Home Latest News ರಾಗಿ ಖರೀದಿ ಕೇಂದ್ರಗಳಲ್ಲಿ ಅನ್ನದಾತರ ಪರದಾಟ : ಕೇಳೊರಿಲ್ಲ ಗೋಳು
Latest News

ರಾಗಿ ಖರೀದಿ ಕೇಂದ್ರಗಳಲ್ಲಿ ಅನ್ನದಾತರ ಪರದಾಟ : ಕೇಳೊರಿಲ್ಲ ಗೋಳು

Share
Share

ಚಿಕ್ಕಮಗಳೂರು : ಸರ್ಕಾರ ರೈತರ ಅನುಕೂಲಕ್ಕಾಗಿ ರಾಗಿ ಖರೀದಿ ಕೇಂದ್ರಗಳನ್ನು ರಾಜ್ಯ ಸಹಕಾರ ಮಹಾ ಮಂಡಳದ ಮೂಲಕ ತೆರೆದಿದೆ, ರಾಗಿ ಬೆಳೆಯುವ ಪ್ರದೇಶದಲ್ಲಿ ಖರೀದಿ ಕೇಂದ್ರ ಕೆಲ ದಿನಗಳು ಮಾತ್ರ ತೆರೆದಿತ್ತವೆ. ನಂತರ ಇಲ್ಲಿನ ಗೋಳು ಕೇಳುವವರಿಲ್ಲ,

ಜಿಲ್ಲೆಯ ಚಿಕ್ಕಮಗಳೂರು, ಕಡೂರು, ತರೀಕೆರೆ ಮತ್ತು ಅಜ್ಜಂಪುರ ತಾಲ್ಲೂಕಿನಲ್ಲಿ ರಾಗಿ ಖರೀದಿ ಕೇಂದ್ರಗಳನ್ನ ತೆರೆಯಲಾಗಿದೆ, ಇಲ್ಲಿ ರೈತರು ಸಾಲುಗಟ್ಟಿ ನಿಂತು ಪರದಾಡುವುದು ನೋಡಿದರೆ ಅಯ್ಯೋ ಪಾಪ ಎನ್ನಿಸುವುದರ ಜೊತೆಗೆ ಜನಪ್ರತಿನಿಧಿಗಳು ಅಧಿಕಾರಿಗಳು ಬದುಕಿದ್ದಾರಾ ಎಂಬ ಆಕ್ರೋಶ ಬರುತ್ತದೆ. ಇನ್ನು ವಿರೋಧ ಪಕ್ಷದವರು ತುಟಿ ಬಿಚ್ಚುವುದಿಲ್ಲ. ರೈತ ಸಂಘಗಳ ಕೂಗು ಇವರಿಗೆ ಕೇಳಿಸುವುದಿಲ್ಲ. ಖಾತೆದಾರ ರೈತರು ಖರೀದಿ ಕೇಂದ್ರಗಳಲ್ಲಿ ಮೊದಲು ರಿಜಿಸ್ಟರ್ ಮಾಡಿಸಬೇಕು. ರೈತರು ಬೆಳಗ್ಗೆ ನಾಲ್ಕು ಗಂಟೆಗೆ ಸರದಿ ಸಾಲಿನಲ್ಲಿ ನಿಂತರೆ ಮುಗಿತು ದಿನವೂ ಕಾಫಿ,ತಿಂಡಿ,ಊಟ ಇಲ್ಲ ಕೊನೆಗೆ ನೀರು ಸಿಗುವುದಿಲ್ಲ. ಈ ಚಳಿಯಲ್ಲಿ ಗಡಗಡ ನಡುಗುವ ಹಿರಿಯ ವಯಸ್ಸಿನವರು ಮತ್ತು ಮಹಿಳೆಯರ ಪರದಾಟ ನೋಡಿದರೆ ಅಯ್ಯೋ ಪಾಪ ಎನ್ನಿಸುತ್ತದೆ .ಇದರ ಮಧ್ಯೆ ಪದೇ,ಪದೇ ಕೈಕೊಡುವ ವಿದ್ಯುತ್ ಮತ್ತು ಸರ್ವರ್ ರಿಂದಾಗಿ ದಿನವೂ ಸರದಿ ಸಾಲಿನಲ್ಲಿ ನಿಲ್ಲಲೇ ಬೇಕು.

ಮಾರ್ಕೆಟಿನಲ್ಲಿ ರಾಗಿ ಬೆಲೆ ಮೂರು ಸಾವಿರ ಸಿಕ್ಕರೆ ಹೆಚ್ಚು ಸರ್ಕಾರ ಬೆಂಬಲ ಬೆಲೆ ಕೊಡುವುದರಿಂದ 4290 ರೂ ಸಿಗುತ್ತದೆ ಎಂದು ರೈತರು ಪರದಾಡುತ್ತಿದ್ದಾರೆ. ಕಳೆದ ವರ್ಷ ರಿಜಿಸ್ಟರ್ ಮಾಡಿಸಿದ ಹಲವು ರೈತರಿಗೆ ಇನ್ನೂ ಹಣ ಪಾವತಿ ಆಗಿಲ್ಲ ಎಂಬ ದೂರುಗಳು ಸಾಕಷ್ಟು ಇವೆ.
ಇನ್ನು ಜನಪ್ರತಿನಿಧಿಗಳು ರೈತರೇ ದೇಶದ ಬೆನ್ನೆಲುಬು ಎಂದು ಭಾಷಣ ಮಾಡಿ ಹೋದವನು ಬಾರ್_ಟೂರು ಕ್ವಾರೆ ಕಮೀಷನ್ ಲೆಕ್ಕಾಚಾರದಲ್ಲಿ ಇದ್ದಾರೆ. ವಿರೋಧ ಪಕ್ಷದವರು ಇವರ ಜೊತೆಗೆ ಸಾಟಿ ವ್ಯವಹಾರದಲ್ಲಿ ಇದ್ದರೆ ರೈತ ಸಂಘದ ಮಾತುಗಳು ಕೇಳುವವರೇ ಇಲ್ಲ ಜೊತೆಗೆ ಅಧಿಕಾರಿಗಳು ಮಾತ್ರ ಯಾವುದಕ್ಕೂ ತಲೆಕೆಡಿಸಿಕೊಳ್ಳುವ ಗೋಜಿಗೆ ಹೋಗುವುದಿಲ್ಲ. ರೈತರು ಮಾತ್ರ ಜೀವನ ಪೂರ ಪರದಾಡುತ್ತಲೇ ಜೀವ ಬಿಡಬೇಕಾಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು...