Home Latest News ನಾಳೆ ನಕ್ಸಲರ ಶರಣಾಗತಿ ಖಚಿತ : ಜಿಲ್ಲಾಡಳಿತ ಸಿದ್ದತೆ
Latest News

ನಾಳೆ ನಕ್ಸಲರ ಶರಣಾಗತಿ ಖಚಿತ : ಜಿಲ್ಲಾಡಳಿತ ಸಿದ್ದತೆ

Share
Share

ಚಿಕ್ಕಮಗಳೂರು : ನಾಳೆ ಜಿಲ್ಲಾಧಿಕಾರಿ ಕಛೇರಿಯಲ್ಲಿ ಆರು ನಕ್ಸಲರು ಮುಖ್ಯವಾಹಿನಿಗೆ ಸೇರಲಿದ್ದಾರೆ ಎಂಬುದು ಖಚಿತವಾಗಿದೆ, ಈ ಮೂಲಕ ಕಳೆದ ಮೂವತ್ತು ವರ್ಷಗಳಿಂದ ನಕ್ಸಲ್ ಚಟುವಟಿಕೆಗಳು ನಡೆಯುತ್ತಿದ್ದು ಅದು ಕೊನೆಗೊಳ್ಳುವ ಸಾಧ್ಯತೆ ಇದೆ.

ಇತ್ತೀಚೆಗೆ ನಕ್ಸಲ್ ವಿಕ್ರಮ್ ಗೌಡ ಮತ್ತು ಪೊಲೀಸ್ ರ ಮಧ್ಯೆ ಚಕಮಕಿ ನಡೆದು ವಿಕ್ರಮ್ ಗೌಡ ಅಸುನೀಗಿದ ನಂತರ ಇನ್ನುಳಿದ ನಕ್ಸಲ್ ರು ಮುಖ್ಯವಾಹಿನಿಗೆ ಕರೆತರಲು ಹಲವರು ಪ್ರಯತ್ನಿಸಿದ್ದು ಸರ್ಕಾರ ಕೂಡ ಇದಕ್ಕೆ ಸ್ಪಂದಿಸಿದ್ದರ ಫಲವಾಗಿ ನಾಳೆ ಮುಂಡುಗಾರು ಲತಾ,ಸುಂದರಿ ಕುತ್ಲೂರು,ವನಜಾಕ್ಷಿ ಬಾಳೆಹೊಳೆ, ಮಾರಪ್ಪ ಅರೋಲಿ,ಕೆ.ವಸಂತ ಮತ್ತು ಟಿ.ಎನ್ ಜೇಶ್ ಜಿಲ್ಲಾಧಿಕಾರಿ ಕಛೇರಿಯಲ್ಲಿ ಮುಖ್ಯವಾಹಿನಿ ಸೇರಲಿದ್ದಾರೆ. ಇನ್ನೋರ್ವ ನಕ್ಸಲ್ ಜಯಣ್ಣ ಅಲಿಯಾಸ್ ಜಾನ್ ಸಂಪರ್ಕ ಸಾಧಿಸಲಾಗಿಲ್ಲ ಎನ್ನಲಾಗುತ್ತಿದೆ. ನಕ್ಸಲ್ ರು ಅನೇಕ ಬೇಡಿಕೆ ಇಟ್ಟಿದ್ದು ಸರ್ಕಾರ ಹೇಗೆ ಸ್ಪಂದಿಸುತ್ತದೆ ಎಂಬುದಕ್ಕೆ ಈ ಹಿಂದೆ ಶರಣಾದವರ ಗೋಳು ಕೇಳ ಬೇಕಾಗಿದೆ. 2016 ರಲ್ಲಿ ಶರಣಾಗಿರುವ ನಿಲುಗುಳಿ ಪದ್ಮನಾಭ ಯಾವ ಭರವಸೆಗೂ ಸ್ಪಂದಿಸಿಲ್ಲ. ಪ್ರತಿಯೊಂದು ವಿಚಾರಕ್ಕೆ ಪೊಲೀಸ್ರು ವಿಚಾರಣೆ ನೆಪದಲ್ಲಿ ಮನೆಯ ಹತ್ತಿರ ಬರುತ್ತಾರೆ. ಕಳೆದ ಎಂಟು ವರ್ಷಗಳಿಂದ ಕೋರ್ಟ್ ಅಲೆಯುವಂತೆ ಆಗಿದೆ ಸ್ವಯಂ ಉದ್ಯೋಗ ಮಾಡಲು ನೆರವು ನೀಡಿದ್ದು ಪ್ರಯೋಜನವಾಗಿಲ್ಲ ಎನ್ನುತ್ತಾರೆ. ಒಟ್ಟಾರೆ ಸರ್ಕಾರದ ತೀರ್ಮಾನ ಮತ್ತು ನಕ್ಸಲ್ ರು ಮುಖ್ಯ ವಾಹಿನಿಗೆ ಬರುತ್ತಿರುವುದರಿಂದ ಹಲವು ರಾಜ್ಯಗಳಿಗೆ ಒಳ್ಳೆಯ ವಾತವರಣ ನಿರ್ಮಾಣವಾಗಲಿದೆ ಎಂದೇ ಹೇಳಲಾಗುತ್ತಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ಹಿರಿಯ ನಾಗರಿಕರಿಗೆ 3.12 ಲಕ್ಷ ರೂ ವಂಚನೆ

