Home namma chikmagalur ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ – ಮೂವರು ಆರೋಪಿಗಳ ಬಂಧನ
namma chikmagalurchikamagalurCrime NewsHomeLatest News

ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ – ಮೂವರು ಆರೋಪಿಗಳ ಬಂಧನ

Share
Share

ಚಿಕ್ಕಮಗಳೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ವ್ಯಕ್ತಿಯೊಬ್ಬರನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿ ಪೆಟ್ರೋಲ್ ಸುರಿದು ಸುಟ್ಟು ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಕಡೂರು ಪೊಲೀಸರು ಬಂದಿಸಿ, ಕೃತ್ಯಕ್ಕೆ ಬಳಸಿದ ಓಮಿನಿ ಕಾರನ್ನು ವಶಕ್ಕೆ ಪಡೆದಿದ್ದಾರೆ.

ಕಡೂರು ಪಟ್ಟಣದ ಪ್ರದೀಪ್ ಆಚಾರಿ(೩೩), ಕಡೂರು ಪಟ್ಟಣ ಕೋಟೆ ಬಡಾವಣೆಯ ಸಿದ್ದೇಶ್(೩೫), ವಿಶ್ವಾಸ್ (೧೮) ಬಂಧಿತ ಆರೋಪಿಗಳು, ಜೂ.೨ರಂದು ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಂಸಾಗರ ಗೇಟ್ ಬಳಿ ಅನಾಮಧೇಯ ವ್ಯಕ್ತಿಯ ದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮೃತದೇಹವು ಕೊಲೆ ಮಾಡಿ ಸುಟ್ಟ ಸ್ಥಿತಿಯಲ್ಲಿ ದೊರೆತ್ತಿದ್ದು, ಕಡೂರು ಪೊಲೀಸ್ ಠಾಣೆಯಲ್ಲಿ ಶ್ರೀನಿವಾಸ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು.

ಮೇ.೩೧ರಂದು ಕಡೂರು ಪಟ್ಟಣದ ಕೋಟೆ ಬಡಾವಣೆಯ ಮೀನಾಕ್ಷಿ ಎಂಬುವರು ತಮ್ಮ ಗಂಡ ಸುಬ್ರಹ್ಮಣ್ಯ ನಾಪತ್ತೆಯಾಗಿ ರುವ ಬಗ್ಗೆ ದೂರು ದಾಖಲಿಸಿದ್ದರು. ಎರಡು ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ ಕಡೂರು ಠಾಣೆ ಪೊಲೀಸರು, ಕೊಲೆಯಾಗಿ ಸುಟ್ಟಸ್ಥಿತಿಯಲ್ಲಿ ದೊರೆತ ಮೃತದೇಹ ಮತ್ತು ಮೀನಾಕ್ಷಿ ಅವರ ಗಂಡ ಸುಬ್ರಹ್ಮಣ್ಯ ಎಂಬುದು ಖಾತ್ರಿ ಪಡಿಸಿಕೊಂಡ ಪೊಲೀಸರು ಆರೋಪಿಗಳಾದ ಪ್ರದೀಪ್ ಆಚಾರಿ, ಸಿದ್ದೇಶ್, ವಿಶ್ವಾಸ್‌ನನ್ನು ವಶಕ್ಕೆ ಪಡೆದು ವಿಚಾ ರಣೆಗೆ ಒಳಪಡಿಸಿದಾಗ ಅಕ್ರಮ ಸಂಬಂಧದಿಂದ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ.

ಪ್ರದೀಪ್ ಆಚಾರಿ ಮತ್ತು ಸುಬ್ರಹ್ಮಣ್ಯ ಅವರ ಪತ್ನಿ ಮೀನಾಕ್ಷಿ ನಡುವೆ ಅಕ್ರಮ ಸಂಬಂಧವಿದ್ದು, ಸುಬ್ರಹ್ಮಣ್ಯ ಅಕ್ರಮ ಸಂಬಂಧಕ್ಕೆ ಅಡ್ಡಿಪಡಿಸುತ್ತಿದ್ದ ಹಿನ್ನಲೆಯಲ್ಲಿ ಪ್ರದೀಪ್ ಆಚಾರಿ ಸಿದ್ದೇಶ್ ಮತ್ತು ವಿಶ್ವಾಸ್‌ಗೆ ಹಣದ ಆಸೆ ತೋರಿಸಿ ಮೇ.೩೧ರಂದು ಕಂಸಾಗರ ಗೇಟ್ ಬಳಿ ಸಿದ್ದೇಶ್ ಅವರ ಮಾರತಿ ಓಮಿನಿಯಲ್ಲಿ ಸುಬ್ರಹ್ಮಣ್ಯನನ್ನು ಕೂರಿಸಿಕೊಂಡು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿ ನಂತರ ಮೃತದೇಹವನ್ನು ಸೌದೆ ಮತ್ತು ಪೆಟ್ರೋಲ್ ಬಳಸಿ ಸುಟ್ಟು ಹಾಕಲು ಯತ್ನಿಸಿರುವುದು ತಿಳಿದು ಬಂದಿದೆ.

ಮೂವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಕೃತ್ಯಕ್ಕೆ ಬಳಸಿದ ಮಾರುತಿ ಓಮಿನಿ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿಗಳನ್ನು ಪತ್ತೆ ಕಾರ್ಯಾಚರಣೆಯಲ್ಲಿ ಭಾಗಿಯಾದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|ವಿಕ್ರಮ ಅಮಟೆ ಶ್ಲಾಘೀಸಿ ಬಹುಮಾನ ಘೋಷಿಸಿದ್ದಾರೆ.

Murder by hanging with rope – Three accused arrested

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...