Home Crime News ಸೋದರ ಮಾವನ ಮೇಲೆ ಮನಸೊ ಇಚ್ಚೆ ಲಾಂಗ್ ಬೀಸಿದ ಭೂಪ
Crime News

ಸೋದರ ಮಾವನ ಮೇಲೆ ಮನಸೊ ಇಚ್ಚೆ ಲಾಂಗ್ ಬೀಸಿದ ಭೂಪ

Share
Share

ಚಿಕ್ಕಮಗಳೂರು : ತಾಯಿ ಮನೆಗೆ ಬರಲಿಲ್ಲ ಎಂದು ಅಳಿಯ ಮಾವನ ಮೇಲೆ ಮಚ್ಚು ಬೀಸಿರುವ ಘಟನೆ ಜಿಲ್ಲೆಯ ಕಡೂರು ಪಟ್ಟಣದ ವಿಜಯಲಕ್ಷ್ಮಿ ಟಾಕೀಸ್ ಬಳಿ ನಡೆದಿದೆ. ಕಡೂರು ಪಟ್ಟಣದಲ್ಲಿ ಆಟೋ ಓಡಿಸುತ್ತಿರುವ ಭರತ್ ಮಾವನ ಮೇಲೆ ಮಚ್ಚು ಬೀಸಿದ ಯುವಕ. ಭರತ್ ತಾಯಿ ಗಂಡನ ಜೊತೆ ಜಗಳವಾಡಿ ತವರು ಸೇರಿದ್ದರು. ಗಂಡನ ಮನೆಗೆ ಬಂದಿರಲಿಲ್ಲ. ಮಗ ಭರತ್ ಅಮ್ಮನಿಗೆ ಮನೆಗೆ ಬರುವಂತೆ ಹೇಳಿದ್ದನು. ಜೊತೆಗೆ, ಅಮ್ಮನನ್ನು ಮನೆಗೆ ಕಳುಹಿಸುವಂತೆ ಮಾವ ಮಹಾಲಿಂಗನಿಗೂ ಹೇಳಿದ್ದನು. ಆದರೂ, ತಾಯಿ ಗಂಡನ ಮನೆಗೆ ಹೋಗಿರಲಿಲ್ಲ. ಈ ಬಗ್ಗೆ ಭರತ್ ಮಾವ ಮಹಾಲಿಂಗ ಭರತ್ ಹಾಗೂ ಆತನ ತಂದೆ ರಾಮಸ್ವಾಮಿ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ನೀವು ನನ್ನ ತಂಗಿಗೆ ಸಾಕಷ್ಟು ಹಿಂಸೆ ನೀಡಿದ್ದೀರಾ. ಹಾಗಾಗಿ ಅವಳನ್ನ ಕಳಿಸುವುದಿಲ್ಲ. ಅಪ್ಪ-ಮಗ ಇಬ್ಬರನ್ನು ಜೈಲಿಗೆ ಕಳುಹಿಸುತ್ತೇನೆ ಎಂದು ಎಚ್ಚರಿಕೆ ನೀಡಿದ್ದನು.

