Home namma chikmagalur ನಾಡು-ನುಡಿ-ನೆಲ-ಜಲ ರಕ್ಷಣೆಗೆ ನೂತನ ರಕ್ಷಣಾ ವೇದಿಕೆ ಅಸ್ತಿತ್ವಕ್ಕೆ 
namma chikmagalurchikamagalurHomeLatest News

ನಾಡು-ನುಡಿ-ನೆಲ-ಜಲ ರಕ್ಷಣೆಗೆ ನೂತನ ರಕ್ಷಣಾ ವೇದಿಕೆ ಅಸ್ತಿತ್ವಕ್ಕೆ 

Share
Share

ಚಿಕ್ಕಮಗಳೂರು:  ಸಮಾಜಸೇವೆ ಮತ್ತು ಕನ್ನಡ ನಾಡು-ನುಡಿ, ನೆಲ-ಜಲ ರಕ್ಷಣೆ ಮಾಡುವ ಉದ್ದೇಶದಿಂದ ಕರ್ನಾಟಕ ರಾಜ್ಯ ರಕ್ಷಣಾ ವೇದಿಕೆಯನ್ನು ಹೊಸದಾಗಿ ಅಸ್ತಿತ್ವಕ್ಕೆ ತರಲಾಗಿದೆ ಎಂದು ವೇದಿಕೆಯ ರಾಜ್ಯಾಧ್ಯಕ್ಷ ರಾಜ್ ಪ್ರಶಾಂತ್ ತಿಳಿಸಿದರು.
ಅವರು ಇಂದು ನಗರದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವೇದಿಕೆಯ ಜಿಲ್ಲಾ ಘಟಕವನ್ನು ಚಿಕ್ಕಮಗಳೂರಿನಲ್ಲಿ ಮೇ.೨೩ ರಂದು ಸ್ಥಾಪಿಸಲಾಗಿದ್ದು, ರಾಜ್ಯದ ೩೧ ಜಿಲ್ಲೆಗಳಲ್ಲಿ ಮತ್ತು ೨೪೪ ತಾಲ್ಲೂಕುಗಳಲ್ಲಿ ಘಟಕಗಳನ್ನು ಆರಂಭಿಸಲು ಗುರಿಹೊಂದಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಘಟಕವನ್ನು ಪದಾಧಿಕಾರಿಗಳ ಆಯ್ಕೆಯ ನಂತರ ಶೀಘ್ರದಲ್ಲೇ ಉದ್ಘಾಟಿಸಲು ನಿರ್ಧರಿಸಿದ್ದೇವೆ, ಈಗಾಗಲೇ ಹಾಸನ, ಬೇಲೂರು, ಶಿವಮೊಗ್ಗ ಮುಂತಾದೆಡೆ ರಕ್ಷಣಾ ವೇದಿಕೆಯನ್ನು ಸ್ಥಾಪಿಸಿದ್ದೇವೆ ಎಂದರು.

ರಾಜ್ಯದ ಅಭಿವೃದ್ಧಿಗೆ ಶ್ರಮಿಸುವುದು, ಧಕ್ಷೆ ಉಂಟಾದಲ್ಲಿ ಹೋರಾಟ ಮಾಡುವುದು, ಬಡವರು ಮತ್ತು ಶೋಷಿತರ ಮೇಲೆ ನಡೆಯುವ ದೌರ್ಜನ್ಯ ತಡೆಯುವ ಜೊತೆಗೆ ಅವರ ಏಳಿಗೆಗೆ ಶ್ರಮಿಸುವುದು, ಪರಿಸರ ಸಂರಕ್ಷಣೆ, ಜನತೆಯ ಹಕ್ಕು ಮತ್ತು ಸ್ವಾತಂತ್ರ್ಯ ರಕ್ಷಣೆ, ರೈತರ ಹಾಗೂ ಕಾರ್ಮಿಕರ ಅಭಿವೃದ್ಧಿಗೆ ಶ್ರಮಿಸಲು ಉದ್ದೇಶಿಸಲಾಗಿದೆ ಎಂದರು.

ಗ್ರಾಮೀಣ ಜನತೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮವಹಿಸಲಾಗುವುದು, ಪ್ರಮುಖ ರಾಷ್ಟ್ರೀಯ ಹಬ್ಬಗಳ ಆಚರಣೆ ಹಮ್ಮಿಕೊಳ್ಳಲಾಗುವುದು, ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡುವ ಸಲುವಾಗಿ ಕ್ರೀಡಾಕೂಟಗಳನ್ನು ಏರ್ಪಡಿಸಿ ಜಿಲ್ಲಾ ಮಟ್ಟ ಹಾಗೂ ರಾಜ್ಯಮಟ್ಟದ ಕ್ರೀಡೆಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ ಎಂದರು.

