Home Latest News ಶಾಸಕ ಶ್ರೀನಿವಾಸ್ ಬೆಂಬಲಿಗ – ಪುರಸಭಾ ಸದಸ್ಯ ರಂಗನಾಥ್ ಲೋಕಾಯುಕ್ತ ಬಲೆಗೆ
Latest NewsCrime NewsHomenamma chikmagalurTarikere

ಶಾಸಕ ಶ್ರೀನಿವಾಸ್ ಬೆಂಬಲಿಗ – ಪುರಸಭಾ ಸದಸ್ಯ ರಂಗನಾಥ್ ಲೋಕಾಯುಕ್ತ ಬಲೆಗೆ

Share
Share

ತರೀಕೆರೆ: ಮಾಜಿ ಪುರಸಭಾ ಅಧ್ಯಕ್ಷ ಹಾಲಿ ಸದಸ್ಯ ರಂಗನಾಥ್ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಶಾಸಕ ಶ್ರೀನಿವಾಸ್ ಅಪ್ತ ಬಳಗದಲ್ಲಿ ಗುರ್ತಿಸಿ ಕೊಂಡಿದ್ದ ರಂಗನಾಥ್ ತರೀಕೆರೆ ಪಟ್ಟಣದ ಮೂರನೇ ವಾರ್ಡ್‌ ನಿಂದ ಕಾಂಗ್ರೆಸ್ ಪಕ್ಷದಿಂದ ಗೆದ್ದಿದ್ದ. ಸಾರ್ವಜನಿಕರಿಗೆ ಕಿರುಕುಳ ನೀಡಿ ಹಣ ಕೀಳುತ್ತಿದ್ದ ಎಂಬ ವ್ಯಾಪಕ ದೂರುಗಳಿದ್ದವು.

ಸಾರ್ವಜನಿಕರು ಮನೆ ಕಟ್ಟಲು ಪ್ರಾರಂಭಿಸಿದರೆ ಸಾಕು ಅಲ್ಲಗೆ ಬಂದು ಹಣ ಕಿತ್ತುಕೊಳ್ಳುತ್ತಿದ್ದ ಎಂದು ಸಾರ್ವಜನಿಕರು ದೂರಿದ್ದಾರೆ.

ಮಾಜಿ ಪುರಸಭಾ ಸದಸ್ಯ ಟಿ.ಕೆ.ರಮೇಶ್ ಎಂಬುವರಿಂದ ಗ್ರಾನೈಟ್ ಅಂಗಡಿ ಪರವಾನಿಗೆ ಪಡೆಯಲು ಒಂದು ಲಕ್ಷ ರೂ ಲಂಚ ಕೇಳಿ ಇಂದು ಬೆಳಗ್ಗೆ ಐವತ್ತು ಸಾವಿರ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸ್ ರು ಬಂಧಿಸಿದ್ದಾರೆ.

ಲೋಕಾಯುಕ್ತ ಉಪಾಧೀಕ್ಷರಾದ ತಿರುಮಲೇಶ್ ನೇತೃತ್ವದಲ್ಲಿ ಮುಖ್ಯ ಪೊಲೀಸ್ ಪೇದೆಗಳಾದ ಸಿ. ಲೋಕೇಶ್ ವಿಜಯಭಾಸ್ಕರ್ ಪೇದೆಗಳಾದ ಪ್ರಸಾದ್.ಎಂ,ಚಂದ್ರಶೆಟ್ಟಿ,ಮಜೀಬ್ ಖಾನ್,ಶ್ರೀಧರ್, ಸವಿನಯ,ರವಿಚಂದ್ರ,ಮಲ್ಲಿಕಾರ್ಜುನ್ ಮತ್ತು ಚಂದನ್ ಕುಮಾರ್ ದಾಳಿ ನಡೆಸಿ ರಂಗನಾಥ್ ನನ್ನು ಬಂಧಿಸಿದ್ದಾರೆ.

ಸಾರ್ವಜನಿಕರು ಇನ್ನೂ ಕೆಲವು ಸದಸ್ಯರು ವಸೂಲಿ ಯಲ್ಲಿ ನಿರತರಾಗಿದ್ದಾರೆ ಎಂದು ಆರೋಪ ಮಾಡಿ ಅಮೃತ್2 ಯೋಜನೆ ಮತ್ತು ಪೈಪ್ ಲೈನ್ ಅಳವಾಡಿಸಿದಾಗ ಹಾಗೂ ಲೇಔಟ್ ನಿರ್ಮಾಣ ಮಾಡುವವರಿಂದ ವಸೂಲಿ ಮಾಡಿದ್ದಾರೆ ಎಂದು ದೂರಿದ್ದಾರೆ.

Municipal council member Ranganath falls into Lokayukta trap

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...