ಚಿಕ್ಕಮಗಳೂರು: ಸೈಬರ್ ಕ್ರಿಮಿನಲ್‌ಗಳ ಜಾಲಕ್ಕೆ ಸಿಲುಕಿ ಹಿರಿಯ ನಾಗರಿಕರೊಬ್ಬರು ಬರೋಬ್ಬರಿ 3.12 ಲಕ್ಷ ಕಳೆದುಕೊಂಡಿದ್ದಾರೆ. ನಗರದಲ್ಲಿ ವಾಸವಾಗಿರುವ 62 ವರ್ಷದ ವೆಂಕಟೇಶ್ ಇತ್ತೀಚೆಗೆ ಅವರ ಮೊಬೈಲ್‌ಗೆ ಬಂದಿದ್ದ ಒಂದು ಅಪರಿಚಿತ ಎಪಿಕೆ...

ಜಿಲ್ಲೆಯ ಒಟ್ಟು 15 ಮಂದಿಯ ಗಡಿಪಾರಿಗೆ ಶಿಫಾರಸ್ ಪತ್ರ

ಚಿಕ್ಕಮಗಳೂರು: ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್, ಭಜರಂಗದಳದ ಮುಖಂಡ ಶ್ಯಾಮ್ ವಿ ಗೌಡ, ಮುಸ್ಲಿಂ ಸಮುದಾಯದ 10 ಮಂದಿ ಸೇರಿ ಜಿಲ್ಲೆಯ ಒಟ್ಟು 15 ಮಂದಿಯ ಗಡಿಪಾರಿಗೆ ಜಿಲ್ಲಾ...

Related Articles

ಎಸ್.ಬಿದರೆಯ ಬೆಂಕಿ ಲಕ್ಷ್ಮೀ ರಂಗನಾಥಸ್ವಾಮಿ ಬ್ರಹ್ಮ ರಥೋತ್ಸವ

ಕಡೂರು: ತಾಲ್ಲೂಕಿನ ಸಖರಾಯಪಟ್ಟಣ ಹೋಬಳಿ ಎಸ್.ಬಿದರೆಯ ಬೆಂಕಿ ಲಕ್ಷ್ಮೀ ರಂಗನಾಥಸ್ವಾಮಿ ಬ್ರಹ್ಮ ರಥೋತ್ಸವವು ಮಂಗಳವಾರ ಶ್ರದ್ಧಾ...

ಚಿಕ್ಕಮಗಳೂರು ನಗರದ ಐ.ಜಿ. ರಸ್ತೆಯಲ್ಲಿದ್ದ ಇಂದಿರಾ ಕ್ಯಾಂಟೀನ್ ಸ್ಥಳಾಂತರ

ಚಿಕ್ಕಮಗಳೂರು : ನಗರದ ಐ.ಜಿ. ರಸ್ತೆಯ ಬಸ್ ನಿಲ್ದಾಣದ ಸಮೀಪವಿರುವ ಇಂದಿರಾ ಕ್ಯಾಂಟೀನ್ ಅನ್ನು ಸ್ಥಳಾಂತರ...

ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳು ಮನೆ ಬಾಗಿಲಿಗೆ

ಚಿಕ್ಕಮಗಳೂರು: ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ...

ಶಾಸಕ ಜಿ.ಹೆಚ್. ಶ್ರೀನಿವಾಸ್ ವಿರುದ್ಧ ಪ್ರತಿಭಟನೆ

ಅಜ್ಜಂಪುರ : ಶಾಸಕ ಜಿ.ಹೆಚ್. ಶ್ರೀನಿವಾಸ್ ದಲಿತ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು...