Home Crime News ಸೋದರ ಮಾವನ ಮೇಲೆ ಮನಸೊ ಇಚ್ಚೆ ಲಾಂಗ್ ಬೀಸಿದ ಭೂಪ
Crime News

ಸೋದರ ಮಾವನ ಮೇಲೆ ಮನಸೊ ಇಚ್ಚೆ ಲಾಂಗ್ ಬೀಸಿದ ಭೂಪ

Share
Share

ಚಿಕ್ಕಮಗಳೂರು : ತಾಯಿ ಮನೆಗೆ ಬರಲಿಲ್ಲ ಎಂದು ಅಳಿಯ ಮಾವನ ಮೇಲೆ ಮಚ್ಚು ಬೀಸಿರುವ ಘಟನೆ ಜಿಲ್ಲೆಯ ಕಡೂರು ಪಟ್ಟಣದ ವಿಜಯಲಕ್ಷ್ಮಿ ಟಾಕೀಸ್ ಬಳಿ ನಡೆದಿದೆ. ಕಡೂರು ಪಟ್ಟಣದಲ್ಲಿ ಆಟೋ ಓಡಿಸುತ್ತಿರುವ ಭರತ್ ಮಾವನ ಮೇಲೆ ಮಚ್ಚು ಬೀಸಿದ ಯುವಕ. ಭರತ್ ತಾಯಿ ಗಂಡನ ಜೊತೆ ಜಗಳವಾಡಿ ತವರು ಸೇರಿದ್ದರು. ಗಂಡನ ಮನೆಗೆ ಬಂದಿರಲಿಲ್ಲ. ಮಗ ಭರತ್ ಅಮ್ಮನಿಗೆ ಮನೆಗೆ ಬರುವಂತೆ ಹೇಳಿದ್ದನು. ಜೊತೆಗೆ, ಅಮ್ಮನನ್ನು ಮನೆಗೆ ಕಳುಹಿಸುವಂತೆ ಮಾವ ಮಹಾಲಿಂಗನಿಗೂ ಹೇಳಿದ್ದನು. ಆದರೂ, ತಾಯಿ ಗಂಡನ ಮನೆಗೆ ಹೋಗಿರಲಿಲ್ಲ. ಈ ಬಗ್ಗೆ ಭರತ್ ಮಾವ ಮಹಾಲಿಂಗ ಭರತ್ ಹಾಗೂ ಆತನ ತಂದೆ ರಾಮಸ್ವಾಮಿ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ನೀವು ನನ್ನ ತಂಗಿಗೆ ಸಾಕಷ್ಟು ಹಿಂಸೆ ನೀಡಿದ್ದೀರಾ. ಹಾಗಾಗಿ ಅವಳನ್ನ ಕಳಿಸುವುದಿಲ್ಲ. ಅಪ್ಪ-ಮಗ ಇಬ್ಬರನ್ನು ಜೈಲಿಗೆ ಕಳುಹಿಸುತ್ತೇನೆ ಎಂದು ಎಚ್ಚರಿಕೆ ನೀಡಿದ್ದನು.

ಆದರೂ, ಭರತ್ ಮೇಲಿಂದ ಮೇಲೆ ಫೋನ್ ಮಾಡಿ ಅಮ್ಮನನ್ನು ಕಳುಹಿಸುವಂತೆ ಬಲವಂತ ಮಾಡಿದ ಪರಿಣಾಮ ಮಾವ ಮಹಾಲಿಂಗ ಡಿಸೆಂಬರ್ 31ರಂದು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪೊಲೀಸ್ ಸ್ಟೇಷನ್ ಗೆ ಹೋಗಿ ದೂರು ನೀಡಿದರು ಎಂಬ ಸಿಟ್ಟಿನಿಂದ ಭರತ್ ಹಾಡಹಗಲೇ ನಡು ರಸ್ತೆಯಲ್ಲಿ ಮಾವನ ಮೇಲೆ ಮನಸ್ಸೊ ಇಚ್ಚೆ ಮಚ್ಚು ಬೀಸಿದ್ದಾನೆ. ಕಡೂರು ಪಟ್ಟಣದಲ್ಲಿ ಆಟೋ ಡ್ರೈವರ್ ವೃತ್ತಿ ಮಾಡುತ್ತಿರುವ ಭರತ್ ಆಟೋ ಹಿಂದೆ ಲಾಂಗ್ ಇಟ್ಟು ಮಾವನನ್ನ ಹುಡುಕಾಡಿದ್ದಾನೆ. ಕಡೂರು ಪಟ್ಟಣದ ವಿಜಯಲಕ್ಷ್ಮಿ ಟಾಕೀಸ್ ಬಳಿ ಕ್ಯಾಂಟೀನ್ ಹತ್ತಿರ ಟೀ ಕುಡಿಯುತ್ತಿದ್ದ ಮಾವನ ಮೇಲೆ ಮನಸ್ಸೊ ಇಚ್ಛೆ ಲಾಂಗ್ ಬೀಸಿದ್ದಾನೆ. ಲಾಂಗ್ ಬೀಸಿದ ಬಳಿಕ ರಾಜರೋಷವಾಗಿ ಬಂದು ಆಟೋದಲ್ಲಿ ಲಾಂಗ್ ಇಟ್ಟುಕೊಂಡು ವಾಪಸ್ ಹೋಗಿದ್ದಾನೆ.

ಹಲ್ಲೆಗೊಳಗಾದ ಭರತ್ ಮಾವ ಮಹಾಲಿಂಗ ಅವರ ಸ್ಥಿತಿ ಗಂಭೀರವಾಗಿದ್ದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಡೂರು ಪೊಲೀಸರು ಅಪ್ಪ ರಾಮಸ್ವಾಮಿ ಹಾಗೂ ಮಗ ಭರತ್ ನನ್ನ ವಶಕ್ಕೆ ಪಡೆದು ಕೋರ್ಟಿಗೆ ಹಾಜರುಪಡಿಸಿದ್ದಾರೆ.‌ ನ್ಯಾಯಾಲಯ ಇಬ್ಬರಿಗೂ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...

ಎಮ್ಮೆದೊಡ್ಡಿ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ವೃದ್ಧನ ಸಾವು

ಕಡೂರು: ತಾಲ್ಲೂಕಿನ ಎಮ್ಮೆದೊಡ್ಡಿ ರಸ್ತೆಯ ಕರಿಯಮ್ಮ ದೇವಸ್ಥಾನದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವೃದ್ಧರೊಬ್ಬರು ಮೃತಪಟ್ಟ...

ವಿದ್ಯುತ್ ಸ್ಪರ್ಶಕ್ಕೆ ಯುವಕನ ಧಾರುಣ ಸಾವು

ಅಜ್ಜಂಪುರ: ವಿದ್ಯುತ್ ಸ್ಪರ್ಶದಿಂದ ಪ್ರವೀಣ್ ಎಂಬ ಯುವಕ ಮೃತಪಟ್ಟಿದ್ದಾನೆ ಸೊಕ್ಕೆ ಪರಮೇಶಣ್ಣ ಅವರ ಮಗ. ಹೆಬ್ಬೂರು...