Home namma chikmagalur chikamagalur ಡಿಡಿಸಿ ಬ್ಯಾಂಕ್‌ ನಿರ್ದೇಶಕರ ಚುನಾವಣೆಯಲ್ಲಿ ಎನ್ ಡಿಎ ಬೆಂಬಲಿತ ಅಭ್ಯರ್ಥಿಗಳು
chikamagalurHomeLatest Newsnamma chikmagalur

ಡಿಡಿಸಿ ಬ್ಯಾಂಕ್‌ ನಿರ್ದೇಶಕರ ಚುನಾವಣೆಯಲ್ಲಿ ಎನ್ ಡಿಎ ಬೆಂಬಲಿತ ಅಭ್ಯರ್ಥಿಗಳು

Share
Share

ಚಿಕ್ಕಮಗಳೂರು:  ತೀವ್ರ ಕುತೂಹಲ ಕೆರಳಿಸಿದ್ದ ಚಿಕ್ಕಮಗಳೂರು ಸಹಕಾರ ಕೇಂದ್ರ ಬ್ಯಾಂಕಿನ ನಿರ್ದೇಶಕರ ಚುನಾವಣೆಯಲ್ಲಿ ಎನ್ ಡಿಎ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿ ಪಕ್ಷಕ್ಕೆ ಸೇರಿದ ನಿರ್ದೇಶಕರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗುವುದರಲ್ಲಿ ಅನುಮಾನವೇ ಇಲ್ಲ. ಇದರೊಂದಿಗೆ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿದ್ದ ಇಬ್ಬರು ವಿಧಾನ ಪರಿಷತ್ ಸದಸ್ಯರು ಗೆಲುವು ಸಾಧಿಸಿದರೆ, ಶಾಸಕರೋರ್ವರು ಪರಾಭವ ಗೊಂಡಿದ್ದಾರೆ.

ಹೌದು. ಚಿಕ್ಕಮಗಳೂರು ಡಿಸಿಸಿ ಬ್ಯಾಂಕಿನ ನಿರ್ದೇಶಕ ಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಭೋಜೇಗೌಡ, ಸಿ.ಟಿ.ರವಿ, ಕಡೂರು ಶಾಸಕ ಕೆ.ಎಸ್.ಆನಂದ್ ಸ್ಪರ್ಧೆ ಮಾಡಿದ್ದರು. ಹೀಗಾಗಿಯೇ ಸಹಕಾರಿ ಸಂಘದ ಚುನಾವಣಾ ಕಣ ರಂಗೇರಿತ್ತು. ಆದರೆ ಇಬ್ಬರು ಪರಿಷತ್ ಸದಸ್ಯರು ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾದರೆ, ಶಾಸಕರು ಪರಾಭವಗೊಂಡು ನಿರಾಸೆ ಅನುಭವಿಸಿದ್ದಾರೆ.

ಬ್ಯಾಂಕಿನ ಆಡಳಿತ ಮಂಡಳಿಯ ಒಟ್ಟು ೧೩ ನಿರ್ದೇಶಕರ ಸ್ಥಾನಗಳ ಪೈಕಿ ೮ ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದ್ದರೆ, ಇನ್ನುಳಿದ ೫ ಸ್ಥಾನಗಳಿಗೆ ಶನಿವಾರ ಚುನಾವಣೆ ನಡೆಯಿತು. ಕಣದಲ್ಲಿ ಸಿ.ಟಿ. ರವಿ, ಎಸ್.ಎಲ್. ಭೋಜೇಗೌಡ, ಕೆ.ಎಸ್. ಆನಂದ್, ಎಂ.ಪಿ. ಕುಮಾರಸ್ವಾಮಿ ಸೇರಿದಂತೆ ೧೦ ಮಂದಿ ಇದ್ದರು.

ನಾಲ್ಕು ಕ್ಷೇತ್ರಗಳ ಪೈಕಿ ಚಿಕ್ಕಮಗಳೂರು ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಎರಡು ಸ್ಥಾನಗಳ ಫಲಿತಾಂಶ ಕುತೂಹಲ ಮೂಡಿಸಿತ್ತು. ಈ ಕ್ಷೇತ್ರದಲ್ಲಿ ಸಿ.ಟಿ. ರವಿ, ಎಸ್.ಎಲ್. ಭೋಜೇಗೌಡ ಹಾಗೂ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಎಂ.ಎಸ್. ನಿರಂಜನ್ ಸ್ಪರ್ಧೆ ಮಾಡಿದ್ದರು.
ನಿರಂಜನ್ ಅವರು ತಾವು ಬಿಜೆಪಿ ಬೆಂಬಲಿತ ಅಭ್ಯರ್ಥಿ ಎಂಬುದಾಗಿ ಘೋಷಣೆ ಮಾಡಿದ್ದರು. ಅದ್ದರಿಂದ ಮುಂಜಾಗ್ರತೆಯಾಗಿ ಮೈತ್ರಿ ಪಕ್ಷಗಳ ಬೆಂಬಲಿತ ಸಹಕಾರ ಸಂಘಗಳ ಮತದಾರರನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಲಾಗಿತ್ತು.

ಶನಿವಾರ ಬೆಳಿಗ್ಗೆ ೯ ಗಂಟೆಗೆ ಇಲ್ಲಿನ ಡಿಸಿಸಿ ಬ್ಯಾಂಕ್‌ನಲ್ಲಿ ಚುನಾವಣಾಧಿಕಾರಿ ಹಾಗೂ ಚಿಕ್ಕಮಗಳೂರು ಉಪ ವಿಭಾಗಾಧಿಕಾರಿ ಸುದರ್ಶನ್ ಹಾಗೂ ಸಹಾಯಕ ಚುನಾವಣಾಧಿಕಾರಿ ರೇಷ್ಮಾ ಶೆಟ್ಟಿ ಅವರು ಚುನಾವಣಾ ಪ್ರಕ್ರಿಯೆಯನ್ನು ಆರಂಭಿಸಿದರು. ಚುನಾವಣೆ ಹಿನ್ನಲೆಯಲ್ಲಿ ಮತದಾನ ಕೇಂದ್ರದ ೧೦೦ ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.

ಮತದಾನ ಆರಂಭವಾಗುತ್ತಿದ್ದAತೆ ಪ್ರವಾಸ ತೆರಳಿದ್ದ ೨೮ ಮಂದಿ ಮತದಾರರು ಒಂದೇ ವಾಹನದಲ್ಲಿ ಆಗಮಿಸಿದರು. ಅವರೊಂದಿಗೆ ಸಿ.ಟಿ. ರವಿ, ಎಸ್.ಎಲ್. ಭೋಜೇಗೌಡ ಹಾಜರಿದ್ದರು. ವಾಹನದಿಂದ ಕೆಳಗೆ ಇಳಿಯುತ್ತಿದ್ದಂತೆ ನೇರವಾಗಿ ಡಿಸಿಸಿ ಬ್ಯಾಂಕಿನ ಮತದಾನ ಕೇಂದ್ರದೊಳಗೆ ತೆರಳಿದರು. ಸಂಜೆ ೪ ಗಂಟೆಯ ವೇಳೆಗೆ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿತು. ನಂತರ ಮತ ಎಣಿಕೆ ಆರಂಭಗೊAಡು ಸಂಜೆ ೫.೩೦ ರವೇಳೆಗೆ ಫಲಿತಾಂಶವನ್ನು ಚುನಾವಣಾಧಿಕಾರಿಗಳು ಪ್ರಕಟಿಸಿದರು.

ಚಿಕ್ಕಮಗಳೂರು ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಎರಡು ಸ್ಥಾನಗಳಿಗೆ ಸ್ಪರ್ಧೆ ಮಾಡಿದ್ದ ೩ ಮಂದಿಯ ಪೈಕಿ ಎಸ್.ಎಸ್. ಭೋಜೇಗೌಡ, ಸಿ.ಟಿ. ರವಿ ಜಯಗಳಿದ್ದು, ಎಂ.ಎಸ್. ನಿರಂಜನ್ ಪರಾಭವಗೊಂಡಿದ್ದಾರೆ. ಕೊಪ್ಪ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರಕ್ಕೆ ಸ್ಪರ್ಧೆ ಮಾಡಿದ್ದ ಬಿ.ಎಸ್.ಸತೀಶ್ ಅವರು ಜಯಗಳಿಸಿದ್ದು, ಯು.ಎಸ್.ಪ್ರಜ್ವಲ್, ಕೆ.ಎಸ್. ರವೀಂದ್ರ ಅವರು ಪರಾಭವಗೊಂಡಿದ್ದಾರೆ.

