Home namma chikmagalur ಜಾನಪದ ಗಾರುಡಿಗ ನಾಗರಾಜಪ್ಪಗೆ ಲಭಿಸಿದ ಅಕಾಡೆಮಿ ಪ್ರಶಸ್ತಿ ಗರಿ
namma chikmagalur

ಜಾನಪದ ಗಾರುಡಿಗ ನಾಗರಾಜಪ್ಪಗೆ ಲಭಿಸಿದ ಅಕಾಡೆಮಿ ಪ್ರಶಸ್ತಿ ಗರಿ

Share
Share

ಚಿಕ್ಕಮಗಳೂರು : ಕಡೂರು ತಾಲ್ಲೂಕಿನ ಯಗಟಿಯ ನಾಗರಾಜಪ್ಪನವರಿಗೆ ಪ್ರಸ್ತುತ ಸಾಲಿನ ಜಾನಪದ ಅಕಾಡೆಮಿ ಪ್ರಶಸ್ತಿ ಪಡೆಯುವುದರ ಮೂಲಕ ವೀರಗಾಸೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ನಾಗರಾಜಪ್ಪ ವೀರಗಾಸೆ ಯ ವಿವಿಧ ಪ್ರಕಾರಗಳಲ್ಲಿ ಪರಣಿತಿ ಪಡೆದವರು.ವೀರಗಾಸೆಯ ಚಾಮಳಾ,ಕರಡೆ,ದೋಣು ವಾದ್ಯದಲ್ಲಿ ನುರಿತವರು ಸೇರಿದ ಜನ ತಲೆತೂಗುವಂತೆ ನುಡಿಸುವ ಕಲೆಯನ್ನು ಸಿದ್ದಿಸಿಕೊಂಡಿದ್ದಾರೆ.
ಕಳೆದ ನಲವತ್ತು ವರ್ಷಗಳಿಂದ ಎಲೆಮರೆಯ ಕಾಯಿಯಂತೆ ಗ್ರಾಮೀಣ ಭಾಗದ ತೇರು,ಜಾತ್ರೆ, ಉತ್ಸವ ಮತ್ತು ದೇವರ ಕಾರ್ಯಕ್ರಮಗಳಲ್ಲಿ ಕೈ ಚಳಕ ತೋರಿಸುವ ಮೂಲಕ ಸೈ ಎನ್ನಿಸಿಕೊಂಡಿದ್ದಾರೆ. ಇಂತಹ ಕಲೆಗಳು ಉಳಿಯಬೇಕು, ಬೆಳೆಯಬೇಕು ಎಂದರೆ ಯುವಕರು ಪಾಲ್ಗೊಳ್ಳ ಬೇಕು ಎನ್ನತ್ತಾರೆ. ಇಂತಹ ಉತ್ಸಾಹಿಯನ್ನು ಜಾನಪದ ಅಕಾಡೆಮಿ ಪ್ರಶಸ್ತಿಗೆ ಅಯ್ಕೆ ಮಾಡಿರುವುದು ಶ್ಲಾಘನೀಯ.

ನಾಗರಾಜಪ್ಪಗೆ ಪ್ರಶಸ್ತಿ ಪ್ರಕಟವಾದ ತಕ್ಷಣ ತಾಲ್ಲೂಕು ಜಾನಪದ ಪರಿಷತ್ ಅಧ್ಯಕ್ಷರಾದ ಜಗದೀಶ್ವರಚಾರ್ ನೇತೃತ್ವದಲ್ಲಿ ಗಿರಿಯಮ್ಮದೇವಿ ಕೋಲಾಟ ಸಂಘ ಮತ್ತು ಗ್ರಾಮಸ್ಥರು ಸೇರಿ ಗೌರವಿಸಿ ಸನ್ಮಾನ ಮಾಡಿರುವುದು ಕಲಾವಿದರಿಗೆ ಸತ್ಕರಿಸುವ ಸಂಸ್ಕೃತಿ ತೋರಿಸಿದ್ದಾರೆ. ನಾಗರಾಜಪ್ಪ ಇನ್ನಷ್ಟು ಮತ್ತಷ್ಟು ಪ್ರಶಸ್ತಿಗೆ ಭಾಜನರಾಗಲಿ ನಾಗರಾಜಪ್ಪ ಇತರ ಕಲಾವಿದರಿಗೂ ಮಾರ್ಗದರ್ಶನ ನೀಡಲಿ.

