Home namma chikmagalur ಚಾರ್ಮಾಡಿ ಘಾಟ್ ನಲ್ಲಿ ವಾಹನಗಳ ಸಂಚಾರಕ್ಕೆ ಹೊಸ ನಿಯಮ
namma chikmagalurchikamagalurHomeLatest News

ಚಾರ್ಮಾಡಿ ಘಾಟ್ ನಲ್ಲಿ ವಾಹನಗಳ ಸಂಚಾರಕ್ಕೆ ಹೊಸ ನಿಯಮ

Share
Share

ಚಿಕ್ಕಮಗಳೂರು:  ಕಾಫಿನಾಡು ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ಕೊಂಡಿಯಾಗಿರುವ ಚಾರ್ಮಾಡಿ ಘಾಟ್ ನಲ್ಲಿ ರಾತ್ರಿ ವೇಳೆ ಸಂಚರಿಸುವ ವಾಹನಗಳಿಗೆ ಇನ್ಮುಂದೆ ಹೊಸ ನಿಯಮಗಳು ಜಾರಿಯಾಗಲಿದೆ. ರಾತ್ರಿ ವೇಳೆಯಲ್ಲಿ ಚೆಕ್ ಪೋಸ್ಟ್ ಮೂಲಕ ಸಾಗುವ ಎಲ್ಲಾ ವಾಹನಗಳನ್ನು ಕಡ್ಡಾಯವಾಗಿ ತಪಾಸಣೆ ಮಾಡಿ ಸಂಚರಿಸುವ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತದೆ

ಚಾರ್ಮಾಡಿ ಘಾಟ್ ನಲ್ಲಿ ರಾತ್ರಿ ವೇಳೆ ಗೋ ಕಳ್ಳತನ ಹಾಗೂ ಅಪರಾಧ ಚಟುವಟಿಕೆಗಳು ನಡೆಯುತ್ತಿವೆ ಅನ್ನೋ ಆರೋಪ ಕೇಳಿ ಬರುತ್ತದೆ ಹೀಗಾಗಿ ಇದಕ್ಕೆ ಬ್ರೇಕ್ ಹಾಕಲು ಪೊಲೀಸರು ಹೊಸ ನಿಯಮ ಜಾರಿಗೆ ತರಲು ಮುಂದಾಗಿದ್ದಾರೆ. ರಾತ್ರಿ ವೇಳೆ ವಾಹನಗಳು ಕೊಟ್ಟಿಗೆಹಾರ ಚೆಕ್ ಪೋಸ್ಟ್ ದಾಟಬೇಕೆಂದರೆ ಸಂಪೂರ್ಣ ತಪಾಸಣೆಗೊಂಡು ಐದು ವಾಹನಗಳು ಒಟ್ಟಾಗಿ ತೆರಳುವಂತೆ ನಿಯಮ ರೂಪಿಸಲಾಗಿದೆ

ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ಈಗಿರುವ ಬ್ಯಾರಿಕೇಡ್ ಬದಲಾಗಿ ಹೊಸ ಭೂಮ್ ಬ್ಯಾರಿಯರ್ ನಿರ್ಮಿಸಿ ರಾತ್ರಿ ವೇಳೆ ಓರ್ವ ಪಿಎಸ್‌ಐ ನೇತೃತ್ವದಲ್ಲಿ ಪೊಲೀಸರು ಕರ್ತವ್ಯ ನಿರ್ವಹಿಸಲಿದ್ದಾರೆ. ಒಂದೂವರೆ ಕಿಲೀ ಮೀಟ‌ರ್ ರಸ್ತೆಯನ್ನು ಗೋಕಳ್ಳರು ದುರುಪಯೋಗ ಮಾಡುತ್ತಿದ್ದು ಅನ್ನೋ ದೂರುಗಳಿದ್ದವು ಅಲ್ಲಿ ಕೆಲವು ಮನೆಗಳಿದ್ದು ಸ್ಥಳೀಯರ ಜೊತೆ ಮಾತುಕತೆ ನಡೆಸಿ ಆ ರಸ್ತೆಯಲ್ಲಿ ಗೇಟ್ ನಿರ್ಮಿಸಲು ನಿರ್ಧರಿಸಲಾಗಿದೆ. ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆವರೆಗೆ ಈ ಗೇಟ್ ಕ್ಲೋಸ್ ಮಾಡಲು ನಿರ್ಧರಿಸಲಾಗಿದೆ.

