Home namma chikmagalur chikamagalur ಶ್ರೀ ಗುರು ದತ್ತಾತ್ರೇಯ ಪೀಠದಲ್ಲಿ ಹೊಸ ಹೊಸ ಆಚರಣೆ
chikamagalurHomeLatest Newsnamma chikmagalur

ಶ್ರೀ ಗುರು ದತ್ತಾತ್ರೇಯ ಪೀಠದಲ್ಲಿ ಹೊಸ ಹೊಸ ಆಚರಣೆ

Share
Share

ಚಿಕ್ಕಮಗಳೂರು: ಶ್ರೀ ಗುರು ದತ್ತಾತ್ರೇಯ ಪೀಠದಲ್ಲಿ ಕಾನೂನು ಉಲ್ಲಂಘನೆ ಮಾಡಿ ಗುಹೆಯ ಒಳಭಾಗದಲ್ಲಿ ಮುಸಲ್ಮಾನರು ಹೊಸ ಹೊಸ ಆಚರಣೆ ಮಾಡಿರುವುದನ್ನು ಖಂಡಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಯಥಾಸ್ಥಿತಿ ಕಾಪಾಡುವಂತೆ ಒತ್ತಾಯಿಸಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ರಂಗನಾಥ್ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದತ್ತಪೀಠದ ವಿಚಾರ ನ್ಯಾಯಾಲಯದಲ್ಲಿ ಇರುವುದರಿಂದ ದತ್ತಪೀಠದಲ್ಲಿ ಯಾವುದೇ ಹೊಸ ಆಚರಣೆ ಮಾಡುವಂತಿಲ್ಲ. ಆದರೂ ಕಾನೂನನ್ನು ಉಲ್ಲಂಘಿಸಿ ೨೩-೦೧-೨೦೨೬ ರಂದು ಹೊಸದಾಗಿ ಕಲಮ ತಯ್ಯಬಾ ಎಂಬ ಆಚರಣೆ ಮಾಡಿದ್ದಾರೆ. ಅವರಿಗೆ ಜಿಲ್ಲಾಡಳಿತ ಅವಕಾಶ ನೀಡಿರುವುದರಿಂದ ಹಿಂದೂಗಳಿಗೂ ಗುಹೆಯ ಮುಂಭಾಗದಲ್ಲಿ ಹೋಮ ಹವನ ಅವಕಾಶ ಮಾಡಿಕೊಡಬೇಕೆಂದು ಆಗ್ರಹಿಸಿದರು.

೧೯೭೮ ರ ದತ್ತಪೀಠದ ವಿಚಾರಣೆಯಲ್ಲಿ ಆಗಿನ ಶಾಖಾದ್ರಿ ದಿವಂಗತ ಸೈಯದ್ ಪೀರ್ ಮೊಹಮದ್ ಅವರು ದತ್ತಪೀಠದಲ್ಲಿ ಪೂಜೆ ಮಾಡುವವರಿಗೆ ಮದುವೆ ಆಗಿರುವಂತಿಲ್ಲ ಮತ್ತು ೨೫ ವರ್ಷಗಳಿಗಿಂತ ಹೆಚ್ಚು ವರ್ಷಗಳ ಕಾಲ ಪೂಜೆ ಮಾಡುವಂತಿಲ್ಲ ಎಂದಿದ್ದಾರೆ. ಆದರೆ, ಈಗಿರುವ ಮುಜಾವರ್ ಗಳಿಗೆ ಮೂವರಿಗೂ ಮದುವೆ ಆಗಿದೆ ಮತ್ತು ಅವರು ೩೫ ಕ್ಕೂ ಹೆಚ್ಚು ವರ್ಷಗಳಿಂದ ಇಲ್ಲಿ ಇರುವುದರಿಂದ ಅವರನ್ನು ಬದಲಾಯಿಸಬೇಕಾಗಿ ಒತ್ತಾಯಿಸಿದರು.

