Home ನಯನ ಮೋಟಮ್ಮ ಕ್ಷೇತ್ರ ದರ್ಶನಕ್ಕೆ ಬಾರಮ್ಮ
HomechikamagalurLatest Newsnamma chikmagalur

ನಯನ ಮೋಟಮ್ಮ ಕ್ಷೇತ್ರ ದರ್ಶನಕ್ಕೆ ಬಾರಮ್ಮ

Share
Share

ಮೂಡಿಗೆರೆ: ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿಂದ ಎಡಬಿಡದೆ ಮಳೆ ಬರುತ್ತಿದ್ದು ಅನಾಹುತದ ಸಂಭವಿಸಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ.

ಮಲೆನಾಡನಲ್ಲಿ ಜನ ಹೆಚ್ಚಿನ ಸಂಕಷ್ಟದಲ್ಲಿ ಇದ್ದಾರೆ.ಕಳಸ ಸಮೀಪ ಭದ್ರಾ ನದಿಗೆ ಪಿಕ್ ಅಪ್ ಸಮೇತ ಶಮಂತ್(23) ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.ಈ ವಿಷಯ ತಿಳಿದ ತಕ್ಷಣ ಶಮಂತ್ ತಾಯಿ ರವಿಕಲಾ(48) ಕೆರೆಗೆ ಹಾರಿ ಪ್ರಾಣ ಬಿಟ್ಟಿದ್ದಾರೆ.ಈ ಭಾಗದಲ್ಲಿ ಜನತೆ ಮಳೆಯ ಜೊತೆಗೆ ಸಾವುಗಳನ್ನು ನೋಡಿ ತಲ್ಲಣಿಸಿದ್ದಾರೆ.ಆದರೆ ಶಾಸಕಿ ನಯನ ನನಗೂ ಇದಕ್ಕೂ ಸಂಬಂಧ ಇಲ್ಲ ಎನ್ನುವಂತೆ ಬೆಂಗಳೂರಿನಲ್ಲಿ ಇದ್ದಾರೆ ಎಂದು ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಅನಾಹುತಗಳು ಸಂಭವಿಸುವುದು ಆಕಸ್ಮಿಕವಾಗಿ ನಡೆಯುತ್ತವೆ.ಆದರೆ ತಕ್ಷಣ ಸ್ಪಂದಿಸುವುದು ಜನಪ್ರತಿನಿಧಿಗಳ ಕರ್ತವ್ಯ. ಅಧಿಕಾರಿಗಳಿಗೆ ಹೇಳಿ ಕೆಲಸ ಮಾಡಿಸುವುದು ಬೇರೆ ಜನಪ್ರತಿನಿಧಿಯಾಗಿ ಬೆಂಗಳೂರು ಸೇರಿರುವ ನಯನ ಬಗ್ಗೆ ಜನ ಬಹು ಬೇಸರದಿಂದ ಮಾತನಾಡುತ್ತಿರುವುದರ ಜೊತೆಗೆ ಕಾಂಗ್ರೆಸ್ ಪಕ್ಷದವರೆ ಇಂತಹ ಶಾಸಕರನ್ನು ಗೆಲ್ಲಿಸಿ ಕೊಂಡೆವು ಎಂದು ಕೈ,ಕೈ ಹಿಸುಕಿ ಕೊಳ್ಳುತ್ತಿದ್ದಾರೆ ಜೊತೆಗೆ ನಿರಾಸೆ ವ್ಯಕ್ತಪಡಿಸುತ್ತಿದ್ದಾರೆ.

ವಿದ್ಯೆಯ ಜೊತೆಗೆ ಬುದ್ದಿ ಬೇಕು ಆಗ ಜನರ ಜೊತೆಗೆ ಬರೆಯುವುದು ಮತ್ತು ಸ್ಪಂದಿಸುವ ಗುಣಗಳು ಬರುತ್ತವೆ.ಕಾನ್ವೆಂಟ್ ಶಿಕ್ಷಣ ಹೈಟೆಕ್ ಸಂಸ್ಕೃತಿ ಹೈ_ಪೈ ಬೆಂಗಳೂರು ಓಡಾಟ ನಡೆಸಿದರೆ ಇಲ್ಲಿ ಜನ ಹೈರಾಣಾಗಿದ್ದಾರೆ. ಈಗಾಗಲೇ ಯಾವುದೇ ರಾಷ್ಟ್ರೀಯ ಹಬ್ಬಗಳಲ್ಲಿ ಭಾಗವಹಿಸುವುದಿಲ್ಲ ಹೋಗಲಿ ಸಂಕಷ್ಟದ ಸಮಯದಲ್ಲೂ ದೂರದ ಬೆಂಗಳೂರು ತೋರಿಸುವ ಮೂಲಕ ಜನಸಾಮಾನ್ಯರ ಜೊತೆಗೆ ಸಂಪರ್ಕ ಇಲ್ಲ ಎಂಬಂತೆ ಪದೇ,ಪದೇ ವರ್ತಿಸಿದರೆ ಕಷ್ಟ ಯಾರ ಬಳಿ ಹೇಳಿಕೊಳ್ಳುವುದು ಎನ್ನುತ್ತಿದ್ದಾರೆ.

