Home namma chikmagalur ನೂತನ ಕರ್ನಾಟಕ ರಾಜ್ಯ ರೈತ ಸಂಘ ಅಸ್ತಿತ್ವಕ್ಕೆ
namma chikmagalurchikamagalurHomeLatest News

ನೂತನ ಕರ್ನಾಟಕ ರಾಜ್ಯ ರೈತ ಸಂಘ ಅಸ್ತಿತ್ವಕ್ಕೆ

Share
Share

ಚಿಕ್ಕಮಗಳೂರು: ಸಾಮೂಹಿಕ ನಾಯಕತ್ವದಡಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಶಾಖೆಯನ್ನು ಆರಂಭಿಸಲಾಗಿದ್ದು, ಅಧ್ಯಕ್ಷರಾಗಿ ಕೆ.ಟಿ. ಆನಂದ್, ಪ್ರಧಾನ ಕಾರ್ಯದರ್ಶಿಯಾಗಿ ಮೋಹನ್, ಮಹಿಳಾ ಅಧ್ಯಕ್ಷರಾಗಿ ಕೆಂಪಮ್ಮ, ಗೌರವ ಅಧ್ಯಕ್ಷರಾಗಿ ಅಜಯ್ ಕುಮಾರ್, ಉಪಾಧ್ಯಕ್ಷರಾಗಿ ಕುಮಾರ್ ನಾಯ್ಕ, ಗೌರವ ಕಾರ್ಯದರ್ಶಿಯಾಗಿ ಚನ್ನಬಸಪ್ಪ ತಡಗ ಇವರುಗಳನ್ನು ಆಯ್ಕೆಮಾಡಲಾಗಿದೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ರೈತ ಸಂಘದ ಜಿಲ್ಲಾಧ್ಯಕ್ಷ ಕೆ.ಟಿ. ಆನಂದ್, ಸಂಘದ ವರಿಷ್ಟರಾದ ಚುಕ್ಕಿ ನಂಜುಂಡಸ್ವಾಮಿ, ಕೆ.ಟಿ. ಗಂಗಾಧರ್, ಕೆ.ಎಸ್. ಪುಟ್ಟಣ್ಣಯ್ಯ ಅವರ ಪುತ್ರ ದರ್ಶನ್ ಪುಟ್ಟಣ್ಣಯ್ಯ ಹಾಗೂ ಕಣಗಾಲ್ ಮೂರ್ತಿ ನೇತೃತ್ವದಲ್ಲಿ ಈಗಾಗಲೇ ೧೮ ಜಿಲ್ಲೆಯಲ್ಲಿ ಸಂಘಟನೆಯನ್ನು ರಚನೆ ಮಾಡಲಾಗಿದೆ ಎಂದು ಹೇಳಿದರು.

ರಾಜ್ಯ ವರಿಷ್ಟರ ತೀರ್ಮಾನದಂತೆ ಜು.೨ ರಂದು ಇಲ್ಲಿನ ಎಪಿಎಂಸಿಯಲ್ಲಿ ಜಿಲ್ಲಾಮಟ್ಟದ ಪದಾಧಿಕಾರಿಗಳನ್ನು ಆಯ್ಕೆಮಾಡಲಾಗಿದ್ದು, ಚಿಕ್ಕಮಗಳೂರು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಸಧ್ಯದಲ್ಲೇ ತಾಲ್ಲೂಕು ಮಟ್ಟದ ಸಂಘಟನೆಗಳನ್ನು ರಚನೆ ಮಾಡಲಾಗುವುದೆಂದು ತಿಳಿಸಿದರು.

ರೈತ ಸಂಘದ ಕಡೂರು ತಾಲ್ಲೂಕು ಅಧ್ಯಕ್ಷರಾಗಿ ಕೃಷ್ಣಮೂರ್ತಿ, ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್ ಮತ್ತು ಮಲ್ಲಪ್ಪ, ಉಪಾಧ್ಯಕ್ಷರುಗಳಾಗಿ ಮಂಜುನಾಥ್ ಮತ್ತು ಬ್ಯಾಗಡೇಹಳ್ಳಿ ಬಸವರಾಜ್ ಇವರುಗಳನ್ನು ಆಯ್ಕೆಮಾಡಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಗೌರವಾಧ್ಯಕ್ಷ ಅಜಯ್ ಕುಮಾರ್, ಬಸವರಾಜ್, ಕುಮಾರ್ ನಾಯ್ಕ, ಕೆ.ಆರ್. ವಿಜಯ್ ಕುಮಾರ್, ಕೆಂಪಮ್ಮ ಮತ್ತಿತರರು ಉಪಸ್ಥಿತರಿದ್ದರು.

