Home namma chikmagalur ಸಹಕಾರಿ ಸಂಘಕ್ಕೆ 55 ಲಕ್ಷ ರೂ. ನಿವ್ವಳ ಲಾಭ
namma chikmagalurchikamagalurHomeLatest News

ಸಹಕಾರಿ ಸಂಘಕ್ಕೆ 55 ಲಕ್ಷ ರೂ. ನಿವ್ವಳ ಲಾಭ

Share
Share

ಚಿಕ್ಕಮಗಳೂರು:  ಸೌಹಾರ್ದ ಸಹಕಾರಿ ಸಂಘ ವಾರ್ಷಿಕ ಶೇ.೨೩ ರಷ್ಟು ಪ್ರಗತಿ ಸಾಧಿಸುವ ಮೂಲಕ ಪ್ರಸಕ್ತ ಸಾಲಿನಲ್ಲಿ ೫೫ ಲಕ್ಷ ರೂ.ಗಳ ನಿವ್ವಳ ಲಾಭವನ್ನು ಗಳಿಸಿದೆ ಎಂದು ಸಮಾನ ಪತ್ತಿನ ಸೌಹಾ ರ್ದ ಸಹಕಾರಿ ಸಂಘದ ಅಧ್ಯಕ್ಷ ಕೆ.ಬಿ.ದೇವರಾಜ್ ತಿಳಿಸಿದರು.
ನಗರದ ಬೈಪಾಸ್ ಸಮೀಪದ ಕನಸು ಸಭಾಂಗಣದಲ್ಲಿ ಸಮಾನ ಪತ್ತಿನ ಸೌಹಾರ್ದ ಸಹಕಾರಿ ಸಂಘ ದ ೨೦೨೪-೨೫ನೇ ಸಾಲಿನ ಸರ್ವ ಸದಸ್ಯರ ಮಹಾಸಭೆಯನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾ ಡಿದರು.

ಪ್ರಸ್ತುತ ಸಂಘದಲ್ಲಿ ೧೬.೪೪ ಲಕ್ಷ ಠೇವಣಿಯಿದೆ. ಜೊತೆಗೆ ಶೇ.೫೫ ಲಕ್ಷ ನಿವ್ವಳ ಲಾಭದಿಂದ ಹಿನ್ನೆಲೆಯ ಲ್ಲಿ ಸದಸ್ಯರಿಗೆ ಶೇ.೧೪ ರಷ್ಟು ಡಿವಿಡೆಂಟ್ ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ಸಂಘದ ಸದಸ್ಯರು ಹಾ ಗೂ ಸಾರ್ವಜನಿಕರಿಗೆ ಅನುಕೂಲವಾಗಲು ಸೇವಾ ಕೇಂದ್ರಗಳನ್ನು ತೆರೆಯುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.

ಸದಸ್ಯರ ಆರ್ಥಿಕ ಅಭಿವೃದ್ದಿ ನಿಟ್ಟಿನಲ್ಲಿ ೧೪.೭೫ ಕೋಟಿ ಸಾಲಸೌಲಭ್ಯವನ್ನು ಕಲ್ಪಿಸಿದ್ದು, ಶೇ.೯೮ ರಷ್ಟು ವಸೂಲಾತಿ ಕಾರ್ಯವು ಪೂರ್ಣಗೊಂಡು ಆರ್ಥಿಕ, ಶೈಕ್ಷಣಿಕವಾಗಿ ಸಂಘವು ಮುನ್ನೆಲೆಯಲ್ಲಿದೆ. ಸದಸ್ಯರು ಹೆಚ್ಚಾಗಿ ಎಸ್‌ಬಿ ಖಾತೆಯಲ್ಲಿ ವ್ಯವಹಾರ ನಡೆಸುವ ಮೂಲಕ ಸಹಕಾರಿ ಸಂಘವನ್ನು ಬೆಳವಣಿಗೆಯತ್ತ ಕೊ ಂಡೊಯ್ಯಬೇಕು ಎಂದರು.

ವಿಶೇಷವಾಗಿ ಸಂಘದಲ್ಲಿ ಅರ್ಹತೆ ಹೊಂದಿರುವ ಹಿರಿಯರ ಸದಸ್ಯರಿಗೆ ಮನೆಬಾಗಿಲಿಗೆ ಸೇವೆ ಒದಗಿ ಸುವ ಕಾರ್ಯ ಮಾಡಲಾಗುತ್ತಿದೆ. ಜೊತೆಗೆ ಸಾಮಾಜಿಕ ಕಾರ್ಯಗಳಲ್ಲಿ ಸಂಘವು ತೊಡಗಿಸಿಕೊಂಡಿದೆ ಎಂ ದ ಅವರು ಶಾಲಾವಿದ್ಯಾರ್ಥಿ, ವೃದ್ದರಿಗೆ ಅನುಕೂಲ ಮೂಲಸೌಕರ್ಯವನ್ನು ಪೂರೈಸಲಾಗಿದೆ ಎಂದು ಹೇ ಳಿದರು.

