Home namma chikmagalur ನಯನ ನಂಜಿನ ನುಡಿ – ಕಾಂಗ್ರೆಸ್ ನಲ್ಲಿ ಕಿಚ್ಚು ?
namma chikmagalurchikamagalurHomeLatest News

ನಯನ ನಂಜಿನ ನುಡಿ – ಕಾಂಗ್ರೆಸ್ ನಲ್ಲಿ ಕಿಚ್ಚು ?

Share
Share

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ಮೋಟಮ್ಮಹಿಂದುವಿಚಾರಧಾರೆಯ ಪ್ರಮೋದ್ ಮುತಾಲಿಕ್ ವೇದಿಕೆ ಹಂಚಿಕೊಂಡು ನಂಜಿನ ಮಾತನಾಡಿದ್ದಾರೆ ಎಂದು ಕಾಂಗ್ರೆಸ್ ನಲ್ಲಿ ಕಿಚ್ಚು ಹಚ್ಚಿಕೊಂಡಿದೆ.

ನಯನ ಪ್ರಬಲ ಸಮರ್ಥನೆ ಮಾಡುತ್ತಿದ್ದಾರೆ. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ನ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾ ಶಾಸಕರ ಸಭೆಯಲ್ಲಿ ಹದಿನೈದು ನಿಮಿಷಗಳ ಕಾಲ ನಯನಗೆ ಬುದ್ದಿ ಹೇಳಿ ಅಸಮಾಧಾನ ಸೂಚಿಸಿ ಇನ್ನೂ ಮುಂದೆ ಇಂತಹ ಅನಾಹುತ ಸೃಷ್ಟಿಸಿಕೊಳ್ಳ ಬೇಡಿ ಎಂದು ಹೇಳಿರುವುದನ್ನು ಸಭೆಯಲ್ಲಿ ಇದ್ದ ಶಾಸಕರುಗಳು ಅಲ್ಲಿ ಇಲ್ಲಿ ಹೇಳುತ್ತಿರುವುದು ಗುಟ್ಟಾಗಿ ಉಳಿದಿಲ್ಲ.

ಕಾಂಗ್ರೆಸ್ ವಕ್ತಾರ ಹೆಚ್.ಹೆಚ್.ದೇವರಾಜ್ ಒಂದು ಹೆಜ್ಜೆ ಮುಂದೆ ಹೋಗಿ ಇಂತವರ ಗೆಲುವಿಗೆ ಸಹಕರಿಸಿದ ಪ್ರಗತಿಪರರು, ದಲಿತ ಸಂಘಟನೆಗಳು ಮತ್ತು ರೈತ ಸಂಘದವರು ಗಾಂಧಿ ಪ್ರತಿಮೆಯ ಮುಂದೆ ಪಶ್ಚಾತ್ತಾಪ ಪಟ್ಟುಕೊಳ್ಳಲು ಮುಂದಾಗಿದ್ದಾರೆ.

ಗಣಪತಿ ಸಮಿತಿಯ ಸಭೆಯಲ್ಲಿ ರಾಜಕೀಯ ಮಾತು ಎಷ್ಟರಮಟ್ಟಿಗೆ ಸರಿ.ಮೂರು ವರ್ಷಗಳ ನಂತರ ಬಿಜೆಪಿ, ಬಿ.ಎಸ್.ಪಿ.ಮತ್ತು ಎಸ್.ಡಿ.ಪಿ.ಐ ಸೇರುವ ಮಾತು ಏಕೆ ಎಂದು ಪ್ರಶ್ನೆ ಮಾಡಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಿಂಬಾಲಕ ರಾದ ನಯನಮೋಟಮ್ಮ ಅಲಿಯಾಸ್ ನಯನಕಮಲಮ್ಮ ಆಗಲು ಈ ರೀತಿಯ ಹೇಳಿಕೆ ನೀಡಿರಬಹುದು ಎನ್ನುವವರು ಇದ್ದಾರೆ.ಏನೇ ಆಗಲಿ ವಕೀಲರಾಗಿದ್ದ ನಯನ ಕ್ಷೇತ್ರದಲ್ಲಿ ಪದೇ,ಪದೇ ಗೊಂದಲ ಮಾಡಿಕೊಳ್ಳುತ್ತಿರುವುದು ಕಾಂಗ್ರೆಸ್ ನ ಹಲವು ಮುಖಂಡರಿಗೆ ಇರಿಸು ಮುರಿಸು ತಂದಿದೆ ಮುಂದೆ ಇದೆ ಹಬ್ಬ ಎನ್ನುತ್ತಿದ್ದಾರೆ.