ಮೃತರಾದವರು ವಾಪಸ್ ಬರಲ್ಲಾ ದುಃಖಿತರನ್ನು ಸಮಾಧಾನಪಡಿಸುವ ಜೊತೆಗೆ ಕೈಲಾದ ನೆರವು ನೀಡುವ ಜವಾಬ್ದಾರಿ ಬೇಡವೇ ? ಅಧಿಕಾರ ಶಾಶ್ವತವಲ್ಲ ನಿಜ ಆದರೆ ಆಧಿಕಾರ ಇದ್ದಾಗ ನೆನಪು ಉಳಿಯುವಂತ ಕೆಲಸದ ಜೊತೆಗೆ ನಮ್ಮ ನಡಾವಳಿಗಳು ಜನರಿಗೆ ಹತ್ತಿರ ವಾಗಿರಬೇಕು.ಸದ್ಯ ಆಡಳಿತ ಪಕ್ಷದವರು ಎರೆಹುಳುವಿನಂತೆ ತೆವಳಿದರೆ ವಿರೋಧ ಪಕ್ಷಗಳು ಕೋಮಾದಲ್ಲಿ ಇರುವುದರಿಂದ ಆಡಳಿತ ಪಕ್ಷದವರಿಗೆ ಆತಂಕ ಇಲ್ಲ ನಯನ ಮೋಟಮ್ಮ ಬೆಂಗಳೂರಿನಿಂದಲೇ ಆಡಳಿತ ನಡೆಸಬಹುದು.

Nayana Motamma

Share

Leave a comment

Leave a Reply

Your email address will not be published. Required fields are marked *

Don't Miss

ಧಾರಾಕಾರ ಮಳೆ ನಡುವೆ ಗಿರಿಪ್ರದೇಶಕ್ಕೆ ಪ್ರವಾಸಿಗರ ಧಾಂಗುಡಿ

ಚಿಕ್ಕಮಗಳೂರು: ನಗರ ಸಮೀಪದ ಗಿರಿಪ್ರದೇಶದಲ್ಲಿ ಧಾರಾಕಾರ ಮಳೆಸುರಿಯುತ್ತಿದ್ದು, ಇದರ ನಡುವೆಯೇ ಗಿರಿಭಾಗಕ್ಕೆ ಭಾರೀ ಪ್ರವಾಸಿಗರ ದಂಡು ಭೇಟಿಕೊಟ್ಟಿದೆ. ಕಾರು, ಬೈಕ್, ಟಿಟಿ ಸೇರಿದಂತೆ ೧೮೫೦ ವಾಹನಗಳು ಗಿರಿಭಾಗಕ್ಕೆ ಪ್ರವಾಸಿಗರನ್ನು ಕರೆದೊಯ್ದಿದೆ. ಭಾರೀ...

ಮೈಮೆಲೆ ಬಿಸಿನೀರು ಬಿದ್ದು ಹೆಣ್ಣುಮಗುವಿಗೆ ಗಾಯ

ಚಿಕ್ಕಮಗಳೂರು: ಜಿಲ್ಲಾಮಕ್ಕಳ ಘಟಕದ ದತ್ತು ಸಂಸ್ಥೆ ಸಿಬ್ಬಂದಿ ನಿರ್ಲಕ್ಷ್ಯದಿಂದ ಒಂದು ವರ್ಷ ಮೂರು ತಿಂಗಳ ಹೆಣ್ಣುಮಗುವಿಗೆ ಸುಟ್ಟಗಾಯವಾಗಿದ್ದು ಇದರಿಂದ ಹೆಣ್ಣುಮಗು ನರಳುವಂತಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಗರದ ಗಾಂಧಿನಗರದಲ್ಲಿರುವ ದತ್ತು...

Related Articles

ವಸೂಲಿವೀರ ಅದಕ್ಷ ಡಿ.ಡಿ.ಪಿ.ಐ ಪುಟ್ಟರಾಜುಗೆ ಕಡ್ಡಾಯ ರಜೆ

ಚಿಕ್ಕಮಗಳೂರು; ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಾರ್ವಜನಿಕ ಶಿಕ್ಷಣ ಅಧಿಕಾರಿ ಪುಟ್ಟರಾಜು ಕಡ್ಡಾಯ ರಜೆ ಮೇಲೆ...

ಜು.28ಕ್ಕೆ ಪ್ರಧಾನ ಮಂತ್ರಿ ರಾಷ್ಟ್ರೀಯ ಅಪ್ರೆಂಟಿಸ್ ಶಿಪ್ ಮೇಳ

ಚಿಕ್ಕಮಗಳೂರು: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ (ವಸಾಹತು ಹಿಂಭಾಗ, ಜಿಲ್ಲಾ ಪಂಚಾಯಿತಿ ಹತ್ತಿರ, ಜ್ಯೋತಿನಗರ, ಚಿಕ್ಕಮಗಳೂರು)...

ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರವಾಗಿ ಮಳೆ

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ನದಿಗಳು ಮೈದುಂಬಿ ಹರಿಯುತ್ತಿವೆ. ಕುದುರೆಮುಖ, ಮುಳ್ಳಯ್ಯನ...

ಸಾರ್ವಜನಿಕರ ಸುರಕ್ಷತೆಗಾಗಿ “ಮನೆ-ಮನೆಗೆ ಪೊಲೀಸ್”

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ 368 ಬೀಟ್‌ಗಳಲ್ಲಿ ಏಕಕಾಲದಲ್ಲಿ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು  ಜಿಲ್ಲಾ ಪೊಲೀಸ್...