ಈ ಸಂದರ್ಭದಲ್ಲಿ ಸಹಕಾರಿ ಸಂಘದ ಉಪಾಧ್ಯಕ್ಷ ಡಿ.ಪಿ.ಕೃಷ್ಣಮೂರ್ತಿ, ನಿರ್ದೇಶಕರುಗಳಾದ ಕೆ.ಎನ್. ದೊಡ್ಡೇಗೌಡ, ಬಿ.ಜಿ.ಸೋಮಶೇಖರಪ್ಪ, ಯು.ಎಂ.ಜಯರಾಮೇಗೌಡ, ಬಿ.ಎ.ಬಾಲಕೃಷ್ಣ, ಎಂ.ಎ.ರವಿಕು ಮಾರ್, ಗಂಗಾಧರ್ ನಾಯ್ಕ್, ಕೆ.ವಿ.ಮಮತಾ, ಮುಖ್ಯಕಾರ್ಯನಿರ್ವಹಣಾಧಿಕಾರಿ ಬಿ.ವೈ.ವೆಂಕಟೇಶ್ ಉ ಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಎಸ್.ಪ್ರೇಮ ಪ್ರಾರ್ಥಿಸಿದರು. ಕೆ.ಜಿ.ನೀಲಕಂಠಪ್ಪ ನಿರೂಪಿಸಿದರು. ಸೋಮಶೇಖ ರಪ್ಪ ಸ್ವಾಗತಿಸಿದರು. ಗಂಗಾಧರ್ ನಾಯ್ಕ್ ವಂದಿಸಿದರು.

Net profit of Rs. 55 lakh for the cooperative society

Share

Leave a comment

Leave a Reply

Your email address will not be published. Required fields are marked *

Don't Miss

ಗಿರಿ ಪ್ರದೇಶದಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು ನೂತನ ಸಂಚಾರ ವ್ಯವಸ್ಥೆ

ಚಿಕ್ಕಮಗಳೂರು: : ಮುಳ್ಳಯ್ಯನಗಿರಿ ಭಾಗದಲ್ಲಿ ಇತ್ತೀಚೆಗೆ ವಾರಾಂತ್ಯದಲ್ಲಿ ವಾಹನಗಳ ದಟ್ಟಣೆ ನಿಯಂತ್ರಿಸಲು ಜಿಲ್ಲಾಡಳಿತದಿಂದ ಕ್ರಮ ಕೈಗೊಳ್ಳಲಾಗುತ್ತಿದ್ದು, ಎರಡು ಸ್ಲಾಟ್‌ಗಳಲ್ಲಿ ಪ್ರತೀದಿನ ವಾಹನಗಳನ್ನು ಗಿರಿಭಾಗಕ್ಕೆ ಬಿಡಲಾಗುವುದು ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ತಿಳಿಸಿದರು....

ಕಾವೇರುತ್ತಿದೆ ಅಜ್ಜಂಪುರ ಪಟ್ಟಣ ಪಂಚಾಯತಿ ಚುನಾವಣೆ

ಅಜ್ಜಂಪುರ: ಕಳೆದ ಏಳು ವರ್ಷಗಳಿಂದ ಚುನಾಯಿತ ಪ್ರತಿನಿಧಿಗಳು ಇಲ್ಲದೆ ಬಣಗುಡುತ್ತಿದ್ದ ಪಟ್ಟಣ ಪಂಚಾಯತಿಗೆ ಆಗಷ್ಟ್ 17 ರಂದು ಚುನಾವಣೆ ದಿನಾಂಕ ನಿಗದಿಯಾಗಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿ ಹಾಗೂ ಜನತಾದಳದ ಮಧ್ಯೆ ಬಿರುಸಿನ...

Related Articles

ಮಕ್ಕಳ ಬಾಲ್ಯ ಸುರಕ್ಷತೆಗಾಗಿ ಭದ್ರ ಬಾಲ್ಯ ಯೋಜನೆ ಅನುಷ್ಠಾನ

ಚಿಕ್ಕಮಗಳೂರು: ಮಕ್ಕಳ ಬಾಲ್ಯವನ್ನು ಸುರಕ್ಷಿತಗೊಳಿಸುವ ಗುರಿ ಇರಿಸಿಕೊಂಡು ಜಿಲ್ಲೆಯಲ್ಲಿ ಭದ್ರ ಬಾಲ್ಯ ಯೋಜನೆ ಅನುಷ್ಠಾನಗೊಳಿಸಲಾಗಿದ್ದು, ಎಲ್ಲಾ...

ಕ್ಷೌರಿಕ ವೃತ್ತಿಯ ದರಪಟ್ಟಿಯ ದುರ್ಬಳಕೆ ವಿರುದ್ಧ ಸಮಾಜದಿಂದ ಪ್ರತಿಭಟನೆ

ಚಿಕ್ಕಮಗಳೂರು:  ಕ್ಷೌರಿಕ ವೃತ್ತಿಯ ದರಪಟ್ಟಿಯ ದುರ್ಬಳಕೆ ಮತ್ತು ಸಾಮಾಜಿಕ ಜಾಲ ತಾಣಗಳಲ್ಲಿ ನಿಗಧಿತ ದರಕ್ಕಿಂತ ಕಡಿಮೆ...

ಮಾದಕ ವಸ್ತು ವಿರೋಧಿ ಜಾಗೃತಿ ಸಮಿತಿ ರಚನೆ ಕಡ್ಡಾಯ 

ಚಿಕ್ಕಮಗಳೂರು:  ಶಾಲಾ ಕಾಲೇಜುಗಳಲ್ಲಿ ಮಾದಕವಸ್ತು ವಿರೋಧಿ ಜಾಗೃತಿ ಸಮಿತಿಗಳನ್ನು ಕಡ್ಡಾಯವಾಗಿ ರಚಿಸುವ ಮೂಲಕ ಮಾದಕ ವಸ್ತು...

ವೇದಾನದಿ ನೀರಿನ ಹಂಚಿಕೆಯಲ್ಲಿ ರೈತರು ಸಂಯಮ ಕಾಪಾಡಬೇಕು

ಚಿಕ್ಕಮಗಳೂರು: ವೇದಾ ನದಿ ನೀರಿನ ಹಂಚಿಕೆ ವಿಚಾರದಲ್ಲಿ ರೈತರು ಸಂಯಮ ಕಾಪಾಡಬೇಕು. ಜೊತೆಗೆ ಕೆರೆ ತುಂಬಿಸುವ...