Nayana Nanjindu

Share

Leave a comment

Leave a Reply

Your email address will not be published. Required fields are marked *

Don't Miss

ತುಂಬಿ ಹರಿಯುತ್ತಿರುವ ತುಂಗಾ, ಭದ್ರಾ – ಹೇಮಾವತಿ ನದಿಗಳು

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡಿನ ನಾಲ್ಕು ತಾಲೂಕುಗಳು ಹೊರತುಪಡಿಸಿ ಇನ್ನುಳಿದ ಐದು ತಾಲೂಕುಗಳಲ್ಲಿ ಭಾನುವಾರ ಮಳೆಯ ಪ್ರಮಾಣ ಇಳಿಮುಖವಾಗಿತ್ತು. ಆದರೆ, ಗಾಳಿಯ ಅಬ್ಬರ ಜೋರಾಗಿದೆ. ಹಲವೆಡೆ ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳುತ್ತಿರುವುದರಿಂದ ಮನೆಯಿಂದ ಹೊರ...

ಹುಯಿಗೆರೆ ಗ್ರಾಮ ಬಳಿ ಕಾಡಾನೆ ದಾಳಿಗೆ ಕೃಷಿಕನ ಸಾವು

ಬಾಳೆಹೊನ್ನೂರು: ಹುಯಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಡವಾನೆ ಜಾಗರ ಬಳಿ ಕೃಷಿಕ ಸಬ್ರಾಯಗೌಡ (65) ಎಂಬುವರ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ, ತೀವ್ರ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಭಾನುವಾರ...

Related Articles

ಆದಿವಾಸಿ ಪ್ರದೇಶದ ಹೋಂಸ್ಟೇ ನಿರ್ಮಾಣಕ್ಕೆ ಸಹಾಯಧನ

ಚಿಕ್ಕಮಗಳೂರು: ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರದ ಸಚಿವಾಲಯದ ಧರ್ತಿ ಅಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನ...

ಗಿರಿಗೆ ತೆರಳಲು ಪಾಸ್ ಕಡ್ಡಾಯ ನಿರ್ಧಾರ ರದ್ದುಪಡಿಸುವಂತೆ ಆಗ್ರಹ

ಚಿಕ್ಕಮಗಳೂರು:  ಗುರುದತ್ತಾತ್ರೇಯ ಸ್ವಾಮಿ ಬಾಬಾಬುಡನ್‌ಗಿರಿ ದರ್ಗಾ ವ್ಯಾಪ್ತಿಯ ಸಂಚಾರಕ್ಕೆ ಸ್ಥಳೀಯ ನಿವಾಸಿಗಳಿಗೆ ಪಾಸ್ ಕಡ್ಡಾಯ ಮಾಡಲು...

ಸೈಕಲ್‌ನಲ್ಲಿ ಧರ್ಮಸ್ಥಳ ತೆರಳಲು ನಗರಕ್ಕಾಗಮಿಸಿದ ಯುವಕರ ತಂಡ

ಚಿಕ್ಕಮಗಳೂರು: ಶ್ರಾವಣ ಮಾಸದ ಹಿನ್ನೆಲೆಯಲ್ಲಿ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾ ಮಿ ಸನ್ನಿಧಾನಕ್ಕೆ ತೆರಳಲು ವಿಜಯನಗರ...

೨ ಕೋಟಿ ರೂ ವೆಚ್ಚದಲ್ಲಿ ನಗರದ ಡಾ. ಅಂಬೇಡ್ಕರ್ ಭವನ

ಚಿಕ್ಕಮಗಳೂರು: ನಗರದ ಹೃದಯ ಭಾಗದಲ್ಲಿರುವ ಡಾ. ಅಂಬೇಡ್ಕರ್ ಭವನವನ್ನು ಸುಮಾರು ೨ ಕೋಟಿ ರೂ ವೆಚ್ಚದಲ್ಲಿ...