Home Political News ಜಿಲ್ಲೆಯಲ್ಲಿ ಕೇಳೊರೆ ಇಲ್ಲದಂತಾಗಿದೆ ಕಾಂಗ್ರೆಸ್ ಕಾರ್ಯಕರ್ತರ ಗೋಳು
Political News

ಜಿಲ್ಲೆಯಲ್ಲಿ ಕೇಳೊರೆ ಇಲ್ಲದಂತಾಗಿದೆ ಕಾಂಗ್ರೆಸ್ ಕಾರ್ಯಕರ್ತರ ಗೋಳು

Share
Share

ಚಿಕ್ಕಮಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದು ಎರಡು ವರ್ಷ ಸಮೀಪಿಸುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ. ಐದು ಜನ ಮುಖಂಡರು ಆಯಾಕಟ್ಟಿನ ನಿಗಮ ಮಂಡಳಿಯ ಗೂಟದ ಕಾರಿನಲ್ಲಿ ರಾರಾಜಿಸುತ್ತಿದ್ದಾರೆ ಆದರೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರ ಅಳಲು ಕೇಳಲು ಯಾರಿಗೂ ಬಿಡುವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಅಂಶು ಮಂತ್ ಕಳೆದ ಐದು ವರ್ಷದಿಂದ ಇದ್ದರೆ. ವಿಧಾನ ಸಭಾ ಚುನಾವಣೆ ಮುಗಿದ ಮೇಲೆ ಒಂದು ಸಾರಿ ಸಭೆ ಕರೆದಿದ್ದಾರೆ. ಇತ್ತೀಚೆಗೆ ಸಭೆಯನ್ನೇ ಕರೆದಿಲ್ಲ ಕಾರ್ಯಕರ್ತರನ್ನು ಕ್ಯಾರೇ ಎನ್ನತ್ತಿಲ್ಲ ಎಂಬ ಆಕ್ರೋಶ ಎಲ್ಲೆಡೆ ವ್ಯಕ್ತವಾಗಿದೆ. ಭದ್ರಾ ಕಾಡ ಗೂಟದ ಕಾರು ಸಿಕ್ಕ ಮೇಲೆ ಕಾರ್ಯಕರ್ತರಿಗೆ ಸ್ಪಂದಿಸುವ ಬದಲು ಶಾಸಕರುಗಳ ತಾಳಕ್ಕೆ ಹೆಜ್ಜೆ ಹಾಕುತ್ತಿದ್ದಾರೆ ಎಂದು ದೂರುತ್ತಲೆ ಅಧ್ಯಕ್ಷರ ಸಬ್ ಮಿಷನ್ ಕೇಳುವುದೇ ಆಗಿದೆ. ಹಗಲು ರಾತ್ರಿ ಕಾಂಗ್ರೆಸ್ ಗೆಲುವಿಗೆ ದುಡಿದು ಪ್ರಯೋಜನ ಏನು.?ಶಾಸಕರುಗಳನ್ನು ಮಾತನಾಡಿಸಲು ಕಷ್ಟಪಡಬೇಕಾಗಿದೆ ನಮಗೂ ಸ್ವಾಭಿಮಾನವಿದೆ ಎನ್ನುತ್ತಾರೆ ಕೆಲ ಕಾರ್ಯಕರ್ತರು,

ಯಾವುದೇ ಸರ್ಕಾರಿ ಕಛೇರಿಗೆ ಹೋದರು ಅಧಿಕಾರಿಗಳು ಉಡಾಪೆಯಿಂದ ವರ್ತಿಸುತ್ತಾರೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಕೇರ್ ಮಾಡುತ್ತಿಲ್ಲ ನಾವು ಕೊಟ್ಟು ಬಂದಿದ್ದೇನೆ ಎನ್ನುತ್ತಾರೆ. ಇದರ ಬಗ್ಗೆ ಕಾರ್ಯಕರ್ತರಾಗಿ ಜಿಲ್ಲಾ ಅಧ್ಯಕ್ಷರಗೆ ಹೇಳುವ ಎಂದರೆ ಕೈಗೆ ಸಿಗುತ್ತಿಲ್ಲ ಎನ್ನುತ್ತಲೇ ಮುಂದೆ ಬರುವ ಚುನಾವಣೆಯಲ್ಲಿ ಶಾಸಕರು ಅಧ್ಯಕ್ಷರು ಗೆಲ್ಲಿಸಿಕೊಳ್ಳಲಿ ಎಂದು ಮಾರ್ಮಿಕವಾಗಿ ಕಾಂಗ್ರೆಸ್ ಪ್ರಮುಖ ಮುಖಂಡರು ಹೇಳುತ್ತಿರುವುದು ನೋಡಿದರೆ ಆಶ್ಚರ್ಯವಾಗುತ್ತದೆ. ಅಂಶುಮಂತ್ ತಮ್ಮ ನೆಂಟರು ಎಂದು ಹೇಳಿಕೊಳ್ಳುವ ಡಾಕ್ಟರ್ ಒಬ್ಬ ಕಳೆದ ಐದು ವರ್ಷದಿಂದ ಆಯಾಕಟ್ಟಿನ ಜಾಗದಲ್ಲಿ ಪಾವಡಿಸಿಕೊಂಡು ಬಿಜೆಪಿ ಅವಧಿಯಲ್ಲಿ ಬಂದು ಕಾಂಗ್ರೆಸ್ ನಲ್ಲಿ ಮೈತ್ರಿ ಮಾಡಿಕೊಂಡಿದ್ದಾರೆ.