ಗೋ ಕಳ್ಳತನ ಸೇರಿದಂತೆ ಅಪರಾಧ ಕೃತ್ಯಗಳನ್ನು ತಡೆಯಲು ಎಸ್ ಪಿ ವಿಕ್ರಂ ಅಮಟೆ ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ. ಹೊಸ ನಿಯಮಗಳಿಂದ ಅಪರಾಧ ಕೃತ್ಯಗಳು ಹಾಗೂ ಗೋಕಳ್ಳತನ ನಡೆಸುತ್ತಿದ್ದರು ವಾಹನಗಳ ಎಲ್ಲಾ ವಿವರಗಳು ಸಿಸಿಟಿವಿಯಲ್ಲಿ ಹಾಗೂ ಪೊಲೀಸರ ಪುಸ್ತಕದಲ್ಲಿ ದಾಖಲಾಗಿದ್ದು ಈ ಹೊಸ ನಿಯಮಗಳ ಕುರಿತು ಸಾರ್ವಜನಿಕರು ಮೆಚ್ಚುಗೆ ಸೂಚಿಸಿದ್ದಾರೆ.

New rules for vehicle traffic at Charmadi Ghat

Share

Leave a comment

Leave a Reply

Your email address will not be published. Required fields are marked *

Don't Miss

ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ

ಚಿಕ್ಕಮಗಳೂರು:  ಬಾಲ ಕಾರ್ಮಿಕರನ್ನು ಯಾವುದೇ ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪ ರಾಧವಾಗಿದ್ದು, ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವ ಮಾಲೀಕರಿಗೆ ೬ ತಿಂಗಳಿಗಿಂತ ಕಡಿಮೆಯಿಲ್ಲದಂತೆ ೨ ವರ್ಷ ಜೈಲು ಶಿಕ್ಷೆ ಹಾ ಗೂ...

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಂಸದರ ಅಸಮಾಧಾನ

ಚಿಕ್ಕಮಗಳೂರು: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ವಿವಿಧ ಏಜೆನ್ಸಿಗಳ ಆಮೆಗತಿಯ ಕಾರ್ಯವೈಖರಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಬಿಗಿ...

Related Articles

ಜು.5ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಚಿಕ್ಕಮಗಳೂರು: ಮಲೆನಾಡಿನ ಜನತೆಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ತಲುಪಿಸುವ ಉದ್ದೇಶದಿಂದ ಆರ್‌ವಿಆರ್ ಹೆಲ್ತ್‌ಕೇರ್ ವತಿಯಿಂದ ಉಚಿತ...

ಡಿಟಿಡಿಸಿ ಎಕ್ಸ್‌ಪ್ರೆಸ್ ಲಿಮಿಟೆಡ್ ವಿರುದ್ಧ ಆಯೋಗದ ತೀರ್ಪು

ಚಿಕ್ಕಮಗಳೂರು: ಸಕಾಲದಲ್ಲಿ ಆಹಾರ ಪದಾರ್ಥವನ್ನು ತಲುಪಿಸದೆ ಆಹಾರ ಸಾಮಗ್ರಿಗಳು ಹಾಳಾಗಲು ಕಾರಣವಾದ ಡಿಟಿಡಿಸಿ ಎಕ್ಸ್‌ಪ್ರೆಸ್ ಲಿಮಿಟೆಡ್...

ಮುತ್ತೋಡಿ ಅರಣ್ಯದಲ್ಲಿ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಚಿರತೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ದ ಮುತ್ತೋಡಿ ಅರಣ್ಯ ವಲಯದಲ್ಲಿ ಪ್ರವಾಸಿಗರಿಗೆ ಅತ್ಯಂತ ಅಪರೂಪದ ಹಾಗೂ ರೋಮಾಂಚನಕಾರಿ ದೃಶ್ಯವೊಂದು...

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ...