Home namma chikmagalur ನೂತನ ಕರ್ನಾಟಕ ರಾಜ್ಯ ರೈತ ಸಂಘ ಅಸ್ತಿತ್ವಕ್ಕೆ
namma chikmagalurchikamagalurHomeLatest News

ನೂತನ ಕರ್ನಾಟಕ ರಾಜ್ಯ ರೈತ ಸಂಘ ಅಸ್ತಿತ್ವಕ್ಕೆ

Share
Share

ಚಿಕ್ಕಮಗಳೂರು: ಸಾಮೂಹಿಕ ನಾಯಕತ್ವದಡಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಶಾಖೆಯನ್ನು ಆರಂಭಿಸಲಾಗಿದ್ದು, ಅಧ್ಯಕ್ಷರಾಗಿ ಕೆ.ಟಿ. ಆನಂದ್, ಪ್ರಧಾನ ಕಾರ್ಯದರ್ಶಿಯಾಗಿ ಮೋಹನ್, ಮಹಿಳಾ ಅಧ್ಯಕ್ಷರಾಗಿ ಕೆಂಪಮ್ಮ, ಗೌರವ ಅಧ್ಯಕ್ಷರಾಗಿ ಅಜಯ್ ಕುಮಾರ್, ಉಪಾಧ್ಯಕ್ಷರಾಗಿ ಕುಮಾರ್ ನಾಯ್ಕ, ಗೌರವ ಕಾರ್ಯದರ್ಶಿಯಾಗಿ ಚನ್ನಬಸಪ್ಪ ತಡಗ ಇವರುಗಳನ್ನು ಆಯ್ಕೆಮಾಡಲಾಗಿದೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ರೈತ ಸಂಘದ ಜಿಲ್ಲಾಧ್ಯಕ್ಷ ಕೆ.ಟಿ. ಆನಂದ್, ಸಂಘದ ವರಿಷ್ಟರಾದ ಚುಕ್ಕಿ ನಂಜುಂಡಸ್ವಾಮಿ, ಕೆ.ಟಿ. ಗಂಗಾಧರ್, ಕೆ.ಎಸ್. ಪುಟ್ಟಣ್ಣಯ್ಯ ಅವರ ಪುತ್ರ ದರ್ಶನ್ ಪುಟ್ಟಣ್ಣಯ್ಯ ಹಾಗೂ ಕಣಗಾಲ್ ಮೂರ್ತಿ ನೇತೃತ್ವದಲ್ಲಿ ಈಗಾಗಲೇ ೧೮ ಜಿಲ್ಲೆಯಲ್ಲಿ ಸಂಘಟನೆಯನ್ನು ರಚನೆ ಮಾಡಲಾಗಿದೆ ಎಂದು ಹೇಳಿದರು.

ರಾಜ್ಯ ವರಿಷ್ಟರ ತೀರ್ಮಾನದಂತೆ ಜು.೨ ರಂದು ಇಲ್ಲಿನ ಎಪಿಎಂಸಿಯಲ್ಲಿ ಜಿಲ್ಲಾಮಟ್ಟದ ಪದಾಧಿಕಾರಿಗಳನ್ನು ಆಯ್ಕೆಮಾಡಲಾಗಿದ್ದು, ಚಿಕ್ಕಮಗಳೂರು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಸಧ್ಯದಲ್ಲೇ ತಾಲ್ಲೂಕು ಮಟ್ಟದ ಸಂಘಟನೆಗಳನ್ನು ರಚನೆ ಮಾಡಲಾಗುವುದೆಂದು ತಿಳಿಸಿದರು.

ರೈತ ಸಂಘದ ಕಡೂರು ತಾಲ್ಲೂಕು ಅಧ್ಯಕ್ಷರಾಗಿ ಕೃಷ್ಣಮೂರ್ತಿ, ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್ ಮತ್ತು ಮಲ್ಲಪ್ಪ, ಉಪಾಧ್ಯಕ್ಷರುಗಳಾಗಿ ಮಂಜುನಾಥ್ ಮತ್ತು ಬ್ಯಾಗಡೇಹಳ್ಳಿ ಬಸವರಾಜ್ ಇವರುಗಳನ್ನು ಆಯ್ಕೆಮಾಡಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಗೌರವಾಧ್ಯಕ್ಷ ಅಜಯ್ ಕುಮಾರ್, ಬಸವರಾಜ್, ಕುಮಾರ್ ನಾಯ್ಕ, ಕೆ.ಆರ್. ವಿಜಯ್ ಕುಮಾರ್, ಕೆಂಪಮ್ಮ ಮತ್ತಿತರರು ಉಪಸ್ಥಿತರಿದ್ದರು.

New Karnataka State Farmers’ Association comes into existence

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...