Home namma chikmagalur ನೂತನ ಕರ್ನಾಟಕ ರಾಜ್ಯ ರೈತ ಸಂಘ ಅಸ್ತಿತ್ವಕ್ಕೆ
namma chikmagalurchikamagalurHomeLatest News

ನೂತನ ಕರ್ನಾಟಕ ರಾಜ್ಯ ರೈತ ಸಂಘ ಅಸ್ತಿತ್ವಕ್ಕೆ

Share
Share

ಚಿಕ್ಕಮಗಳೂರು: ಸಾಮೂಹಿಕ ನಾಯಕತ್ವದಡಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಶಾಖೆಯನ್ನು ಆರಂಭಿಸಲಾಗಿದ್ದು, ಅಧ್ಯಕ್ಷರಾಗಿ ಕೆ.ಟಿ. ಆನಂದ್, ಪ್ರಧಾನ ಕಾರ್ಯದರ್ಶಿಯಾಗಿ ಮೋಹನ್, ಮಹಿಳಾ ಅಧ್ಯಕ್ಷರಾಗಿ ಕೆಂಪಮ್ಮ, ಗೌರವ ಅಧ್ಯಕ್ಷರಾಗಿ ಅಜಯ್ ಕುಮಾರ್, ಉಪಾಧ್ಯಕ್ಷರಾಗಿ ಕುಮಾರ್ ನಾಯ್ಕ, ಗೌರವ ಕಾರ್ಯದರ್ಶಿಯಾಗಿ ಚನ್ನಬಸಪ್ಪ ತಡಗ ಇವರುಗಳನ್ನು ಆಯ್ಕೆಮಾಡಲಾಗಿದೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ರೈತ ಸಂಘದ ಜಿಲ್ಲಾಧ್ಯಕ್ಷ ಕೆ.ಟಿ. ಆನಂದ್, ಸಂಘದ ವರಿಷ್ಟರಾದ ಚುಕ್ಕಿ ನಂಜುಂಡಸ್ವಾಮಿ, ಕೆ.ಟಿ. ಗಂಗಾಧರ್, ಕೆ.ಎಸ್. ಪುಟ್ಟಣ್ಣಯ್ಯ ಅವರ ಪುತ್ರ ದರ್ಶನ್ ಪುಟ್ಟಣ್ಣಯ್ಯ ಹಾಗೂ ಕಣಗಾಲ್ ಮೂರ್ತಿ ನೇತೃತ್ವದಲ್ಲಿ ಈಗಾಗಲೇ ೧೮ ಜಿಲ್ಲೆಯಲ್ಲಿ ಸಂಘಟನೆಯನ್ನು ರಚನೆ ಮಾಡಲಾಗಿದೆ ಎಂದು ಹೇಳಿದರು.

ರಾಜ್ಯ ವರಿಷ್ಟರ ತೀರ್ಮಾನದಂತೆ ಜು.೨ ರಂದು ಇಲ್ಲಿನ ಎಪಿಎಂಸಿಯಲ್ಲಿ ಜಿಲ್ಲಾಮಟ್ಟದ ಪದಾಧಿಕಾರಿಗಳನ್ನು ಆಯ್ಕೆಮಾಡಲಾಗಿದ್ದು, ಚಿಕ್ಕಮಗಳೂರು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಸಧ್ಯದಲ್ಲೇ ತಾಲ್ಲೂಕು ಮಟ್ಟದ ಸಂಘಟನೆಗಳನ್ನು ರಚನೆ ಮಾಡಲಾಗುವುದೆಂದು ತಿಳಿಸಿದರು.

ರೈತ ಸಂಘದ ಕಡೂರು ತಾಲ್ಲೂಕು ಅಧ್ಯಕ್ಷರಾಗಿ ಕೃಷ್ಣಮೂರ್ತಿ, ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್ ಮತ್ತು ಮಲ್ಲಪ್ಪ, ಉಪಾಧ್ಯಕ್ಷರುಗಳಾಗಿ ಮಂಜುನಾಥ್ ಮತ್ತು ಬ್ಯಾಗಡೇಹಳ್ಳಿ ಬಸವರಾಜ್ ಇವರುಗಳನ್ನು ಆಯ್ಕೆಮಾಡಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಗೌರವಾಧ್ಯಕ್ಷ ಅಜಯ್ ಕುಮಾರ್, ಬಸವರಾಜ್, ಕುಮಾರ್ ನಾಯ್ಕ, ಕೆ.ಆರ್. ವಿಜಯ್ ಕುಮಾರ್, ಕೆಂಪಮ್ಮ ಮತ್ತಿತರರು ಉಪಸ್ಥಿತರಿದ್ದರು.

New Karnataka State Farmers’ Association comes into existence

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...