Home namma chikmagalur ನಯನ ನಂಜಿನ ನುಡಿ – ಕಾಂಗ್ರೆಸ್ ನಲ್ಲಿ ಕಿಚ್ಚು ?
namma chikmagalurchikamagalurHomeLatest News

ನಯನ ನಂಜಿನ ನುಡಿ – ಕಾಂಗ್ರೆಸ್ ನಲ್ಲಿ ಕಿಚ್ಚು ?

Share
Share

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ಮೋಟಮ್ಮಹಿಂದುವಿಚಾರಧಾರೆಯ ಪ್ರಮೋದ್ ಮುತಾಲಿಕ್ ವೇದಿಕೆ ಹಂಚಿಕೊಂಡು ನಂಜಿನ ಮಾತನಾಡಿದ್ದಾರೆ ಎಂದು ಕಾಂಗ್ರೆಸ್ ನಲ್ಲಿ ಕಿಚ್ಚು ಹಚ್ಚಿಕೊಂಡಿದೆ.

ನಯನ ಪ್ರಬಲ ಸಮರ್ಥನೆ ಮಾಡುತ್ತಿದ್ದಾರೆ. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ನ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾ ಶಾಸಕರ ಸಭೆಯಲ್ಲಿ ಹದಿನೈದು ನಿಮಿಷಗಳ ಕಾಲ ನಯನಗೆ ಬುದ್ದಿ ಹೇಳಿ ಅಸಮಾಧಾನ ಸೂಚಿಸಿ ಇನ್ನೂ ಮುಂದೆ ಇಂತಹ ಅನಾಹುತ ಸೃಷ್ಟಿಸಿಕೊಳ್ಳ ಬೇಡಿ ಎಂದು ಹೇಳಿರುವುದನ್ನು ಸಭೆಯಲ್ಲಿ ಇದ್ದ ಶಾಸಕರುಗಳು ಅಲ್ಲಿ ಇಲ್ಲಿ ಹೇಳುತ್ತಿರುವುದು ಗುಟ್ಟಾಗಿ ಉಳಿದಿಲ್ಲ.

ಕಾಂಗ್ರೆಸ್ ವಕ್ತಾರ ಹೆಚ್.ಹೆಚ್.ದೇವರಾಜ್ ಒಂದು ಹೆಜ್ಜೆ ಮುಂದೆ ಹೋಗಿ ಇಂತವರ ಗೆಲುವಿಗೆ ಸಹಕರಿಸಿದ ಪ್ರಗತಿಪರರು, ದಲಿತ ಸಂಘಟನೆಗಳು ಮತ್ತು ರೈತ ಸಂಘದವರು ಗಾಂಧಿ ಪ್ರತಿಮೆಯ ಮುಂದೆ ಪಶ್ಚಾತ್ತಾಪ ಪಟ್ಟುಕೊಳ್ಳಲು ಮುಂದಾಗಿದ್ದಾರೆ.

ಗಣಪತಿ ಸಮಿತಿಯ ಸಭೆಯಲ್ಲಿ ರಾಜಕೀಯ ಮಾತು ಎಷ್ಟರಮಟ್ಟಿಗೆ ಸರಿ.ಮೂರು ವರ್ಷಗಳ ನಂತರ ಬಿಜೆಪಿ, ಬಿ.ಎಸ್.ಪಿ.ಮತ್ತು ಎಸ್.ಡಿ.ಪಿ.ಐ ಸೇರುವ ಮಾತು ಏಕೆ ಎಂದು ಪ್ರಶ್ನೆ ಮಾಡಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಿಂಬಾಲಕ ರಾದ ನಯನಮೋಟಮ್ಮ ಅಲಿಯಾಸ್ ನಯನಕಮಲಮ್ಮ ಆಗಲು ಈ ರೀತಿಯ ಹೇಳಿಕೆ ನೀಡಿರಬಹುದು ಎನ್ನುವವರು ಇದ್ದಾರೆ.ಏನೇ ಆಗಲಿ ವಕೀಲರಾಗಿದ್ದ ನಯನ ಕ್ಷೇತ್ರದಲ್ಲಿ ಪದೇ,ಪದೇ ಗೊಂದಲ ಮಾಡಿಕೊಳ್ಳುತ್ತಿರುವುದು ಕಾಂಗ್ರೆಸ್ ನ ಹಲವು ಮುಖಂಡರಿಗೆ ಇರಿಸು ಮುರಿಸು ತಂದಿದೆ ಮುಂದೆ ಇದೆ ಹಬ್ಬ ಎನ್ನುತ್ತಿದ್ದಾರೆ.

