Home Crime News ಸೋದರ ಮಾವನ ಮೇಲೆ ಮನಸೊ ಇಚ್ಚೆ ಲಾಂಗ್ ಬೀಸಿದ ಭೂಪ
Crime News

ಸೋದರ ಮಾವನ ಮೇಲೆ ಮನಸೊ ಇಚ್ಚೆ ಲಾಂಗ್ ಬೀಸಿದ ಭೂಪ

Share
Share

ಚಿಕ್ಕಮಗಳೂರು : ತಾಯಿ ಮನೆಗೆ ಬರಲಿಲ್ಲ ಎಂದು ಅಳಿಯ ಮಾವನ ಮೇಲೆ ಮಚ್ಚು ಬೀಸಿರುವ ಘಟನೆ ಜಿಲ್ಲೆಯ ಕಡೂರು ಪಟ್ಟಣದ ವಿಜಯಲಕ್ಷ್ಮಿ ಟಾಕೀಸ್ ಬಳಿ ನಡೆದಿದೆ. ಕಡೂರು ಪಟ್ಟಣದಲ್ಲಿ ಆಟೋ ಓಡಿಸುತ್ತಿರುವ ಭರತ್ ಮಾವನ ಮೇಲೆ ಮಚ್ಚು ಬೀಸಿದ ಯುವಕ. ಭರತ್ ತಾಯಿ ಗಂಡನ ಜೊತೆ ಜಗಳವಾಡಿ ತವರು ಸೇರಿದ್ದರು. ಗಂಡನ ಮನೆಗೆ ಬಂದಿರಲಿಲ್ಲ. ಮಗ ಭರತ್ ಅಮ್ಮನಿಗೆ ಮನೆಗೆ ಬರುವಂತೆ ಹೇಳಿದ್ದನು. ಜೊತೆಗೆ, ಅಮ್ಮನನ್ನು ಮನೆಗೆ ಕಳುಹಿಸುವಂತೆ ಮಾವ ಮಹಾಲಿಂಗನಿಗೂ ಹೇಳಿದ್ದನು. ಆದರೂ, ತಾಯಿ ಗಂಡನ ಮನೆಗೆ ಹೋಗಿರಲಿಲ್ಲ. ಈ ಬಗ್ಗೆ ಭರತ್ ಮಾವ ಮಹಾಲಿಂಗ ಭರತ್ ಹಾಗೂ ಆತನ ತಂದೆ ರಾಮಸ್ವಾಮಿ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ನೀವು ನನ್ನ ತಂಗಿಗೆ ಸಾಕಷ್ಟು ಹಿಂಸೆ ನೀಡಿದ್ದೀರಾ. ಹಾಗಾಗಿ ಅವಳನ್ನ ಕಳಿಸುವುದಿಲ್ಲ. ಅಪ್ಪ-ಮಗ ಇಬ್ಬರನ್ನು ಜೈಲಿಗೆ ಕಳುಹಿಸುತ್ತೇನೆ ಎಂದು ಎಚ್ಚರಿಕೆ ನೀಡಿದ್ದನು.

ಆದರೂ, ಭರತ್ ಮೇಲಿಂದ ಮೇಲೆ ಫೋನ್ ಮಾಡಿ ಅಮ್ಮನನ್ನು ಕಳುಹಿಸುವಂತೆ ಬಲವಂತ ಮಾಡಿದ ಪರಿಣಾಮ ಮಾವ ಮಹಾಲಿಂಗ ಡಿಸೆಂಬರ್ 31ರಂದು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪೊಲೀಸ್ ಸ್ಟೇಷನ್ ಗೆ ಹೋಗಿ ದೂರು ನೀಡಿದರು ಎಂಬ ಸಿಟ್ಟಿನಿಂದ ಭರತ್ ಹಾಡಹಗಲೇ ನಡು ರಸ್ತೆಯಲ್ಲಿ ಮಾವನ ಮೇಲೆ ಮನಸ್ಸೊ ಇಚ್ಚೆ ಮಚ್ಚು ಬೀಸಿದ್ದಾನೆ. ಕಡೂರು ಪಟ್ಟಣದಲ್ಲಿ ಆಟೋ ಡ್ರೈವರ್ ವೃತ್ತಿ ಮಾಡುತ್ತಿರುವ ಭರತ್ ಆಟೋ ಹಿಂದೆ ಲಾಂಗ್ ಇಟ್ಟು ಮಾವನನ್ನ ಹುಡುಕಾಡಿದ್ದಾನೆ. ಕಡೂರು ಪಟ್ಟಣದ ವಿಜಯಲಕ್ಷ್ಮಿ ಟಾಕೀಸ್ ಬಳಿ ಕ್ಯಾಂಟೀನ್ ಹತ್ತಿರ ಟೀ ಕುಡಿಯುತ್ತಿದ್ದ ಮಾವನ ಮೇಲೆ ಮನಸ್ಸೊ ಇಚ್ಛೆ ಲಾಂಗ್ ಬೀಸಿದ್ದಾನೆ. ಲಾಂಗ್ ಬೀಸಿದ ಬಳಿಕ ರಾಜರೋಷವಾಗಿ ಬಂದು ಆಟೋದಲ್ಲಿ ಲಾಂಗ್ ಇಟ್ಟುಕೊಂಡು ವಾಪಸ್ ಹೋಗಿದ್ದಾನೆ.

