Home Latest News ನಾಳೆ ನಕ್ಸಲರ ಶರಣಾಗತಿ ಖಚಿತ : ಜಿಲ್ಲಾಡಳಿತ ಸಿದ್ದತೆ
Latest News

ನಾಳೆ ನಕ್ಸಲರ ಶರಣಾಗತಿ ಖಚಿತ : ಜಿಲ್ಲಾಡಳಿತ ಸಿದ್ದತೆ

Share
Share

ಚಿಕ್ಕಮಗಳೂರು : ನಾಳೆ ಜಿಲ್ಲಾಧಿಕಾರಿ ಕಛೇರಿಯಲ್ಲಿ ಆರು ನಕ್ಸಲರು ಮುಖ್ಯವಾಹಿನಿಗೆ ಸೇರಲಿದ್ದಾರೆ ಎಂಬುದು ಖಚಿತವಾಗಿದೆ, ಈ ಮೂಲಕ ಕಳೆದ ಮೂವತ್ತು ವರ್ಷಗಳಿಂದ ನಕ್ಸಲ್ ಚಟುವಟಿಕೆಗಳು ನಡೆಯುತ್ತಿದ್ದು ಅದು ಕೊನೆಗೊಳ್ಳುವ ಸಾಧ್ಯತೆ ಇದೆ.

ಇತ್ತೀಚೆಗೆ ನಕ್ಸಲ್ ವಿಕ್ರಮ್ ಗೌಡ ಮತ್ತು ಪೊಲೀಸ್ ರ ಮಧ್ಯೆ ಚಕಮಕಿ ನಡೆದು ವಿಕ್ರಮ್ ಗೌಡ ಅಸುನೀಗಿದ ನಂತರ ಇನ್ನುಳಿದ ನಕ್ಸಲ್ ರು ಮುಖ್ಯವಾಹಿನಿಗೆ ಕರೆತರಲು ಹಲವರು ಪ್ರಯತ್ನಿಸಿದ್ದು ಸರ್ಕಾರ ಕೂಡ ಇದಕ್ಕೆ ಸ್ಪಂದಿಸಿದ್ದರ ಫಲವಾಗಿ ನಾಳೆ ಮುಂಡುಗಾರು ಲತಾ,ಸುಂದರಿ ಕುತ್ಲೂರು,ವನಜಾಕ್ಷಿ ಬಾಳೆಹೊಳೆ, ಮಾರಪ್ಪ ಅರೋಲಿ,ಕೆ.ವಸಂತ ಮತ್ತು ಟಿ.ಎನ್ ಜೇಶ್ ಜಿಲ್ಲಾಧಿಕಾರಿ ಕಛೇರಿಯಲ್ಲಿ ಮುಖ್ಯವಾಹಿನಿ ಸೇರಲಿದ್ದಾರೆ. ಇನ್ನೋರ್ವ ನಕ್ಸಲ್ ಜಯಣ್ಣ ಅಲಿಯಾಸ್ ಜಾನ್ ಸಂಪರ್ಕ ಸಾಧಿಸಲಾಗಿಲ್ಲ ಎನ್ನಲಾಗುತ್ತಿದೆ. ನಕ್ಸಲ್ ರು ಅನೇಕ ಬೇಡಿಕೆ ಇಟ್ಟಿದ್ದು ಸರ್ಕಾರ ಹೇಗೆ ಸ್ಪಂದಿಸುತ್ತದೆ ಎಂಬುದಕ್ಕೆ ಈ ಹಿಂದೆ ಶರಣಾದವರ ಗೋಳು ಕೇಳ ಬೇಕಾಗಿದೆ. 2016 ರಲ್ಲಿ ಶರಣಾಗಿರುವ ನಿಲುಗುಳಿ ಪದ್ಮನಾಭ ಯಾವ ಭರವಸೆಗೂ ಸ್ಪಂದಿಸಿಲ್ಲ. ಪ್ರತಿಯೊಂದು ವಿಚಾರಕ್ಕೆ ಪೊಲೀಸ್ರು ವಿಚಾರಣೆ ನೆಪದಲ್ಲಿ ಮನೆಯ ಹತ್ತಿರ ಬರುತ್ತಾರೆ. ಕಳೆದ ಎಂಟು ವರ್ಷಗಳಿಂದ ಕೋರ್ಟ್ ಅಲೆಯುವಂತೆ ಆಗಿದೆ ಸ್ವಯಂ ಉದ್ಯೋಗ ಮಾಡಲು ನೆರವು ನೀಡಿದ್ದು ಪ್ರಯೋಜನವಾಗಿಲ್ಲ ಎನ್ನುತ್ತಾರೆ. ಒಟ್ಟಾರೆ ಸರ್ಕಾರದ ತೀರ್ಮಾನ ಮತ್ತು ನಕ್ಸಲ್ ರು ಮುಖ್ಯ ವಾಹಿನಿಗೆ ಬರುತ್ತಿರುವುದರಿಂದ ಹಲವು ರಾಜ್ಯಗಳಿಗೆ ಒಳ್ಳೆಯ ವಾತವರಣ ನಿರ್ಮಾಣವಾಗಲಿದೆ ಎಂದೇ ಹೇಳಲಾಗುತ್ತಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ಇಂಧನ ನಿಗಮದ ಅಧ್ಯಕ್ಷರಾಗಿ ಟಿ.ಡಿ.ರಾಜೇಗೌಡರ ಮತ್ತೆ ನೇಮಕ

ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃಧ್ಧಿ ನಿಗಮದ ಅಧ್ಯಕ್ಷ ಸ್ಥಾನದಲ್ಲಿ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡರನ್ನು ಮುಂದುವರೆಯಲು ಆದೇಶವನ್ನು ನೀಡಲಾಗಿದೆ. ರಾಜೇಗೌಡರನ್ನು 2024 ರಲ್ಲಿ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಎರಡು ವರ್ಷದ ಅವಧಿಯ ನೇಮಕಾತಿ...

ಸಿ.ಡಿ.ಎ ಮಾಜಿ ಅಧ್ಯಕ್ಷ ಆನಂದ್ ಮೇಲೆ ಹಲ್ಲೆ …?

ಚಿಕ್ಕಮಗಳೂರು: ಮಾಜಿ ಸಚಿವ ಸಿ.ಟಿ.ರವಿ ಆಪ್ತ ಸುದರ್ಶನ್ ಬಲಗೈ ಬಂಟ ಹಾಲಿ ಮೂಗ್ತಿಹಳ್ಳಿ ಸಹಕಾರ ಸಂಘದ ಅಧ್ಯಕ್ಷ ಆನಂದ್ ನ ರಸಲೀಲೆ ನಡೆಸುತ್ತಿದ್ದಾರೆ ಎಂದು ಕೆಲವರು ಹೋಮ್ ಸ್ಟೇಗೆ ನುಗ್ಗಿ ಗಲಾಟೆ...

Related Articles

ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನದದು ಕಳವು

ಚಿಕ್ಕಮಗಳೂರು : ತಾಲೂಕಿನ ಕಂಚೇನಹಳ್ಳಿಯಲ್ಲಿ ಹಾಡಹಗಲೇ ಕಳ್ಳತನ ನಡೆದಿದ್ದು ರೈತ ಉಮೇಶ್ ಎಂಬುವವರ ಮನೆಯಿಂದ ಲಕ್ಷಾಂತರ...

ಲಾಭಾಂಶ ಆಮಿಷ ಯುವಕನಿಗೆ ಲಕ್ಷಾಂತರ ರೂಪಾಯಿ ವಂಚನೆ

ಚಿಕ್ಕಮಗಳೂರು: ಟ್ರೇಡಿಂಗ್ ಹೆಸರಿನಲ್ಲಿ ಹೆಚ್ಚಿನ ಲಾಭಾಂಶ ನೀಡುವ ಆಮಿಷವೊಡ್ಡಿ ಯುವಕನೊಬ್ಬನಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ...

ಸಿಡಿಎ ಅಧ್ಯಕ್ಷರಾಗಿ ಎಚ್‌.ಪಿ. ಮಂಜೇಗೌಡ ನೇಮಕ

ಚಿಕ್ಕಮಗಳೂರು: ಚಿಕ್ಕಮಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಸಿಡಿಎ) ಚಿಕ್ಕಮಗಳೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಪಿ. ಮಂಜೇಗೌಡ ಅವರನ್ನು...

ಕಾಂಗ್ರೆಸ್ ನಲ್ಲಿ ಸಿ.ಡಿ.ಎ. ಫೈಟ್ – ಕಾಂಗ್ರೆಸ್ ನಲ್ಲಿ ಸಿ.ಡಿ.ಎ. ಫೈಟ್ – ರಾಮಚಂದ್ರ ಬಿಗಿ ಪಟ್ಟು

ಚಿಕ್ಕಮಗಳೂರು: ಹಿರೇಮಗಳೂರು ರಾಮಚಂದ್ರ ಸಿ.ಡಿ.ಎ.ಅಧ್ಯಕ್ಷ ಸ್ಥಾನ ಪಡೆಯಲು ಬಿಗಿ ಪಟ್ಟು ಹಿಡಿದು ಒತ್ತಾಯ ಮಾಡುತ್ತಿದ್ದಾರೆ. ಕಳೆದ...