Nayana Nanjindu

Share

Leave a comment

Leave a Reply

Your email address will not be published. Required fields are marked *

Don't Miss

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್ ಎಂಬುವವರ ಮನೆ ಮುಂದೆ ನಿಲ್ಲಿಸಲಾಗಿದ್ದ ಆಟೋರಿಕ್ಷಾ ಹಾಗೂ ಅವರ ಮನೆಯ ಮೇಲೆ ಬೃಹತ್ ಮರವೊಂದು...

ಜಿಲ್ಲೆಯ 5 ತಾಲೂಕುಗಳಲ್ಲಿ ಶಾಲೆ – ಅಂಗನವಾಡಿಗಳಿಗೆ ರಜೆ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ವರುಣನ ಆರ್ಭಟ ಮುಂದುವರಿದಿದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ. ನಾಳೆ...

Related Articles

ಕಡೂರು ತಾಲ್ಲೂಕಿನಲ್ಲಿ ಬರದ ಆತಂಕ

ಕಡೂರು: ಮುಂಗಾರು ಮಳೆಯ ಕೊರತೆಯಿಂದ ಕಡೂರು ತಾಲ್ಲೂಕಿನಲ್ಲಿ ಬರದ ಆತಂಕ ಎದುರಾಗಿದ್ದು, ಕುಡಿಯುವ ನೀರು, ಜಾನುವಾರುಗಳ...

ಜು.21ಕ್ಕೆ ಕೊಪ್ಪಳದಲ್ಲಿ ಬೃಹತ್ ರೈತ ಸಮಾವೇಶ

ಚಿಕ್ಕಮಗಳೂರು : ೪೬ನೇ ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಕೊಪ್ಪಳದಲ್ಲಿ ಬೃಹತ್ ರೈತ ಸಮಾವೇಶವನ್ನು ಜು.೨೧...

ಅಕ್ರಮವಾಗಿ ಸಾಗಿಸುತ್ತಿ ಕಾಡುಜಾತಿಯ ಮರಗಳ ದಿಮ್ಮಿಗಳ ವಶ

ಮೂಡಿಗೆರೆ: ಕಾಡುಜಾತಿಯ ಮರಗಳ ದಿಮ್ಮಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದುದನ್ನು ತಾಲ್ಲೂಕಿನ ಹಂಡುಗುಳಿ ಗ್ರಾಮದ ಸಮೀಪ ಅರಣ್ಯ ಇಲಾಖೆ...

ಜವಾಹರ್ ನವೋದಯ ವಿದ್ಯಾಲಯದಲ್ಲಿ ಪ್ರವೇಶಕ್ಕೆ ಆಹ್ವಾನ

ಚಿಕ್ಕಮಗಳೂರು:  ಸೀಗೋಡುವಿನ ಪಿ.ಎಂ.ಶ್ರೀ ಜವಾಹರ ನವೋದಯ ವಿದ್ಯಾಲಯವು  ವಸತಿಯುತ ಸಹಶಿಕ್ಷಣ ವಿದ್ಯಾಲಯವಾಗಿದ್ದು, ಗ್ರಾಮೀಣ ಪ್ರದೇಶದ ಪ್ರತಿಭಾವಂತ...