ಆದರೂ, ಭರತ್ ಮೇಲಿಂದ ಮೇಲೆ ಫೋನ್ ಮಾಡಿ ಅಮ್ಮನನ್ನು ಕಳುಹಿಸುವಂತೆ ಬಲವಂತ ಮಾಡಿದ ಪರಿಣಾಮ ಮಾವ ಮಹಾಲಿಂಗ ಡಿಸೆಂಬರ್ 31ರಂದು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪೊಲೀಸ್ ಸ್ಟೇಷನ್ ಗೆ ಹೋಗಿ ದೂರು ನೀಡಿದರು ಎಂಬ ಸಿಟ್ಟಿನಿಂದ ಭರತ್ ಹಾಡಹಗಲೇ ನಡು ರಸ್ತೆಯಲ್ಲಿ ಮಾವನ ಮೇಲೆ ಮನಸ್ಸೊ ಇಚ್ಚೆ ಮಚ್ಚು ಬೀಸಿದ್ದಾನೆ. ಕಡೂರು ಪಟ್ಟಣದಲ್ಲಿ ಆಟೋ ಡ್ರೈವರ್ ವೃತ್ತಿ ಮಾಡುತ್ತಿರುವ ಭರತ್ ಆಟೋ ಹಿಂದೆ ಲಾಂಗ್ ಇಟ್ಟು ಮಾವನನ್ನ ಹುಡುಕಾಡಿದ್ದಾನೆ. ಕಡೂರು ಪಟ್ಟಣದ ವಿಜಯಲಕ್ಷ್ಮಿ ಟಾಕೀಸ್ ಬಳಿ ಕ್ಯಾಂಟೀನ್ ಹತ್ತಿರ ಟೀ ಕುಡಿಯುತ್ತಿದ್ದ ಮಾವನ ಮೇಲೆ ಮನಸ್ಸೊ ಇಚ್ಛೆ ಲಾಂಗ್ ಬೀಸಿದ್ದಾನೆ. ಲಾಂಗ್ ಬೀಸಿದ ಬಳಿಕ ರಾಜರೋಷವಾಗಿ ಬಂದು ಆಟೋದಲ್ಲಿ ಲಾಂಗ್ ಇಟ್ಟುಕೊಂಡು ವಾಪಸ್ ಹೋಗಿದ್ದಾನೆ.

ಹಲ್ಲೆಗೊಳಗಾದ ಭರತ್ ಮಾವ ಮಹಾಲಿಂಗ ಅವರ ಸ್ಥಿತಿ ಗಂಭೀರವಾಗಿದ್ದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಡೂರು ಪೊಲೀಸರು ಅಪ್ಪ ರಾಮಸ್ವಾಮಿ ಹಾಗೂ ಮಗ ಭರತ್ ನನ್ನ ವಶಕ್ಕೆ ಪಡೆದು ಕೋರ್ಟಿಗೆ ಹಾಜರುಪಡಿಸಿದ್ದಾರೆ.‌ ನ್ಯಾಯಾಲಯ ಇಬ್ಬರಿಗೂ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ

ಚಿಕ್ಕಮಗಳೂರು:  ಬಾಲ ಕಾರ್ಮಿಕರನ್ನು ಯಾವುದೇ ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪ ರಾಧವಾಗಿದ್ದು, ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವ ಮಾಲೀಕರಿಗೆ ೬ ತಿಂಗಳಿಗಿಂತ ಕಡಿಮೆಯಿಲ್ಲದಂತೆ ೨ ವರ್ಷ ಜೈಲು ಶಿಕ್ಷೆ ಹಾ ಗೂ...

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಂಸದರ ಅಸಮಾಧಾನ

ಚಿಕ್ಕಮಗಳೂರು: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ವಿವಿಧ ಏಜೆನ್ಸಿಗಳ ಆಮೆಗತಿಯ ಕಾರ್ಯವೈಖರಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಬಿಗಿ...

Related Articles

ಗಾಂಜಾ ಸೇವಿಸಿ ರಂಪಾಟ – ಏಳು ಮಂದಿ ಬಂಧನ

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಮಾದಕ ದ್ರವ್ಯ ಸೇವನೆ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ಚುರುಕುಗೊಳಿಸಿದ್ದು ಸಾರ್ವಜನಿಕ ಸ್ಥಳಗಳಲ್ಲಿ...

ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಚೇರಿಯಿಂದ ಮೋಟಾರ್ ಸೈಕಲ್‌ನಲ್ಲಿ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು...

ಎರಡು ಪ್ರತ್ಯೇಕ ಪೋಕೋ ಪ್ರಕರಣದಲ್ಲಿ ಇಬ್ಬರ ಬಂಧನ

ಬಾಳೆಹೊನ್ನೂರು: ಅಪ್ರಾಪ್ತರ ಮೇಲಿನ ದೌರ್ಜನ್ಯ ಕುರಿತಂತೆ 2 ಪ್ರತ್ಯೇಕ ಪೋಕೋ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಾಳೆಹೊನ್ನೂರು...