ಬಿಜೆಪಿಯಿಂದ ಬಚಾವ್ ಎಂದು ಸಮಾಧಾನಗೊಳ್ಳುವ ಬದಲು ಬಾಂಡ್ಲಿಯಿಂದ ಬೆಂಕಿಗೆ ಬಿದ್ದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಜಿಲ್ಲಾ ಸಚಿವ ಜಾರ್ಜ್ ಮಾತನಾಡಿಸಲು ಸಾಧ್ಯವಿಲ್ಲ ಶಾಸಕರು ಕೇಳಲೇಬೇಡಿ ಇನ್ನೂ ಪಕ್ಷ ಎಂದರೆ ಯಾರು ಕೈಗೆ ಸಿಗುತ್ತಿಲ್ಲ ಯಾರಿಗೆ ಹೇಳಲಿ ನಮ್ಮ ಗೋಳ ಎಂದು ಗೊಣಗುತ್ತಿದ್ದು ಅಧ್ಯಕ್ಷರು ಕಾರ್ಯಕರ್ತರ ಸಬ್ ಮಿಷನ್ ಆಲಿಸಲಿ ಎಂದು ಒತ್ತಯಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಕೇಂದ್ರ ಸರ್ಕಾರದ ಅನುದಾನ ಹಾಗೂ ತೆರಿಗೆ ಪಾಲು ಕುರಿತು ನಮ್ಮ ಸರ್ಕಾರ ‘ಶ್ವೇತಪತ್ರ’ ಪತ್ರ

ವಿಧಾನಸಭೆ:  ಕೇಂದ್ರ ಸರ್ಕಾರವು ಕೇಂದ್ರ ಪುರಸ್ಕೃತ ಯೋಜನೆಗಳಿಗೆ ರಾಜ್ಯಕ್ಕೆ ನೀಡುತ್ತಿರುವ ಅನುದಾನ ಹಾಗೂ ತೆರಿಗೆ ಪಾಲು...

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಎಂಬ ನಾಟಕ…!

ಚಿಕ್ಕಮಗಳೂರು: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಲು ತುದಿಗಾಲಿನಲ್ಲಿ ನಿಂತಿದ್ದವರಿಗೆ ಸದ್ಯಕ್ಕೆ ಬ್ರೇಕ್ ಬಿದ್ದಿದೆ. ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾಗಲು...

ಬಿ.ಎಲ್.ಶಂಕರ್ ರಾಜಕೀಯ ಹಿನ್ನಡೆ ಏಕೆ ?

ಚಿಕ್ಕಮಗಳೂರು: ಬಿ.ಎಲ್.ಶಂಕರ್ ರಾಜಕೀಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ದೊಡ್ಡ ಶಕ್ತಿಯಾಗಿದ್ದವರು ಹಿನ್ನಡೆ ಅನುಭವಿಸುತ್ತಿರುವುದು ಏಕೆ ?...

ಬಿ.ಎಲ್.ಶಂಕರ್ ಗೆ ಮತ್ತೆ ಮತ್ತೆ ಮಿಸ್…?

ಚಿಕ್ಕಮಗಳೂರು: ರಾಜ್ಯ ಸಭೆ ಅಥವಾ ವಿಧಾನ ಪರಿಷತ್ ಸ್ಥಾನಗಳಿಗೆ ಆಯ್ಕೆ ಮಾಡುವಾಗ ಬಿ.ಎಲ್.ಶಂಕರ್ ಹೆಸರು ಎವರೆಸ್ಟ್...