ಜಿಲ್ಲೆಯ ಎಲ್ಲ ತಾಲೂಕು ವ್ಯವಸಾಯೋತ್ಪನ್ನ ಸಹಕಾರ ಸಂಘಗಳ ಕ್ಷೇತ್ರದ ಒಂದು ಸ್ಥಾನಕ್ಕೆ ಸ್ಪರ್ಧೆ ಮಾಡಿದ್ದ ಎಚ್.ಕೆ. ದಿನೇಶ್ ಹೊಸೂರು ಜಯಗಳಿಸಿದ್ದು, ಕಡೂರು ಕ್ಷೇತ್ರದ ಶಾಸಕ ಕೆ.ಎಸ್. ಆನಂದ್ ಅವರು ಪರಾಭವಗೊಂಡಿದ್ದಾರೆ. ಜಿಲ್ಲೆಯ ಎಲ್ಲಾ ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕುಗಳು, ಪಟ್ಟಣ ಸಹಕಾರ ಬ್ಯಾಂಕ್ ಹಾಗೂ ಇನ್ನುಳಿದ ಎಲ್ಲಾ ಸಹಕಾರ ಸಂಘಗಳ ಕ್ಷೇತ್ರದ ಒಂದು ಸ್ಥಾನಕ್ಕೆ ಸ್ಪರ್ಧೆ ಮಾಡಿದ್ದ ಟಿ.ಎಲ್.ರಮೇಶ್ ಜಯಗಳಿಸಿದರೆ, ಮೂಡಿಗೆರೆ ಕ್ಷೇತ್ರದ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಪರಾಭವಗೊಂಡಿದ್ದಾರೆ.

NDA-backed candidates in DDC Bank director elections

Share

Leave a comment

Leave a Reply

Your email address will not be published. Required fields are marked *

Don't Miss

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

ಗಾಂಜಾ ಮಾರಾಟಕ್ಕೆ ಸಂಚು-ಮೂರು ಆರೋಪಿಗಳ ಬಂಧನ

ಎನ್.ಆ‌ರ್.ಪುರ: ಕೆ.ಕಣಬೂರು ಬಸ್ ತಂಗುದಾಣದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಸಂಚು ರೂಪಿಸಿ, ಅದನ್ನು ಹಂಚಿಕೊಳ್ಳುತ್ತಿದ್ದ ಮೂವರು ಖದೀಮರನ್ನು ಪೊಲೀಸರು ಯಶಸ್ವಿಯಾಗಿ ದಾಳಿ ನಡೆಸಿ ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ...

Related Articles

ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ ಕಾರು

ಕಳಸ: ಸೇತುವೆಗೆ ತಡೆಗೋಡೆ ಇಲ್ಲದ ಪರಿಣಾಮ ಪ್ರವಾಸಿಗರ ಕಾರೊಂದು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ...

ಸ್ವಾತಂತ್ರ್ಯೋತ್ಸವದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ 

ಚಿಕ್ಕಮಗಳೂರು: ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮುಗಿದ ಬೆನ್ನಲ್ಲೇ ದಲಿತ...

‘ದೇಶ ಮೊದಲು’ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಿ

ಚಿಕ್ಕಮಗಳೂರು:  ಸ್ವಾತಂತ್ರ್ಯದ ೮೦ನೇ ವರ್ಷದ ಸಂಭ್ರಮ ಕೇವಲ ಹಬ್ಬದ ಆಚರಣೆಯಾಗದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ,...

ಕಸ್ತೂರಿ ರಂಗನ್ ವರದಿ ಮರುಪರಿಶೀಲಿಸಲು ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮುಂಗಾರು ವೈಫಲ್ಯದಿಂದ ಉಂಟಾಗಿರುವ ಬರ ಪರಿಸ್ಥಿತಿಯನ್ನು ತಕ್ಷಣವೇ ಬರಗಾಲವೆಂದು ಘೋಷಿಸಿ ಪರಿಹಾರ ಕ್ರಮ...