Home namma chikmagalur ಬಾಲಕಿಯರ ವಿಭಾಗದಲ್ಲಿ ಮೈಸೂರು ತಂಡ ಪ್ರಥಮ ಸ್ಥಾನ
namma chikmagalurHomeLatest NewsTarikere

ಬಾಲಕಿಯರ ವಿಭಾಗದಲ್ಲಿ ಮೈಸೂರು ತಂಡ ಪ್ರಥಮ ಸ್ಥಾನ

Share
Share

ತರೀಕೆರೆ: ಪಟ್ಟಣದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ವಿವಿಧ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ 14 ಹಾಗೂ 17 ವರ್ಷ ವಯೋಮಿತಿಯೊಳಗಿನ ಬಾಲಕರ ಮತ್ತು ಬಾಲಕಿಯರ ಹೊನಲು ಬೆಳಕಿನ ರಾಜ್ಯ ಮಟ್ಟದ ವಾಲಿಬಾಲ್ ಟೂರ್ನಿಯ 14 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಮೈಸೂರು ತಂಡ ಪ್ರಥಮ ಸ್ಥಾನ ಗೆದ್ದುಕೊಂಡಿದೆ.

ಬೆಳಗಾವಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. 17 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಮೈಸೂರು ತಂಡ ಪ್ರಥಮ, ಬೆಂಗಳೂರು ತಂಡ ದ್ವಿತೀಯ ಸ್ಥಾನ ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದವು.

14 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಮೈಸೂರು ತಂಡ ಪ್ರಥಮ, ಕಲಬುರಗಿ ತಂಡ ದ್ವಿತೀಯ, 17 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಬೆಂಗಳೂರು ಪ್ರಥಮ, ಮೈಸೂರು ದ್ವಿತೀಯ ಸ್ಥಾನ ಗಳಿಸಿ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದವು.

ಶಾಸಕ ಜಿ.ಎಚ್.ಶ್ರೀನಿವಾಸ್ ಬಹುಮಾನ ವಿತರಿಸಿದರು. ಡಿಡಿಪಿಐ ತಿಮ್ಮರಾಜು, ಎ ಸಿ ಎನ್.ವಿ.ನಟೇಶ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಫಾಲಾಕ್ಷಮೂರ್ತಿ, ಬಿಇಒ ಪರಶುರಾಮಪ್ಪ, ರಾಜ್ಯ ಸರ್ಕಾರಿ ನೌಕರರ ಸಂಘದ ತರೀಕೆರೆ ತಾಲ್ಲೂಕು ಘಟಕದ ಅಧ್ಯಕ್ಷ ಅನಂತಪ್ಪ, ಪ್ರಧಾನ ಕಾರ್ಯದರ್ಶಿ ದೇವರಾಜ್, ಅಜ್ಜಂಪುರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪುಟ್ಟಸ್ವಾಮಿ, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ವೇದಮೂರ್ತಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಚಂದ್ರಶೇಖರ್ ಭಾಗವಹಿಸಿದ್ದರು.

Mysore team wins first place in girls’ category at state-level volleyball tournament

Share

Leave a comment

Leave a Reply

Your email address will not be published. Required fields are marked *

Don't Miss

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್ ಎಂಬುವವರ ಮನೆ ಮುಂದೆ ನಿಲ್ಲಿಸಲಾಗಿದ್ದ ಆಟೋರಿಕ್ಷಾ ಹಾಗೂ ಅವರ ಮನೆಯ ಮೇಲೆ ಬೃಹತ್ ಮರವೊಂದು...

ಜಿಲ್ಲೆಯ 5 ತಾಲೂಕುಗಳಲ್ಲಿ ಶಾಲೆ – ಅಂಗನವಾಡಿಗಳಿಗೆ ರಜೆ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ವರುಣನ ಆರ್ಭಟ ಮುಂದುವರಿದಿದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ. ನಾಳೆ...

Related Articles

ಕಡೂರು ತಾಲ್ಲೂಕಿನಲ್ಲಿ ಬರದ ಆತಂಕ

ಕಡೂರು: ಮುಂಗಾರು ಮಳೆಯ ಕೊರತೆಯಿಂದ ಕಡೂರು ತಾಲ್ಲೂಕಿನಲ್ಲಿ ಬರದ ಆತಂಕ ಎದುರಾಗಿದ್ದು, ಕುಡಿಯುವ ನೀರು, ಜಾನುವಾರುಗಳ...

ಜು.21ಕ್ಕೆ ಕೊಪ್ಪಳದಲ್ಲಿ ಬೃಹತ್ ರೈತ ಸಮಾವೇಶ

ಚಿಕ್ಕಮಗಳೂರು : ೪೬ನೇ ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಕೊಪ್ಪಳದಲ್ಲಿ ಬೃಹತ್ ರೈತ ಸಮಾವೇಶವನ್ನು ಜು.೨೧...

ಅಕ್ರಮವಾಗಿ ಸಾಗಿಸುತ್ತಿ ಕಾಡುಜಾತಿಯ ಮರಗಳ ದಿಮ್ಮಿಗಳ ವಶ

ಮೂಡಿಗೆರೆ: ಕಾಡುಜಾತಿಯ ಮರಗಳ ದಿಮ್ಮಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದುದನ್ನು ತಾಲ್ಲೂಕಿನ ಹಂಡುಗುಳಿ ಗ್ರಾಮದ ಸಮೀಪ ಅರಣ್ಯ ಇಲಾಖೆ...

ಜವಾಹರ್ ನವೋದಯ ವಿದ್ಯಾಲಯದಲ್ಲಿ ಪ್ರವೇಶಕ್ಕೆ ಆಹ್ವಾನ

ಚಿಕ್ಕಮಗಳೂರು:  ಸೀಗೋಡುವಿನ ಪಿ.ಎಂ.ಶ್ರೀ ಜವಾಹರ ನವೋದಯ ವಿದ್ಯಾಲಯವು  ವಸತಿಯುತ ಸಹಶಿಕ್ಷಣ ವಿದ್ಯಾಲಯವಾಗಿದ್ದು, ಗ್ರಾಮೀಣ ಪ್ರದೇಶದ ಪ್ರತಿಭಾವಂತ...