ಚಿಕ್ಕಮಗಳೂರು: ಜಿಲ್ಲೆಯ ಇಳೆಹೊಳೆ ಗ್ರಾಮದಲ್ಲಿ “ನಮ್ಮೂರ ಶಾಲೆ ನಮ್ಮಯ ಕಣ್ಮಣಿ” ಎಂದು ಹೆಸರಿರುವಬ್ಯಾನರ್ ಅನ್ನು ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಪೋಷಕರು, ಗ್ರಾಮಸ್ಥರು ಹಾಗೂ ಶಿಕ್ಷಣ ಉಳಿಸಿ ಸಮಿತಿ ಸದಸ್ಯರು ಕಟ್ಟುವ ಮುಖಾಂತರ ಎಲ್ಲ ವಿದ್ಯಾರ್ಥಿಗಳಿಗೂ ಮುಂದಿನ ಶೈಕ್ಷಣಿಕ ವರ್ಷಕ್ಕೆ ಸ್ವಾಗತಿಸುತ್ತಾ, ನಮ್ಮೂರ ಶಾಲೆ ಮುಚ್ಚಲು ನಾವು ಎಂದಿಗೂ ಬಿಡುವುದಿಲ್ಲ ಎಂದು ಘೋಷಣೆ ತೆಗೆದುಕೊಂಡು, ಪ್ರತಿರೋಧ ಚಳವಳಿಗೆ ಚಾಲನೆ ನೀಡಿದರು.
ನಂತರ ಪೋಷಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಎಐಡಿಎಸ್ಒ ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದ ಕೊಪ್ಪ,ನಮ್ಮೂರ ಶಾಲೆ ಉಳಿಯಬೇಕು ಮತ್ತು ಕೆಪಿಎಸ್ ಯೋಜನೆ ರದ್ದಾಗಬೇಕೆಂದು ಆಗ್ರಹಿಸಿ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ರಚಿಸಿಕೊಂಡು ಕಳೆದ ೫ ತಿಂಗಳಿಂದ ಗ್ರಾಮಸ್ಥರು ಹಾಗೂ ಪೋಷಕರು ಹೋರಾಟ ನಡೆಸಿದ್ದೇವೆ. ಗ್ರಾಮಮಟ್ಟದಿಂದ ಆರಂಭಿಸಿ ಜಿಲ್ಲಾ ಮಟ್ಟ ಹಾಗೂ ರಾಜ್ಯ ಮಟ್ಟದವರೆಗೂ ಪ್ರತಿಭಟನೆ ಹಾಗೂ ಸಮಾವೇಶಗಳನ್ನು ನಡೆಸಿದ್ದೇವೆ. ನಾಡಿನ ಹೆಸರಾಂತ ಸಾಹಿತಿಗಳು ಹಾಗೂ ಶಿಕ್ಷಣ ತಜ್ಞರು ನಮ್ಮೊಂದಿಗೆ ಧ್ವನಿಗೂಡಿಸಿದ್ದಾರೆಂದರು.
ಈಷ್ಟೆಲ್ಲ ಹೋರಾಟ, ಪ್ರತಿಭಟನೆ ನಡೆದರೂ ರಾಜ್ಯ ಸರ್ಕಾರ ನಾಡಿನ ಪೋಷಕರ, ಶಿಕ್ಷಣ ತಜ್ಞರ, ಸಾಹಿತಿಗಳ ಮಾತನ್ನು ಕೇಳದೆ ಹಠಮಾರಿತನ ಧೋರಣೆ ತಾಳುತ್ತಿದೆ. ಬಡವರ ರೈತ ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾದರೂ ಪರವಾಗಿಲ್ಲ ಕೆಪಿಎಸ್ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದೆ ಎಂದು ತಿಳಿಸಿದರು.
ಸಭೆಯ ನಂತರ ನಮ್ಮೂರ ಶಾಲೆ ಉಳಿಯಬೇಕು ಎಂದು ಆಗ್ರಹಿಸಿ ಬರೆದಿರುವ ಪತ್ರಗಳನ್ನು ಬಿಇಓ ಗೆ ಕೊಡುವ ಮುಖಾಂತರ ಪತ್ರ ಚಳವಳಿಗೂ ಕೂಡ ಚಾಲನೆ ನೀಡಲಾಯಿತು.
ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಕಾರ್ಯದರ್ಶಿ ಯೋಗೀಶ್, ಉಪಾಧ್ಯಕ್ಷರಾದ ಮಂಜುನಾಥ್ ಹಾಗೂ ಕೃಷ್ಣ, ಸದಸ್ಯರಾದ ಜ್ಯೋತಿ, ಮನು, ಸಿದ್ದೇಶ್, ನಿಂಗರಾಜು, ಪ್ರದೀಪ್, ಪುಟ್ಟಸ್ವಾಮಿ, ಉದ್ದಯ್ಯ, ಕೃಷ್ಣಮೂರ್ತಿ, ವಿದ್ಯಾರ್ಥಿ ಸಂಘಟನೆಯ ಪದಾಧಿಕಾರಿಗಳಾದ ಚೈತ್ರ, ಸುಷ್ಮಾ, ಅಭಿಷೇಕ್, ದರ್ಶನ್, ಶ್ರೇಯಸ್ ಇದ್ದರು.
Nammura School resistance movement launched in Ilehole village
Leave a comment