Home Latest News ತರೀಕೆರೆ ಕೀರ್ತಿ ಪತಾಕೆ ಹಾರಿಸಿದ ಸಮೀಕ್ಷಾ : ಥ್ರೋಬಾಲ್ ರಾಷ್ಟ್ರಮಟ್ಟದಲ್ಲಿ ಚಿನ್ನ
Latest News

ತರೀಕೆರೆ ಕೀರ್ತಿ ಪತಾಕೆ ಹಾರಿಸಿದ ಸಮೀಕ್ಷಾ : ಥ್ರೋಬಾಲ್ ರಾಷ್ಟ್ರಮಟ್ಟದಲ್ಲಿ ಚಿನ್ನ

Share
Share

ಚಿಕ್ಕಮಗಳೂರು: ತರೀಕೆರೆ ತಾಲ್ಲೂಕಿನ ಎಂ.ಸಿ ಹಳ್ಳಿ ಪ್ರೌಢಶಾಲೆಯ 9 ನೇ ತರಗತಿಯ ಅಪ್ಪಟ ಗ್ರಾಮೀಣ ಕ್ರೀಡಾ ಪ್ರತಿಭೆ ಸಮೀಕ್ಷಾ ರಾಷ್ಟ್ರಮಟ್ಟದ ಚಿನ್ನದ ಪದಕ ಗೆದ್ದು ದಾಖಲೆ ಮಾಡಿ ಊರಿಗೆ,ನಾಡಿಗೆ ಕೀರ್ತಿ ತಂದಿರುವುದು ಸಂತೋಷ .
ರಾಷ್ಟ್ರಮಟ್ಟದ 19 ವರ್ಷದೊಳಗಿನ ಥ್ರೋಬಾಲ್ ಸ್ಪರ್ಧೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿದ್ದು ಎಂ.ಸಿ ಹಳ್ಳಿ ಪ್ರೌಢಶಾಲಾ ವಿದ್ಯಾರ್ಥಿ ಸಮೀಕ್ಷಾ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ಚಿನ್ನದ ಪದಕದ ಜೊತೆಗೆ ಮ್ಯಾನ್‌ ಅಫ್ ದ ಮ್ಯಾಚ್ ಪ್ರಶಸ್ತಿ ಪಡೆದಿರುವುದು ಶಾಲೆಗಷ್ಟೇ ಅಲ್ಲದೆ ಕರ್ನಾಟಕ ರಾಜ್ಯಕ್ಕೆ ಕೀರ್ತಿ ತಂದಿರುವುದಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ.

ದೈಹಿಕ ಶಿಕ್ಷಕರಾದ ಬಿ.ಪಿ.ಕುಮಾರಸ್ವಾಮಿ ಉತ್ತಮ ತರಭೇತಿ ನೀಡಿದ್ದು ಅವರನ್ನು ಅಭಿನಂದಿಸಲೇ ಬೇಕು.
ಚಿನ್ನ ಮತ್ತು ಕೀರ್ತಿ ತಂದ ಸಮೀಕ್ಷಾ ಎಂ.ಸಿ.ಹಳ್ಳಿಯ ಕುಮಾರಸ್ವಾಮಿ ಮತ್ತು ರೇಖಾ ದಂಪತಿಯ ಪುತ್ರಿಯಾಗಿದ್ದು ಇವಳ ಸಾಧನೆಗೆ ಮುಖ್ಯ ಶಿಕ್ಷಕಿ ವೀಣಾಬಾಯಿ ಮತ್ತು ಶಿಕ್ಷಕರುಗಳು ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಮಹಿನುದ್ದಿನ್ ಮತ್ತು ಸದಸ್ಯರಗಳು ಹಾಗು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಎನ್.ರಾಮೇಗೌಡ ಮತ್ತು ಸದಸ್ಯರಗಳು ಮತ್ತು ಊರಿನ ಪ್ರಮುಖರು ಅಭಿನಂದಿಸಿ ಬೆನ್ನು ತಟ್ಟಿದ್ದಾರೆ.
ಅಪ್ಪಟ ಗ್ರಾಮೀಣ ಪ್ರದೇಶದ ಸಮೀಕ್ಷಾ ಹದಿನೆಂಟು ವರ್ಷಗಳ ಹಿಂದೆ ಮಾಡಿದ್ದ ಕರ್ನಾಟಕದ ಸಾಧನೆಯನ್ನು ಈ ಬಾರಿ ಮತ್ತೆ ಮಾಡಿರುವುದು ಕೂಡ ದಾಖಲೆ ರಾಷ್ಟ್ರ ಮಟ್ಟದ ಸಾಧನೆಯ ಜೊತೆಗೆ ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ವಿಜಯ ಸಾಧಿಸಲಿ .

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು...