Home namma chikmagalur ಶಾಸಕಿ ನಯನಮೋಟಮ್ಮ ವಿರುದ್ಧ ಮುಸ್ಲಿಮರು ಕೊತ ಕೊತ. !
namma chikmagalurchikamagalurHomeLatest News

ಶಾಸಕಿ ನಯನಮೋಟಮ್ಮ ವಿರುದ್ಧ ಮುಸ್ಲಿಮರು ಕೊತ ಕೊತ. !

Share
Share

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನಮೋಟಮ್ಮನವರ ನಡವಳಿಕೆ, ವರ್ತನೆಯ ಬಗ್ಗೆ ಮುಸ್ಲಿಮ್ ಮುಖಂಡರು ಕೊತ,ಕೊತ ಕುದಿಯುತ್ತಿದ್ದಾರೆ. ಚಿಕ್ಕಮಗಳೂರು ಪ್ರವಾಸಿ ಮಂದಿರದಲ್ಲಿ ಸಭೆ ಸೇರಿ ನಯನಮೋಟಮ್ಮನವರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು ಎಂದು ತಿಳಿದುಬಂದಿದೆ.

ಕಾಂಗ್ರೆಸ್ ಮುಖಂಡರಾದ ಮಹಮ್ಮದ್, ಹನೀಫ್ ಸಿ.ಡಿ.ಎ ಅಧ್ಯಕ್ಷ ನಯಾಜ್ ಮತ್ತು ವಕ್ತಾರ ಹೆಚ್.ಹೆಚ್.ದೇವರಾಜ್ ಬಳಿ ತಮ್ಮ ನೋವು ಮತ್ತು ಆಕ್ರೋಶ ವ್ಯಕ್ತಪಡಿಸಿ ಕ್ರಮ ತೆಗೆದುಕೊಳ್ಳಲು ಆಗ್ರಹಿಸಿದ್ದಾರೆ. ಶಾಸಕರಾದಗಿನಿಂದ ಉಡಾಪೆಯಾಗಿ ನಡೆದುಕೊಳ್ಳುವ ನಯನಮೋಟಮ್ಮನವರ ಗೆಲುವಿಗೆ ಶ್ರಮಿಸಿದ್ದಕ್ಕೆ ಸಾರ್ಥಕವಾಯಿತು ಎಂದು ತಮ್ಮ ದುಃಖ ದುಮ್ಮಾನಗಳನ್ನು ಹೇಳಿದ್ದಾರೆ.

ಬಿಜೆಪಿ ಮತ್ತು ಭಜರಂಗದವರ ಮಾತು ಕೇಳುವ ಶಾಸಕರು ಪ್ರಮೋದ್ ಮುತಾಲಿಕ್ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ್ದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿದ್ದಲ್ಲದೆ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಅಂಶುಮಂತ್ ತುಟಿ ಬಿಚ್ಚದಿರುವುದು ಏಕೆ ಇನ್ನೂ ಮುಂದೆ ಹೋಗಿ ಪಕ್ಷದ ಪ್ರದಾನ ಕಾರ್ಯದರ್ಶಿ ಶಿವಾನಂದಸ್ವಾಮಿ ನಯನರಿಗೆ ಪತ್ರ ಬರೆದು ಪ್ರಶಂಸೆ ಮಾಡಿರುವುದು ಕಾಂಗ್ರೆಸ್ ನಂಬಿದ ನಮಗೆ ಘಾಸಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾನ್ಯ ಜನರು ಶಾಸಕಿ ನಯನಮೋಟಮ್ಮನವರನ್ನು ಮಾತನಾಡಿಸಲು ಸಾಧ್ಯವಿಲ್ಲ. ಎರಡು ವರ್ಷಗಳಿಂದ ಸಹಿಸಿಕೊಂಡು ಬಂದಿದ್ದೇವೆ ಇನ್ನೂ ಸಹಿಸಲು ಸಾಧ್ಯವಿಲ್ಲ. ಈ ಬಗ್ಗೆ ಅವರ ಮೇಲೆ ಪಕ್ಷ ಕ್ರಮ ಕೈಗೊಳ್ಳ ಬೇಕು. ಈ ಸಂಬಂಧ ಎಐಸಿಸಿ ಮತ್ತು ಕೆಪಿಸಿಸಿ ಹಾಗೂ ರಾಹುಲ್ ಗಾಂಧಿಯವರಿಗೆ ಪತ್ರ ಬರೆಯುವುದರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಳಿ ನಿಯೋಗ ಹೋಗಿ ದೂರು ಸಲ್ಲಿಸುವ ತೀರ್ಮಾನಕ್ಕೆ ಬರಲಾಯಿತು ಎಂದು ತಿಳಿದುಬಂದಿದೆ.