ಅತೀ ಶೀಘ್ರದಲ್ಲಿ ವೇದಿಕೆಯನ್ನು ಜಿಲ್ಲಾ ಮಟ್ಟದಲ್ಲಿ, ತಾಲ್ಲೂಕು ಮಟ್ಟದಲ್ಲಿ, ನಗರ ಮಟ್ಟದಲ್ಲಿ ಘಟಕಗಳನ್ನು ಸ್ಥಾಪಿಸಿ ಅವುಗಳಿಗೆ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ಕಾರ್ಯಕರ್ತರು, ಸದಸ್ಯರನ್ನು ನೇಮಿಸುವ ಉದ್ದೇಶವನ್ನು ಹೊಂದಿದ್ದು, ಆಸಕ್ತಿ ಉಳ್ಳವರು ತಮ್ಮ ಮೊಬೈಲ್ ಸಂಖ್ಯೆ-೯೦೧೯೯೫೧೮೩೭ ನ್ನು ಸಂಪರ್ಕಿಸಬಹುದಾಗಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ವೇದಿಕೆ ಉಪಾಧ್ಯಕ್ಷ ಲಕ್ಷ್ಮಣ್, ನಿರ್ದೇಶಕರುಗಳಾದ ಬಿ.ಬಿ. ಹಾಲಪ್ಪ, ಚಂದ್ರು, ಕುಮಾರ್ ಉಪಸ್ಥಿತರಿದ್ದರು.

New protection platform to be established to protect land language soil and water

Share

Leave a comment

Leave a Reply

Your email address will not be published. Required fields are marked *

Don't Miss

ಗುಡುಗು-ಸಿಡಿಲಿನ ಭಾರಿ ಮಳೆಗೆ ಇಡೀ ನಗರ ತಲ್ಲಣ

ಚಿಕ್ಕಮಗಳೂರು: ಶುಕ್ರವಾರ ಮಧ್ಯರಾತ್ರಿ ಗುಡುಗು-ಸಿಡಿಲಿನ ಅಬ್ಬರದೊಂದಿಗೆ ಸುರಿದ ಭಾರಿ ಮಳೆಗೆ ಇಡೀ ನಗರ ತಲ್ಲಣಗೊಂಡಿದೆ. ಮರಗಳು ವಿದ್ಯುತ್ ಕಂಬಗಳ ಸಹಿತ ರಸ್ತೆಗೆ ಉರಳಿದವು. ಹಲವು ಕಟ್ಟಡಗಳ ಚಾವಣಿ ಹಾರಿ ಹೋಗಿವೆ. ಮಧ್ಯರಾತ್ರಿ...

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನೇಮಕ ನಿಯಮ ಬಾಹಿರ

ಚಿಕ್ಕಮಗಳೂರು: ಇತ್ತೀಚೆಗೆ ಡಿ. ರಾಮೇಗೌಡರವರನ್ನು ಕರ್ನಾಟಕ ರಾಜ್ಯ ರೈತ ಸಂಘದ ಚಿಕ್ಕಮಗಳೂರು ತಾಲ್ಲೂಕು ಘಟಕದ ಅಧ್ಯಕ್ಷನಾಗಿ ನೇಮಕ ಮಾಡಿರುವುದು ನಿಯಮ ಬಾಹಿರವಾಗಿದ್ದು, ಈ ಆಯ್ಕೆ ಅಮಾನ್ಯ ಎಂದು ಜಿಲ್ಲಾಧ್ಯಕ್ಷ ಮಹೇಶ್ ಹೇಳಿದರು....

Related Articles

‘ನಮ್ಮೂರಿಗೆ ರಸ್ತೆ ಅಭಿವೃದ್ಧಿ ಬೇಡ’ ಎಂದು ಗ್ರಾಮಸ್ಥರು….?

ಚಿಕ್ಕಮಗಳೂರು: ಸಾಮಾನ್ಯವಾಗಿ ಗ್ರಾಮಗಳಿಗೆ ರಸ್ತೆ ಬೇಕು, ಕುಡಿಯುವ ನೀರು ಬೇಕು, ವಿದ್ಯುತ್ ಬೇಕು ಎಂದು ಜನ...

ಜಿಲ್ಲೆಯಲ್ಲಿ ಅಧಿಕಗೊಂಡ ನಾಪತ್ತೆ ಪ್ರಕರಣಗಳು

ಚಿಕ್ಕಮಗಳೂರು: ಬೀರೂರು ಮತ್ತು ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಪ್ರತ್ಯೇಕ ನಾಪತ್ತೆ ಪ್ರಕರಣಗಳು ದಾಖಲಾಗಿದ್ದು,...

ಮಲೆನಾಡಿನಲ್ಲಿ ಮತ್ತೆ ಅಪಾಯಕಾರಿ ಕಾಲುಸಂಕಗಳನ್ನೇ ಆಶ್ರಯ ಪಡೆದ ಗ್ರಾಮಸ್ಥರು

ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ನಕ್ಸಲ್ ಚಟುವಟಿಕೆಗಳು ಸ್ತಬ್ಧವಾಗುತ್ತಿದ್ದಂತೆ ಸರ್ಕಾರ ಅಲ್ಲಿನ ಕುಗ್ರಾಮಗಳನ್ನು ಸಂಪೂರ್ಣವಾಗಿ ಕೈಬಿಟ್ಟಿದೆ...

ಜೆಜೆಎಂನಲ್ಲಿ ನಕಲಿ ಛಾಪಾ ಕಾಗದ ಬಳಸಿ ಸರ್ಕಾರಕ್ಕೆ ವಂಚನೆ

ಶೃಂಗೇರಿ:  ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಜೆಜೆಎಂ (ಜಲ ಜೀವನ್ ಮಿಷನ್) ಹಾಗೂ ಟಾಸ್ಕ್ ಫೋರ್ಸ್...