ಹಿಂದೂ ಪೂಜಾ ಪದ್ಧತಿಯಲ್ಲಿ ಅವಿವಾಹಿತರು ಪೂಜೆ ಮಾಡಬೇಕೆಂಬ ನಿಯಮವಿಲ್ಲ. ಆದರೂ ಸಹ ಈಗ ದತ್ತಾತ್ರೇಯ ಸ್ವಾಮಿಯವರ ಪೂಜೆ ಮಾಡುತ್ತಿರುವ ಅರ್ಚಕರು ಅವಿವಾಹಿತರಾಗಿದ್ದಾರೆ. ಈ ಮುಜಾವರ್‌ಗಳನ್ನು ಜಿಲ್ಲಾಡಳಿತ ಮುಂದುವರೆಸಿದರೆ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದಂತಾಗುತ್ತದೆ. ಕೂಡಲೇ ಈ ಮುಜಾವರ್‌ಗಳನ್ನು ಬದಲಿಸಿ ಹೊಸಬರನ್ನು ನೇಮಕ ಮಾಡಬೇಕೆಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಸಹ ಕಾರ್ಯದರ್ಶಿ ಅಮಿತ್, ಶ್ಯಾಮ್ ವಿ ಗೌಡ, ಬಜರಂಗದಳ ಜಿಲ್ಲಾ ಸಹ ಸಂಯೋಜಕ ಸುನಿಲ್, ಮಾತೃಶಕ್ತಿ ಪ್ರಮುಖ್ ಪುಷ್ಪಾಂಜಲಿ, ವಿನುತಾ, ಮೇಘ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

New rituals at Sri Guru Dattatreya Peetha

Share

Leave a comment

Leave a Reply

Your email address will not be published. Required fields are marked *

Don't Miss

ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನದದು ಕಳವು

ಚಿಕ್ಕಮಗಳೂರು : ತಾಲೂಕಿನ ಕಂಚೇನಹಳ್ಳಿಯಲ್ಲಿ ಹಾಡಹಗಲೇ ಕಳ್ಳತನ ನಡೆದಿದ್ದು ರೈತ ಉಮೇಶ್ ಎಂಬುವವರ ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗದು ಹಾಗೂ ಚಿನ್ನಾಭರಣವನ್ನು ಕಳ್ಳರು ದೋಚಿದ್ದಾರೆ. ಉಮೇಶ್ ಜಮೀನು ಕೆಲಸಕ್ಕೆ ತೆರಳಿದ್ದ...

ಲಾಭಾಂಶ ಆಮಿಷ ಯುವಕನಿಗೆ ಲಕ್ಷಾಂತರ ರೂಪಾಯಿ ವಂಚನೆ

ಚಿಕ್ಕಮಗಳೂರು: ಟ್ರೇಡಿಂಗ್ ಹೆಸರಿನಲ್ಲಿ ಹೆಚ್ಚಿನ ಲಾಭಾಂಶ ನೀಡುವ ಆಮಿಷವೊಡ್ಡಿ ಯುವಕನೊಬ್ಬನಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿನಯ್ ಬಿ.ಕೆ....

Related Articles

ನಿಗಮದ ಸಾಲದ ಬಡ್ಡಿ ಮನ್ನಾಗೆ ಸಿ.ಟಿ.ರವಿ ಖಂಡನೆ

ಚಿಕ್ಕಮಗಳೂರು: ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಸಾಲದ ಬಡ್ಡಿ ಮನ್ನಾ ಮಾಡಿರುವ ರಾಜ್ಯ ಸರ್ಕಾರದ ನೀತಿಯನ್ನ ತೀವ್ರವಾಗಿ...

ಜಿಲ್ಲಾಸ್ಪತ್ರೆಗೆ ಎಂಎಲ್ಸಿ ಸಿ.ಟಿ. ರವಿ ಭೇಟಿ

ಚಿಕ್ಕಮಗಳೂರು: ನಗರದ ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿನ ಅವ್ಯವಸ್ಥೆ ಹಾಗೂ ಔಷಧಿಗಳ ತೀವ್ರ ಕೊರತೆಯ ಕುರಿತು ಕೇಳಿಬಂದ...

ಸ್ನಾನಕ್ಕೆ ಇಳಿದಿದ್ದ ಯುವಕ ಕೆರೆಯಲ್ಲಿ ನಾಪತ್ತೆ

ಕಳಸ : ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಅಂಬಾತೀರ್ಥದಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಇಲ್ಲಿನ ಭದ್ರಾ...

ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ ಮಹಿಳೆಗೆ ವಂಚನೆ

ಚಿಕ್ಕಮಗಳೂರು : ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಲಾಭ ಗಳಿಸುವ ಅಮಿಷಕ್ಕೆ ಒಳಗಾದ ಮಹಿಳೆಯೊಬ್ಬರು...