New Karnataka State Farmers’ Association comes into existence

Share

Leave a comment

Leave a Reply

Your email address will not be published. Required fields are marked *

Don't Miss

ದೇಶದ ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಇಲ್ಲ

ಬೀರೂರು: ‘ದೇಶದ ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಇಲ್ಲದೆ ಮುಂದಿನ ಪೀಳಿಗೆಗೆ ಕೊಡುಗೆಯಾಗುವಂಥ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ’ ಎಂದು ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು. ಪಟ್ಟಣದ ಮಾರ್ಕೆಟ್ ರಸ್ತೆಯಲ್ಲಿ ಭಾನುವಾರ...

ಅಜ್ಜಂಪುರದ ರೈಲ್ವೆ ಲೆವೆಲ್ ಕ್ರಾಸಿಂಗ್ ರಸ್ತೆ ಮೇಲ್ಸೇತುವೆ ಕಾಮಗಾರಿಗೆ ಚಾಲನೆ

ಚಿಕ್ಕಮಗಳೂರು:  ದೇಶದ ಅಭಿವೃದ್ಧಿಯ ಸಂಕೇತವೇ ರೈಲ್ವೆಯಾಗಿದ್ದು, ರೈಲ್ವೆ ಇಲಾಖೆಯನ್ನು ಎಷ್ಟು ಮಟ್ಟಿಗೆ ಅಭಿವೃದ್ಧಿಪಡಿಸುತ್ತೇವೆಯೋ ಅಷ್ಟು ದೇಶಕ್ಕೆ ಒಳ್ಳೆಯದಾಗುತ್ತದೆ ಎಂಬುದು ಪ್ರಧಾನಿ ನರೇಂದ್ರ ಮೋದಿ ಅವರ ಸಂದೇಶವಾಗಿದೆ ಎಂದು ಕೇಂದ್ರ ರೈಲ್ವೆ ರಾಜ್ಯ...

Related Articles

ಜಿಲ್ಲೆಯಲ್ಲಿ ಗೂಟದ ಕಾರಿಗಾಗಿ “ಕೈ ಪಡೆ” ಯ ಕಸರತ್ತು !

ಚಿಕ್ಕಮಗಳೂರು: ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರಿಂದ ಉಳಿದ ಎರಡು ವರ್ಷಗಳ ಅವಧಿಗೆ ಡಿ.ಕೆ.ಮುಖ್ಯಮಂತ್ರಿಯಾಗಿ ದೇವಸ್ಥಾನ,...

ಧಾರಾಕಾರ ಮಳೆಗೆ ಕಾಫಿಸಿಟಿ ಫುಲ್ ಕೂಲ್

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ವರುಣನ ಅಬ್ಬರ ಜೋರಾಗಿದ್ದು ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು ಕಾಫಿ ಸಿಟಿ ಈಗ...

ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಮಲೆನಾಡಿಗರು ಆಕ್ರೋಶ

ಕಳಸ: ಸರ್ಕಾರದ ಬೇಜವಾಬ್ದಾರಿತನ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದ ವಿರುದ್ಧ ಮಲೆನಾಡಿಗರು ಆಕ್ರೋಶದ ತೊಡೆ ತಟ್ಟಿದ್ದಾರೆ. ಸ್ವಾತಂತ್ರ್ಯ...

ಭಾರಿ ಮಳೆಯ ಆರ್ಭಟಕ್ಕೆ ಮೆಸ್ಕಾಂಗೆ 3.21 ಕೋಟಿ ಹಾನಿ

ಚಿಕ್ಕಮಗಳೂರು: ಮುಂಗಾರುಪೂರ್ವ ಮಳೆ ಮತ್ತು ಭಾರಿ ಗಾಳಿಯ ಆರ್ಭಟಕ್ಕೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮೆಸ್ಕಾಂ ವ್ಯಾಪ್ತಿಯಲ್ಲಿ ಭಾರಿ...