ಸಿ.ಡಿ.ಎ ಅಧ್ಯಕ್ಷರಾದ ನಯಾಜ್ ಮೊದಲು ಜಿಲ್ಲಾ ಕಾಂಗ್ರೆಸ್ ಗೆ ಸಭೆ ನಡೆಸಿ ನಯನಮೋಟಮ್ಮನವರನ್ನು ಕರೆಯಿಸಿ ಮಾತನಾಡುವ ಸಲಹೆ ನೀಡಿದರು ಎಂದು ತಿಳಿದುಬಂದಿದೆ.

ನಮ್ಮ ಭಾವನೆಗಳಿಗೆ ಸ್ಪಂದಿಸಿರುವ ದಲಿತ ಸಂಘಟನೆ ಗಳು ರೈತ ಸಂಘ ಮತ್ತು ಹೆಚ್.ಹೆಚ್.ದೇವರಾಜ್ ರವರಿಗೆ ಧನ್ಯವಾದ ಹೇಳಿದರು ಎಂದು ತಿಳಿದುಬಂದಿದೆ. ಅಲ್ದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಜಾಬೀರ್.ಮೂಡಿಗೆರೆ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಅಕ್ರಮ್ ಹಾಜಿ ಮುಖಂಡರಾದ ಸಿ.ಕೆ ಇಬ್ರಾಹಿಂ ಮತ್ತಿತರರು ಇದ್ದರೂ ಎಂದು ತಿಳಿದುಬಂದಿದೆ.

Muslims are killing each other against MLA Nayana Motamma. !

Share

Leave a comment

Leave a Reply

Your email address will not be published. Required fields are marked *

Don't Miss

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ ಡಿಎಚ್ ಒ ಆಗಿದ್ದ ಅಶ್ವಥ್ ಬಾಬು ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಸಂತಾನೋತ್ಪತ್ತಿ...

ಹಸಿರು ಚಾದರ್ ಅರ್ಪಿಸುವುದು ಹೊಸದಾಗಿ ಸೃಷ್ಟಿಸಿದ ಆಚರಣೆಯಲ್ಲ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ದರ್ಗಾದ ಐತಿಹಾಸಿಕ ಸ್ವರೂಪ, ಧಾರ್ಮಿಕ ಆಚರಣೆಗಳು ಹಾಗೂ ಭಕ್ತರ ಹಕ್ಕುಗಳ ಕುರಿತು ಸಯ್ಯದ್ ಬುಡನ್ ಶಾ ಖಾದ್ರಿ ವಂಶಸ್ಥರು ಸ್ಪಷ್ಟನೆಯನ್ನು ನೀಡಿದ್ದಾರೆ. ಇತ್ತೀಚೆಗೆ...

Related Articles

ಕಳಸದಲ್ಲಿ ಕಾಡುಕೋಣ ದಾಳಿಗೆ ಮಹಿಳೆ ಬಲಿ

ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಸಮೀಪ ಕಾಡುಕೋಣ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ...

ರೈತ ಸಂಘ-ಹಸಿರು ಸೇನೆ ಸಂಘಟನೆಗೆ ನೂತನ ಪದಾಧಿಕಾರಿಗಳ ನೇಮಕ

ಚಿಕ್ಕಮಗಳೂರು: ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಗೆ ನೂತನ...

ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಂಗಾರು ಮಳೆ ತಡವಾಗಿ ಆರಂಭಗೊಂಡಿದ್ದರೂ ಇದೀಗ ಭರ್ಜರಿಯಾಗಿ ಸುರಿಯುತ್ತಿದ್ದು, ಮಲೆನಾಡು ಭಾಗದಲ್ಲಿ ಭಾರೀ...

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್...