ ಮಾಹಿತಿ ನೀಡಿದ್ದಾರೆ.

ಜಿಲ್ಲೆಯ ಜನರು ಭಯಭೀತರಾಗಿ ಮನೆಗಳಿಂದ ಹೊರ ಹೊರಡಲು ಹಿಂದೆ ಮುಂದೆ ನೋಡುವಂತ ಸ್ಥಿತಿ ನಿರ್ಮಾಣಗೊಂಡಿದೆ. ಬೆಳೆ ಹಾನಿ, ಪ್ರಾಣ ಹಾನಿಗಳನ್ನು ನಿಯಂತ್ರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆನೆ ದೊಡ್ಡಿ ನಿರ್ಮಾಣದಂತ ಯೋಜನೆಗಳನ್ನು ಜಂಟಿಯಾಗಿ ರೂಪಿಸಬೇಕು ಎಂದು ತಾವು ಮಾಡಿದ್ದ ಮನವಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿದ್ದಾರೆ ಎಂದು ತಿಳಿಸಿದ್ದಾರೆ.

ಸಮಸ್ಯೆಗಳನ್ನು ಆಲಿಸಿದ ಸಚಿವ ಭೂಪೇಂದ್ರ ಯಾದವ್ ಅವರು, ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅವರ ಮೂಲಕ ವರದಿ ಪಡೆದು, ಕಾರ್ಯ ಯೋಜನೆ ರೂಪಿಸಲಾಗುತ್ತದೆ. ಆನೆಗಳ ದಾಳಿ ಮತ್ತು ಅವುಗಳಿಂದ ಸಂಭವಿಸುವ ಯಾವುದೇ ಹಾನಿಗಳನ್ನು ಶಾಶ್ವತವಾಗಿ ಪರಿಹರಿಸಲಾಗುತ್ತದೆ ಎಂದು ಸಚಿವರು ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.

MPs appeal to Union Ministers for control of wild elephants

Share

Leave a comment

Leave a Reply

Your email address will not be published. Required fields are marked *

Don't Miss

ಕೊಳಮಗೆ ಬಳಿಯ ಭದ್ರಾ ನದಿಗೆ ಬಿದ್ದ ಪಿಕ್‌ಅಪ್: ಯುವಕ ಸಾವಿನ ಶಂಕೆ

ಕಳಸ: ಕಳಸ-ಕಳಕೋಡು ರಸ್ತೆಯ ಕೊಳಮಗೆ ಬಳಿ ಭದ್ರಾನದಿಗೆ ಗುರುವಾರ ಮಧ್ಯಾಹ್ನ ಪಿಕ್‌ಅಪ್ ವಾಹನ ಬಿದ್ದಿದ್ದು, ಯುವಕನೊಬ್ಬ ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ. ಗಣಪತಿಕಟ್ಟೆಯ ರಮೇಶ ಮತ್ತು ರವಿಕಲಾ ದಂಪತಿಯ ಮಗ ಶಮಂತ (22)...

ರೈತರಿಗೆ ರಸಗೊಬ್ಬರ ಕೊಡಲು ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ

ಕೊಪ್ಪ : ರೈತರಿಗೆ ರಸಗೊಬ್ಬರ ಕೊಡಲು ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಒಂದು ಚೀಲ ಗೊಬ್ಬರ ಬೇಕು ಅಂತ ಹೋದ್ರೆ ನಾಲ್ಕೈದು ಗಂಟೆ ಕಾಯಿಸುತ್ತಾರೆ. ರಾಜ್ಯದ ಕೃಷಿ ಸಚಿವರು ಕುಂಭಕರ್ಣ ನಿದ್ರೆಗೆ ಜಾರಿದ್ದಾರೆ...

Related Articles

ಅಜ್ಜಂಪುರ ಗರಿಗೆದರಿದ ಪಟ್ಟಣ ಪಂಚಾಯತಿ ಚುನಾವಣೆ

ಅಜ್ಜಂಪುರ:ಗ್ರಾಮ ಪಂಚಾಯಿತಿಯಾಗಿದ್ದನ್ನು ಮೇಲ್ದರ್ಜೆಗೆ ಏರಿಸಿ ಪಟ್ಟಣ ಪಂಚಾಯತಿಯಾಗಿ ಹಲವು ತಕರಾರುಗಳಿಂದಾಗಿ ಐದಾರು ವರ್ಷಗಳು ಚುನಾವಣೆ ನಡೆದಿಲ್ಲ....

ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಚಿರತೆ ದಾಳಿ

ಚಿಕ್ಕಮಗಳೂರು  ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಚಿರತೆ ದಾಳಿ ಇಬ್ಬರ ಮೇಲೆ ಅಟ್ಯಾಕ್ ಮಾಡಿದ ಚಿರತೆ ಕಡೂರು...

ಹಕ್ಕುಪತ್ರಕ್ಕಾಗಿ ಸಿ.ಟಿ.ರವಿ ಪ್ರತಿಭಟನೆ ಹಾಸ್ಯಾಸ್ಪದ

ಚಿಕ್ಕಮಗಳೂರು: : ಕಳೆದ ೧೯ ವರ್ಷದಲ್ಲಿ ಆಡಳಿತದಲ್ಲಿದ್ದಾಗ ಬಡವರಿಗೆ ನಿವೇಶನ, ಮನೆಯ ಹಕ್ಕುಪತ್ರ ನೀಡದ ಮಾಜಿ...

ಜಂಟಿ ಸಮೀಕ್ಷೆ ನಡೆಸಿ ಬೆಳೆ ಪರಿಹಾರ ನೀಡಲು ಜಿಲ್ಲಾ ಬೆಳೆಗಾರರ ಸಂಘ ಆಗ್ರಹ

ಚಿಕ್ಕಮಗಳೂರು: ರಾಜ್ಯಸರ್ಕಾರ ತೋಟಗಾರಿಕೆ, ಕೃಷಿ ಮತ್ತು ಕಾಫಿಮಂಡಳಿ ಅಧಿಕಾರಿಗಳನ್ನೊಳಗೊಂಡ ಜಂಟಿ ಸಮೀಕ್ಷೆ ನಡೆಸಿ ಆಯಾ ತಾಲ್ಲೂಕು...