Home Latest News ನಾಳೆ ನಕ್ಸಲರ ಶರಣಾಗತಿ ಖಚಿತ : ಜಿಲ್ಲಾಡಳಿತ ಸಿದ್ದತೆ
Latest News

ನಾಳೆ ನಕ್ಸಲರ ಶರಣಾಗತಿ ಖಚಿತ : ಜಿಲ್ಲಾಡಳಿತ ಸಿದ್ದತೆ

Share
Share

ಚಿಕ್ಕಮಗಳೂರು : ನಾಳೆ ಜಿಲ್ಲಾಧಿಕಾರಿ ಕಛೇರಿಯಲ್ಲಿ ಆರು ನಕ್ಸಲರು ಮುಖ್ಯವಾಹಿನಿಗೆ ಸೇರಲಿದ್ದಾರೆ ಎಂಬುದು ಖಚಿತವಾಗಿದೆ, ಈ ಮೂಲಕ ಕಳೆದ ಮೂವತ್ತು ವರ್ಷಗಳಿಂದ ನಕ್ಸಲ್ ಚಟುವಟಿಕೆಗಳು ನಡೆಯುತ್ತಿದ್ದು ಅದು ಕೊನೆಗೊಳ್ಳುವ ಸಾಧ್ಯತೆ ಇದೆ.

ಇತ್ತೀಚೆಗೆ ನಕ್ಸಲ್ ವಿಕ್ರಮ್ ಗೌಡ ಮತ್ತು ಪೊಲೀಸ್ ರ ಮಧ್ಯೆ ಚಕಮಕಿ ನಡೆದು ವಿಕ್ರಮ್ ಗೌಡ ಅಸುನೀಗಿದ ನಂತರ ಇನ್ನುಳಿದ ನಕ್ಸಲ್ ರು ಮುಖ್ಯವಾಹಿನಿಗೆ ಕರೆತರಲು ಹಲವರು ಪ್ರಯತ್ನಿಸಿದ್ದು ಸರ್ಕಾರ ಕೂಡ ಇದಕ್ಕೆ ಸ್ಪಂದಿಸಿದ್ದರ ಫಲವಾಗಿ ನಾಳೆ ಮುಂಡುಗಾರು ಲತಾ,ಸುಂದರಿ ಕುತ್ಲೂರು,ವನಜಾಕ್ಷಿ ಬಾಳೆಹೊಳೆ, ಮಾರಪ್ಪ ಅರೋಲಿ,ಕೆ.ವಸಂತ ಮತ್ತು ಟಿ.ಎನ್ ಜೇಶ್ ಜಿಲ್ಲಾಧಿಕಾರಿ ಕಛೇರಿಯಲ್ಲಿ ಮುಖ್ಯವಾಹಿನಿ ಸೇರಲಿದ್ದಾರೆ. ಇನ್ನೋರ್ವ ನಕ್ಸಲ್ ಜಯಣ್ಣ ಅಲಿಯಾಸ್ ಜಾನ್ ಸಂಪರ್ಕ ಸಾಧಿಸಲಾಗಿಲ್ಲ ಎನ್ನಲಾಗುತ್ತಿದೆ. ನಕ್ಸಲ್ ರು ಅನೇಕ ಬೇಡಿಕೆ ಇಟ್ಟಿದ್ದು ಸರ್ಕಾರ ಹೇಗೆ ಸ್ಪಂದಿಸುತ್ತದೆ ಎಂಬುದಕ್ಕೆ ಈ ಹಿಂದೆ ಶರಣಾದವರ ಗೋಳು ಕೇಳ ಬೇಕಾಗಿದೆ. 2016 ರಲ್ಲಿ ಶರಣಾಗಿರುವ ನಿಲುಗುಳಿ ಪದ್ಮನಾಭ ಯಾವ ಭರವಸೆಗೂ ಸ್ಪಂದಿಸಿಲ್ಲ. ಪ್ರತಿಯೊಂದು ವಿಚಾರಕ್ಕೆ ಪೊಲೀಸ್ರು ವಿಚಾರಣೆ ನೆಪದಲ್ಲಿ ಮನೆಯ ಹತ್ತಿರ ಬರುತ್ತಾರೆ. ಕಳೆದ ಎಂಟು ವರ್ಷಗಳಿಂದ ಕೋರ್ಟ್ ಅಲೆಯುವಂತೆ ಆಗಿದೆ ಸ್ವಯಂ ಉದ್ಯೋಗ ಮಾಡಲು ನೆರವು ನೀಡಿದ್ದು ಪ್ರಯೋಜನವಾಗಿಲ್ಲ ಎನ್ನುತ್ತಾರೆ. ಒಟ್ಟಾರೆ ಸರ್ಕಾರದ ತೀರ್ಮಾನ ಮತ್ತು ನಕ್ಸಲ್ ರು ಮುಖ್ಯ ವಾಹಿನಿಗೆ ಬರುತ್ತಿರುವುದರಿಂದ ಹಲವು ರಾಜ್ಯಗಳಿಗೆ ಒಳ್ಳೆಯ ವಾತವರಣ ನಿರ್ಮಾಣವಾಗಲಿದೆ ಎಂದೇ ಹೇಳಲಾಗುತ್ತಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...