Home namma chikmagalur ನಾಡು-ನುಡಿ-ನೆಲ-ಜಲ ರಕ್ಷಣೆಗೆ ನೂತನ ರಕ್ಷಣಾ ವೇದಿಕೆ ಅಸ್ತಿತ್ವಕ್ಕೆ 
namma chikmagalurchikamagalurHomeLatest News

ನಾಡು-ನುಡಿ-ನೆಲ-ಜಲ ರಕ್ಷಣೆಗೆ ನೂತನ ರಕ್ಷಣಾ ವೇದಿಕೆ ಅಸ್ತಿತ್ವಕ್ಕೆ 

Share
Share

ಚಿಕ್ಕಮಗಳೂರು:  ಸಮಾಜಸೇವೆ ಮತ್ತು ಕನ್ನಡ ನಾಡು-ನುಡಿ, ನೆಲ-ಜಲ ರಕ್ಷಣೆ ಮಾಡುವ ಉದ್ದೇಶದಿಂದ ಕರ್ನಾಟಕ ರಾಜ್ಯ ರಕ್ಷಣಾ ವೇದಿಕೆಯನ್ನು ಹೊಸದಾಗಿ ಅಸ್ತಿತ್ವಕ್ಕೆ ತರಲಾಗಿದೆ ಎಂದು ವೇದಿಕೆಯ ರಾಜ್ಯಾಧ್ಯಕ್ಷ ರಾಜ್ ಪ್ರಶಾಂತ್ ತಿಳಿಸಿದರು.
ಅವರು ಇಂದು ನಗರದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವೇದಿಕೆಯ ಜಿಲ್ಲಾ ಘಟಕವನ್ನು ಚಿಕ್ಕಮಗಳೂರಿನಲ್ಲಿ ಮೇ.೨೩ ರಂದು ಸ್ಥಾಪಿಸಲಾಗಿದ್ದು, ರಾಜ್ಯದ ೩೧ ಜಿಲ್ಲೆಗಳಲ್ಲಿ ಮತ್ತು ೨೪೪ ತಾಲ್ಲೂಕುಗಳಲ್ಲಿ ಘಟಕಗಳನ್ನು ಆರಂಭಿಸಲು ಗುರಿಹೊಂದಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಘಟಕವನ್ನು ಪದಾಧಿಕಾರಿಗಳ ಆಯ್ಕೆಯ ನಂತರ ಶೀಘ್ರದಲ್ಲೇ ಉದ್ಘಾಟಿಸಲು ನಿರ್ಧರಿಸಿದ್ದೇವೆ, ಈಗಾಗಲೇ ಹಾಸನ, ಬೇಲೂರು, ಶಿವಮೊಗ್ಗ ಮುಂತಾದೆಡೆ ರಕ್ಷಣಾ ವೇದಿಕೆಯನ್ನು ಸ್ಥಾಪಿಸಿದ್ದೇವೆ ಎಂದರು.

ರಾಜ್ಯದ ಅಭಿವೃದ್ಧಿಗೆ ಶ್ರಮಿಸುವುದು, ಧಕ್ಷೆ ಉಂಟಾದಲ್ಲಿ ಹೋರಾಟ ಮಾಡುವುದು, ಬಡವರು ಮತ್ತು ಶೋಷಿತರ ಮೇಲೆ ನಡೆಯುವ ದೌರ್ಜನ್ಯ ತಡೆಯುವ ಜೊತೆಗೆ ಅವರ ಏಳಿಗೆಗೆ ಶ್ರಮಿಸುವುದು, ಪರಿಸರ ಸಂರಕ್ಷಣೆ, ಜನತೆಯ ಹಕ್ಕು ಮತ್ತು ಸ್ವಾತಂತ್ರ್ಯ ರಕ್ಷಣೆ, ರೈತರ ಹಾಗೂ ಕಾರ್ಮಿಕರ ಅಭಿವೃದ್ಧಿಗೆ ಶ್ರಮಿಸಲು ಉದ್ದೇಶಿಸಲಾಗಿದೆ ಎಂದರು.

ಗ್ರಾಮೀಣ ಜನತೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮವಹಿಸಲಾಗುವುದು, ಪ್ರಮುಖ ರಾಷ್ಟ್ರೀಯ ಹಬ್ಬಗಳ ಆಚರಣೆ ಹಮ್ಮಿಕೊಳ್ಳಲಾಗುವುದು, ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡುವ ಸಲುವಾಗಿ ಕ್ರೀಡಾಕೂಟಗಳನ್ನು ಏರ್ಪಡಿಸಿ ಜಿಲ್ಲಾ ಮಟ್ಟ ಹಾಗೂ ರಾಜ್ಯಮಟ್ಟದ ಕ್ರೀಡೆಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ ಎಂದರು.

ಅತೀ ಶೀಘ್ರದಲ್ಲಿ ವೇದಿಕೆಯನ್ನು ಜಿಲ್ಲಾ ಮಟ್ಟದಲ್ಲಿ, ತಾಲ್ಲೂಕು ಮಟ್ಟದಲ್ಲಿ, ನಗರ ಮಟ್ಟದಲ್ಲಿ ಘಟಕಗಳನ್ನು ಸ್ಥಾಪಿಸಿ ಅವುಗಳಿಗೆ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ಕಾರ್ಯಕರ್ತರು, ಸದಸ್ಯರನ್ನು ನೇಮಿಸುವ ಉದ್ದೇಶವನ್ನು ಹೊಂದಿದ್ದು, ಆಸಕ್ತಿ ಉಳ್ಳವರು ತಮ್ಮ ಮೊಬೈಲ್ ಸಂಖ್ಯೆ-೯೦೧೯೯೫೧೮೩೭ ನ್ನು ಸಂಪರ್ಕಿಸಬಹುದಾಗಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ವೇದಿಕೆ ಉಪಾಧ್ಯಕ್ಷ ಲಕ್ಷ್ಮಣ್, ನಿರ್ದೇಶಕರುಗಳಾದ ಬಿ.ಬಿ. ಹಾಲಪ್ಪ, ಚಂದ್ರು, ಕುಮಾರ್ ಉಪಸ್ಥಿತರಿದ್ದರು.

New protection platform to be established to protect land language soil and water

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ನಗರದಲ್ಲಿ ಅವಿಧಿ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ….?

ಚಿಕ್ಕಮಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್‌ ಹಾಗೂ ಬೇಕರಿಗಳ ಮೇಲೆ ಕ್ಷಿಪ್ರ ಕಾರ್ಯಾಚರಣೆ...

ಬಿಜೆಪಿ-ಸಂಘಪರಿವಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಉತ್ತರಾಖಾಂಡ ರಾಜ್ಯದ ಹಾಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಮೈದಾನವನ್ನು...

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ...

ರಾಷ್ಟ್ರಧ್ವಜ ಅವಮಾನ ಆರೋಪ: ಕಾನೂನು ಕ್ರಮಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡಿ, ಮಧ್ಯಾಹ್ನದ ವೇಳೆಗೆ ಧ್ವಜವನ್ನು ಅವರೋಹಣ ಮಾಡಿರುವ ಘಟನೆಗೆ...