Share

Leave a comment

Leave a Reply

Your email address will not be published. Required fields are marked *

Don't Miss

ದಬ್ಬಾಳಿಕೆಯಿಂದ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಗೆ ಯತ್ನ

ಚಿಕ್ಕಮಗಳೂರು: ಬಿಡದಿ ಟೌನ್‌ಶಿಪ್ ಯೋಜನೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದಬ್ಬಾಳಿಕೆಯ ಮೂಲಕ ಜಾರಿಗೆ ತರಲು ಮುಂದಾಗಿದ್ದಾರೆ ಎಂದು ಜೆಡಿಎಸ್ ರಾಷ್ಟ್ರೀಯ ವಕ್ತಾರ ಸುಧಾಕರ ಶೆಟ್ಟಿ ಆರೋಪಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ಮೆಡಿಕಲ್ ಕಾಲೇಜು ಆಸ್ಪತ್ರೆ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿ

ಚಿಕ್ಕಮಗಳೂರು:  ಮೆಡಿಕಲ್ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಿರುವ ಮೂಲ ಉದ್ದೇಶ ಇನ್ನೂ ಸಂಪೂರ್ಣವಾಗಿ ಈಡೇರಿಲ್ಲ. ಬಡ ರೋಗಿಗಳಿಗೆ ಜಿಲ್ಲೆಯಲ್ಲೇ ಉತ್ತಮ ಚಿಕಿತ್ಸೆ ದೊರೆಯುವಂತೆ, ಆಸ್ಪತ್ರೆಯನ್ನು ತಕ್ಷಣ ಪೂರ್ಣ ಪ್ರಮಾಣದಲ್ಲಿ...

Related Articles

ಬಯಲ ಬಂಗಾರದ”ಈರುಳ್ಳಿ” ಬಲು ದೂರ,ದೂರ

ಅಜ್ಜಂಪುರ: ಚಿಕ್ಕಮಗಳೂರು ಜಿಲ್ಲೆಯಲ್ಲಿ “ಬಯಲ ಬಂಗಾರದ ಬೆಳೆ ಬೆಳೆಯುವ ಕಪ್ಪು ಮಣ್ಣು ಅಜ್ಜಂಪುರ ಮತ್ತು ಕಡೂರು...

ರೈತನ ಮನೆ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಮನೆ ಜಖಂ

ಚಿಕ್ಕಮಗಳೂರು:  ಕಳೆದೆರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಗಾಳಿಯ ವೇಗ ಹೆಚ್ಚಿರುವುದರಿಂದ ಮರಗಳು ಧರೆಗುರುಳುತ್ತಿವೆ. ಮೂಡಿಗೇರೆಯ ಕೋಳೂರು...

ಆಸ್ತಿ- ಅಂತಸ್ತಿಗಿಂತ ಆರೋಗ್ಯವು ಮನುಷ್ಯನ ಅತಿದೊಡ್ಡ ಸಂಪತ್ತು

ಚಿಕ್ಕಮಗಳೂರು:  ಆಸ್ತಿ ಮತ್ತು ಅಂತಸ್ತಿಗಿಂತ ಆರೋಗ್ಯವು ಮನುಷ್ಯನ ಅತಿದೊಡ್ಡ ಸಂ ಪತ್ತು. ಈ ಆರೋಗ್ಯಯುತ ಬದುಕು...

ಭದ್ರಾ ಮೇಲ್ದಂಡೆ ಯೋಜನೆಗೆ ರಾಜ್ಯದಿಂದಲೇ 12 ಸಾವಿರ ಕೋಟಿ ರೂ. ವೆಚ್ಚ

ಚಿಕ್ಕಮಗಳೂರು:  ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ೫,೩೦೦ ಕೋಟಿ ರೂ. ಘೋಷಿಸಿದ್ದ ಕೇಂದ್ರ ಸರ್ಕಾರ ಇದುವರೆಗೆ...