Home namma chikmagalur ಹಿಂದೂ ಯುವಕನ ಅಂತ್ಯ ಸಂಸ್ಕಾರ ನಡೆಸಿದ ಮುಸ್ಲಿಮರು !
namma chikmagalur

ಹಿಂದೂ ಯುವಕನ ಅಂತ್ಯ ಸಂಸ್ಕಾರ ನಡೆಸಿದ ಮುಸ್ಲಿಮರು !

Share
Muslims cremated a Hindu youth chikkamagaluru
Share

ಜಾತಿ-ಧರ್ಮದ ಹೆಸರಲ್ಲಿ ಹಗಜಗ್ಗಾಟಗಳು ನಡೆಯುತ್ತಿರುವ ಹೊತ್ತಲ್ಲೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಕ್ಕಮಕ್ಕಿ ಗ್ರಾಮದಲ್ಲಿ ಮೃತ ಹಿಂದೂ ವ್ಯಕ್ತಿಯ ಹೆಗಲಿಗೆ ಮುಸ್ಲಿಂ ಯುವಕರು ಹೆಗಲು ಕೊಟ್ಟು ಹಿಂದೂ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನಡೆಸಿದ್ದಾರೆ. 20 ವರ್ಷಗಳ ಹಿಂದೆಯೇ ಮನೆ ಬಿಟ್ಟು ಬಂದಿದ್ದ ವ್ಯಕ್ತಿ ಚಕ್ಕಮಕ್ಕಿಯ ಇಮ್ತಿಯಾಜ್ ಎಂಬುವವರ ನ್ಯೂ ಮಂಗಳೂರು ಹೋಟೆಲ್ ನಲ್ಲಿ ಕೆಲಸ ಮಾಡಿಕೊಂಡಿದ್ದನು.‌

ದುರದೃಷ್ಟವಶಾತ್ ಆ ವ್ಯಕ್ತಿ ಹೃದಯಘಾತದಿಂದ ಮೃತಪಟ್ಟಿದ್ದನು. ವರ್ಷಗಳ ಹಿಂದೆಯೇ ಮನೆ ಬಿಟ್ಟಿದ್ದರಿಂದ ಆತನಿಗೆ ಯಾರ ಸಂಪರ್ಕವೂ ಇರಲಿಲ್ಲ. ಮೃತ ವ್ಯಕ್ತಿಯ ಮೊಬೈಲ್ ಪರಿಶೀಲಿಸಿ ಯುವಕರು ಸಂಬಂಧಿಗಳಿಗೆ ಕರೆ ಮಾಡಿ ಮಾಹಿತಿ ನೀಡುತ್ತಾರೆ. ಮೃತ ವ್ಯಕ್ತಿಗೆ ಇಬ್ಬರು ಪತ್ನಿಯರಿದ್ದು, ಮೊದಲ ಪತ್ನಿ ಮೃತಪಟ್ಟಿರುತ್ತಾರೆ. ಎರಡನೇ ಪತ್ನಿಗೆ ಕರೆ ಮಾಡಿ ವಿಷಯ ತಿಳಿಸಿದರೂ ಯಾರು ಬರುವುದಿಲ್ಲ.

ಕೊನೆಗೆ ಮೊದಲ ಪತ್ನಿಯ ಮಗ ಆಳ್ವಾಸ್ ಕಾಲೇಜಿನಲ್ಲಿ ಇರುವುದನ್ನು ಖಚಿತ ಪಡಿಸಿಕೊಂಡ ಯುವಕರು ಕೊನೆಗೆ ಮಗನ ಕೈಯಲ್ಲೇ ತಂದೆಯ ಅಂತ್ಯ ಸಂಸ್ಕಾರ ಮಾಡಿಸಿದ್ದಾರೆ.‌ ಚಕ್ಕಮಕ್ಕಿಯ ಮುಸ್ಲಿಂ ಯುವಕರು ಹಾಗೂ ಸಮಾಜ ಸೇವಕ ಆರಿಫ್ ಯುವಕರ ಜೊತೆಗೆ ನಿಂತು
ಹಿಂದೂ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ.

ಅಂತ್ಯಕ್ರಿಯೆ ನೆರವೇರಿಸಲು ಮೂಡಿಗೆರೆಯ ರುದ್ರಭೂಮಿಗೆ ಪಾರ್ಥಿವ ಶರೀರವನ್ನು ತೆಗೆದುಕೊಂಡು ಹೋಗಿದ್ದಾರೆ . ಈ ವೇಳೆ ಮುಸ್ಲಿಂ ಬಾಂಧವರೇ ಶವಕ್ಕೆ ಹೆಗಲು ಕೊಟ್ಟು ಹಿಂದೂ ಸಂಪ್ರದಾಯದಂತೆ ಪೂಜೆ ನೆರವೇರಿಸಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...