ಹಲ್ಲೆಗೊಳಗಾದ ಭರತ್ ಮಾವ ಮಹಾಲಿಂಗ ಅವರ ಸ್ಥಿತಿ ಗಂಭೀರವಾಗಿದ್ದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಡೂರು ಪೊಲೀಸರು ಅಪ್ಪ ರಾಮಸ್ವಾಮಿ ಹಾಗೂ ಮಗ ಭರತ್ ನನ್ನ ವಶಕ್ಕೆ ಪಡೆದು ಕೋರ್ಟಿಗೆ ಹಾಜರುಪಡಿಸಿದ್ದಾರೆ.‌ ನ್ಯಾಯಾಲಯ ಇಬ್ಬರಿಗೂ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ-ಜಿಲ್ಲಾಧಿಕಾರಿ

ಚಿಕ್ಕಮಗಳೂರು: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಇದೇ ಮಾರ್ಚ್ ೧೮ ರಿಂದ ಪ್ರಾರಂಭವಾಗಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದರು. ಜಿ.ಪಂ.ನ ಅಬ್ದುಲ್...

ಜಿಲ್ಲೆಯಲ್ಲಿ ಗೃಹಬಳಕೆ ಸಿಲಿಂಡರ್‌ಗೆ ಕೊರತೆ ಇಲ್ಲ

ಚಿಕ್ಕಮಗಳೂರು, ಮಾ.೧೩: ಜಿಲ್ಲೆಯಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ ವಿತರಕರು ಗ್ರಾಹಕರ ಮನೆಬಾಗಿಲಿಗೆ ಸರಬರಾಜು ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯಲ್ಲಿ...

Related Articles

ವಿದ್ಯುತ್ ಸ್ಪರ್ಶಕ್ಕೆ ಯುವಕನ ಧಾರುಣ ಸಾವು

ಅಜ್ಜಂಪುರ: ವಿದ್ಯುತ್ ಸ್ಪರ್ಶದಿಂದ ಪ್ರವೀಣ್ ಎಂಬ ಯುವಕ ಮೃತಪಟ್ಟಿದ್ದಾನೆ ಸೊಕ್ಕೆ ಪರಮೇಶಣ್ಣ ಅವರ ಮಗ. ಹೆಬ್ಬೂರು...

ಖಾಸಗಿ ಬ್ಯಾಂಕ್ ಗಳಿಂದ ವಾಹನ ಮಾಲೀಕನಿಗೆ ವಂಚನೆ

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಖಾಸಗಿ ಬ್ಯಾಂಕ್ ಗಳು ಹಾಗೂ ಫೈನಾನ್ಸ್ ಕಂಪನಿಗಳು ಗ್ರಾಹಕರ ಮೇಲೆ ನಡೆಸುತ್ತಿರುವ...

ಜನವಸತಿ ಪ್ರದೇಶದಲ್ಲೂ ಕಾಡಾನೆಗಳ ಉಪಟಳ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಕಾಡಾನೆಗಳ ಉಪಟಳ ಮಿತಿಮೀರಿದ್ದು, ಸಾರ್ವಜನಿಕರು ಭೀತಿಯಲ್ಲಿ ದಿನದೂಡುವಂತಾಗಿದೆ. ಈವರೆಗೆ ಕೃಷಿ ಜಮೀನುಗಳಿಗೆ ಮಾತ್ರ...

ದ್ವಿಚಕ್ರ ವಾಹನ-ಕ್ರೈನ್ ನಡುವೆ ಅಪಘಾತ: ವ್ಯಕ್ತಿ ಸಾವು

ಅಜ್ಜಂಪುರ : ದ್ವಿಚಕ್ರ ವಾಹನ ಹಾಗೂ ಕ್ರೈನ್ ನಡುವೆ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ...