Home namma chikmagalur chikamagalur ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ
chikamagalurHomeLatest Newsnamma chikmagalur

ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ

Share
Share

ಚಿಕ್ಕಮಗಳೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಮುಸ್ಲಿಮರು ಜಿಲ್ಲೆಯಾದ್ಯಂತ ಶುಕ್ರವಾರ ಶ್ರದ್ದಾಭಕ್ತಿಯಿಂದ ಆಚರಿಸಿದರು.

ಕಳೆದ ಎರಡು ದಿನಗಳಿಂದ ಉಪವಾಸವಿದ್ದ ಭಕ್ತರು ನಗರದ ಬಡಾವಣೆಗಳ ವಿವಿಧ ಮಸೀದಿಗಳಿಗೆ ಬೆಳಿಗ್ಗೆಯೇ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಸಂಜೆ ನಗರದ ಬಡಮಕಾನ್ ಮಸೀದಿಯಿಂದ ಆಜಾದ್ ಪಾರ್ಕ್ ವೃತ್ತದ ತನಕ ಕಪ್ಪುಬಟ್ಟೆ ಧರಿಸಿ ಶೋಕದೊಂದಿಗೆ ಮೆರವಣಿಗೆ ನಡೆಸಿದರು.

ತಮಿಳು ಕಾಲೊನಿ, ಷರೀಪ್ ಗಲ್ಲಿ ಸಹಿತ ವಿವಿಧೆಡೆಗಳಲ್ಲಿ ಪಂಜಾ ಮೆರವಣಿಗೆ ನೆರವೇರಿತು. ನೆರೆದಿದ್ದ ಜನ ಪಂಜಾಗೆ ಪ್ರಾರ್ಥನೆ ಸಲ್ಲಿಸಿದರು. ನಗರದ ಹಲವೆಡೆ ಭಕ್ತರಿಗೆ ಪಾನಕ ವ್ಯವಸ್ಥೆ ಮಾಡಲಾಗಿತ್ತು.

ನರಸಿಂಹರಾಜಪುರ ತಾಲ್ಲೂಕಿನಾದ್ಯಂತ ಹಿಂದೂ-ಮುಸ್ಲಿಂ ಭಾವೈಕ್ಯದ ಸಂಕೇತವಾದ ಮೊಹರಂ ಹಬ್ಬವನ್ನು ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು.

ಮೊಹರಂ ಹಬ್ಬದ ಪ್ರಯುಕ್ತ ಪಟ್ಟಣದ ಗುರುಭವನದ ಸಮೀಪ ಹಾಗೂ ಪ್ರವಾಸಿಮಂದಿರದ ವೃತ್ತದ ಸಮೀಪ ಎರಡು ಕಡೆ ಅಲಾಬಿ ದೇವರ ವಿಗ್ರಹವನ್ನು ಪ್ರತಿಷ್ಠಾಪಿಸಲಾಗಿತ್ತು.

ಗುರುವಾರ ರಾತ್ರಿ ಭಕ್ತರು ಸಕ್ಕರೆ, ಉದುಬತ್ತಿ ಅರ್ಪಿಸಿ ವಿಶೇಷ ಪೂಜೆ ಸಲ್ಲಿಸಿದರು. ಇಷ್ಟಾರ್ಥಗಳು ಈಡೇರಿದವರು ಬೆಳ್ಳಿಯ ಪರಿಕರಗಳನ್ನು ನೀಡಿ ಹರಕೆ ತೀರಿಸಿದರು.

ಇಷ್ಟಾರ್ಥಗಳ ಈಡೇರಿಕೆಗಾಗಿ ಪ್ರಾರ್ಥನೆ ಸಲ್ಲಿಸಿದರು. ರಾತ್ರಿ ಅಲಾಬಿ ದೇವರ ಸನ್ನಿಧಿಯಲ್ಲಿ ಸಾಮೂಹಿಕ ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು. ನಂತರ ಕೆಂಡಾರ್ಚನೆ ನಡೆಯಿತು.

Muharram festival celebrated across the district

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...