Home Latest News ನಾಳೆ ನಕ್ಸಲರ ಶರಣಾಗತಿ ಖಚಿತ : ಜಿಲ್ಲಾಡಳಿತ ಸಿದ್ದತೆ
Latest News

ನಾಳೆ ನಕ್ಸಲರ ಶರಣಾಗತಿ ಖಚಿತ : ಜಿಲ್ಲಾಡಳಿತ ಸಿದ್ದತೆ

Share
Share

ಚಿಕ್ಕಮಗಳೂರು : ನಾಳೆ ಜಿಲ್ಲಾಧಿಕಾರಿ ಕಛೇರಿಯಲ್ಲಿ ಆರು ನಕ್ಸಲರು ಮುಖ್ಯವಾಹಿನಿಗೆ ಸೇರಲಿದ್ದಾರೆ ಎಂಬುದು ಖಚಿತವಾಗಿದೆ, ಈ ಮೂಲಕ ಕಳೆದ ಮೂವತ್ತು ವರ್ಷಗಳಿಂದ ನಕ್ಸಲ್ ಚಟುವಟಿಕೆಗಳು ನಡೆಯುತ್ತಿದ್ದು ಅದು ಕೊನೆಗೊಳ್ಳುವ ಸಾಧ್ಯತೆ ಇದೆ.

ಇತ್ತೀಚೆಗೆ ನಕ್ಸಲ್ ವಿಕ್ರಮ್ ಗೌಡ ಮತ್ತು ಪೊಲೀಸ್ ರ ಮಧ್ಯೆ ಚಕಮಕಿ ನಡೆದು ವಿಕ್ರಮ್ ಗೌಡ ಅಸುನೀಗಿದ ನಂತರ ಇನ್ನುಳಿದ ನಕ್ಸಲ್ ರು ಮುಖ್ಯವಾಹಿನಿಗೆ ಕರೆತರಲು ಹಲವರು ಪ್ರಯತ್ನಿಸಿದ್ದು ಸರ್ಕಾರ ಕೂಡ ಇದಕ್ಕೆ ಸ್ಪಂದಿಸಿದ್ದರ ಫಲವಾಗಿ ನಾಳೆ ಮುಂಡುಗಾರು ಲತಾ,ಸುಂದರಿ ಕುತ್ಲೂರು,ವನಜಾಕ್ಷಿ ಬಾಳೆಹೊಳೆ, ಮಾರಪ್ಪ ಅರೋಲಿ,ಕೆ.ವಸಂತ ಮತ್ತು ಟಿ.ಎನ್ ಜೇಶ್ ಜಿಲ್ಲಾಧಿಕಾರಿ ಕಛೇರಿಯಲ್ಲಿ ಮುಖ್ಯವಾಹಿನಿ ಸೇರಲಿದ್ದಾರೆ. ಇನ್ನೋರ್ವ ನಕ್ಸಲ್ ಜಯಣ್ಣ ಅಲಿಯಾಸ್ ಜಾನ್ ಸಂಪರ್ಕ ಸಾಧಿಸಲಾಗಿಲ್ಲ ಎನ್ನಲಾಗುತ್ತಿದೆ. ನಕ್ಸಲ್ ರು ಅನೇಕ ಬೇಡಿಕೆ ಇಟ್ಟಿದ್ದು ಸರ್ಕಾರ ಹೇಗೆ ಸ್ಪಂದಿಸುತ್ತದೆ ಎಂಬುದಕ್ಕೆ ಈ ಹಿಂದೆ ಶರಣಾದವರ ಗೋಳು ಕೇಳ ಬೇಕಾಗಿದೆ. 2016 ರಲ್ಲಿ ಶರಣಾಗಿರುವ ನಿಲುಗುಳಿ ಪದ್ಮನಾಭ ಯಾವ ಭರವಸೆಗೂ ಸ್ಪಂದಿಸಿಲ್ಲ. ಪ್ರತಿಯೊಂದು ವಿಚಾರಕ್ಕೆ ಪೊಲೀಸ್ರು ವಿಚಾರಣೆ ನೆಪದಲ್ಲಿ ಮನೆಯ ಹತ್ತಿರ ಬರುತ್ತಾರೆ. ಕಳೆದ ಎಂಟು ವರ್ಷಗಳಿಂದ ಕೋರ್ಟ್ ಅಲೆಯುವಂತೆ ಆಗಿದೆ ಸ್ವಯಂ ಉದ್ಯೋಗ ಮಾಡಲು ನೆರವು ನೀಡಿದ್ದು ಪ್ರಯೋಜನವಾಗಿಲ್ಲ ಎನ್ನುತ್ತಾರೆ. ಒಟ್ಟಾರೆ ಸರ್ಕಾರದ ತೀರ್ಮಾನ ಮತ್ತು ನಕ್ಸಲ್ ರು ಮುಖ್ಯ ವಾಹಿನಿಗೆ ಬರುತ್ತಿರುವುದರಿಂದ ಹಲವು ರಾಜ್ಯಗಳಿಗೆ ಒಳ್ಳೆಯ ವಾತವರಣ ನಿರ್ಮಾಣವಾಗಲಿದೆ ಎಂದೇ ಹೇಳಲಾಗುತ್ತಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...