Home Latest News ರಾಗಿ ಖರೀದಿ ಕೇಂದ್ರಗಳಲ್ಲಿ ಅನ್ನದಾತರ ಪರದಾಟ : ಕೇಳೊರಿಲ್ಲ ಗೋಳು
Latest News

ರಾಗಿ ಖರೀದಿ ಕೇಂದ್ರಗಳಲ್ಲಿ ಅನ್ನದಾತರ ಪರದಾಟ : ಕೇಳೊರಿಲ್ಲ ಗೋಳು

Share
Share

ಚಿಕ್ಕಮಗಳೂರು : ಸರ್ಕಾರ ರೈತರ ಅನುಕೂಲಕ್ಕಾಗಿ ರಾಗಿ ಖರೀದಿ ಕೇಂದ್ರಗಳನ್ನು ರಾಜ್ಯ ಸಹಕಾರ ಮಹಾ ಮಂಡಳದ ಮೂಲಕ ತೆರೆದಿದೆ, ರಾಗಿ ಬೆಳೆಯುವ ಪ್ರದೇಶದಲ್ಲಿ ಖರೀದಿ ಕೇಂದ್ರ ಕೆಲ ದಿನಗಳು ಮಾತ್ರ ತೆರೆದಿತ್ತವೆ. ನಂತರ ಇಲ್ಲಿನ ಗೋಳು ಕೇಳುವವರಿಲ್ಲ,

ಜಿಲ್ಲೆಯ ಚಿಕ್ಕಮಗಳೂರು, ಕಡೂರು, ತರೀಕೆರೆ ಮತ್ತು ಅಜ್ಜಂಪುರ ತಾಲ್ಲೂಕಿನಲ್ಲಿ ರಾಗಿ ಖರೀದಿ ಕೇಂದ್ರಗಳನ್ನ ತೆರೆಯಲಾಗಿದೆ, ಇಲ್ಲಿ ರೈತರು ಸಾಲುಗಟ್ಟಿ ನಿಂತು ಪರದಾಡುವುದು ನೋಡಿದರೆ ಅಯ್ಯೋ ಪಾಪ ಎನ್ನಿಸುವುದರ ಜೊತೆಗೆ ಜನಪ್ರತಿನಿಧಿಗಳು ಅಧಿಕಾರಿಗಳು ಬದುಕಿದ್ದಾರಾ ಎಂಬ ಆಕ್ರೋಶ ಬರುತ್ತದೆ. ಇನ್ನು ವಿರೋಧ ಪಕ್ಷದವರು ತುಟಿ ಬಿಚ್ಚುವುದಿಲ್ಲ. ರೈತ ಸಂಘಗಳ ಕೂಗು ಇವರಿಗೆ ಕೇಳಿಸುವುದಿಲ್ಲ. ಖಾತೆದಾರ ರೈತರು ಖರೀದಿ ಕೇಂದ್ರಗಳಲ್ಲಿ ಮೊದಲು ರಿಜಿಸ್ಟರ್ ಮಾಡಿಸಬೇಕು. ರೈತರು ಬೆಳಗ್ಗೆ ನಾಲ್ಕು ಗಂಟೆಗೆ ಸರದಿ ಸಾಲಿನಲ್ಲಿ ನಿಂತರೆ ಮುಗಿತು ದಿನವೂ ಕಾಫಿ,ತಿಂಡಿ,ಊಟ ಇಲ್ಲ ಕೊನೆಗೆ ನೀರು ಸಿಗುವುದಿಲ್ಲ. ಈ ಚಳಿಯಲ್ಲಿ ಗಡಗಡ ನಡುಗುವ ಹಿರಿಯ ವಯಸ್ಸಿನವರು ಮತ್ತು ಮಹಿಳೆಯರ ಪರದಾಟ ನೋಡಿದರೆ ಅಯ್ಯೋ ಪಾಪ ಎನ್ನಿಸುತ್ತದೆ .ಇದರ ಮಧ್ಯೆ ಪದೇ,ಪದೇ ಕೈಕೊಡುವ ವಿದ್ಯುತ್ ಮತ್ತು ಸರ್ವರ್ ರಿಂದಾಗಿ ದಿನವೂ ಸರದಿ ಸಾಲಿನಲ್ಲಿ ನಿಲ್ಲಲೇ ಬೇಕು.

ಮಾರ್ಕೆಟಿನಲ್ಲಿ ರಾಗಿ ಬೆಲೆ ಮೂರು ಸಾವಿರ ಸಿಕ್ಕರೆ ಹೆಚ್ಚು ಸರ್ಕಾರ ಬೆಂಬಲ ಬೆಲೆ ಕೊಡುವುದರಿಂದ 4290 ರೂ ಸಿಗುತ್ತದೆ ಎಂದು ರೈತರು ಪರದಾಡುತ್ತಿದ್ದಾರೆ. ಕಳೆದ ವರ್ಷ ರಿಜಿಸ್ಟರ್ ಮಾಡಿಸಿದ ಹಲವು ರೈತರಿಗೆ ಇನ್ನೂ ಹಣ ಪಾವತಿ ಆಗಿಲ್ಲ ಎಂಬ ದೂರುಗಳು ಸಾಕಷ್ಟು ಇವೆ.
ಇನ್ನು ಜನಪ್ರತಿನಿಧಿಗಳು ರೈತರೇ ದೇಶದ ಬೆನ್ನೆಲುಬು ಎಂದು ಭಾಷಣ ಮಾಡಿ ಹೋದವನು ಬಾರ್_ಟೂರು ಕ್ವಾರೆ ಕಮೀಷನ್ ಲೆಕ್ಕಾಚಾರದಲ್ಲಿ ಇದ್ದಾರೆ. ವಿರೋಧ ಪಕ್ಷದವರು ಇವರ ಜೊತೆಗೆ ಸಾಟಿ ವ್ಯವಹಾರದಲ್ಲಿ ಇದ್ದರೆ ರೈತ ಸಂಘದ ಮಾತುಗಳು ಕೇಳುವವರೇ ಇಲ್ಲ ಜೊತೆಗೆ ಅಧಿಕಾರಿಗಳು ಮಾತ್ರ ಯಾವುದಕ್ಕೂ ತಲೆಕೆಡಿಸಿಕೊಳ್ಳುವ ಗೋಜಿಗೆ ಹೋಗುವುದಿಲ್ಲ. ರೈತರು ಮಾತ್ರ ಜೀವನ ಪೂರ ಪರದಾಡುತ್ತಲೇ ಜೀವ ಬಿಡಬೇಕಾಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...