Home namma chikmagalur chikamagalur ನೋಟರಿ ವಿ.ಕೆ.ರಘುಯಿಂದ ನೀರಿನ ಮೇಲೆ ತೇಲುತ್ತಾ ಯೋಗ ಭಂಗಿ ಪ್ರದರ್ಶನ
chikamagalurHomeLatest Newsnamma chikmagalur

ನೋಟರಿ ವಿ.ಕೆ.ರಘುಯಿಂದ ನೀರಿನ ಮೇಲೆ ತೇಲುತ್ತಾ ಯೋಗ ಭಂಗಿ ಪ್ರದರ್ಶನ

Share
Share

ಚಿಕ್ಕಮಗಳೂರು: ಯೋಗ ಸಾಧಕ ನಗರದ ವಕೀಲ ಹಾಗೂ ನೋಟರಿ ವಿ.ಕೆ.ರಘು ಅವರು  ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನೀರಿನ ಮೇಲೆ ತೇಲುತ್ತಾ ವಿವಿಧ ಯೋಗ ಭಂಗಿಗಳನ್ನು ಪ್ರದರ್ಶಿಸಿದರು.

ಬೈಪಾಸ್ ರಸ್ತೆಯ ನರ್ಚರ್ ಶಾಲೆ ಹಿಂಭಾಗದ ಅನ್ನಪೂರ್ಣ ಫಿಟ್ನೆಸ್ ಅಕಾಡೆಮಿಯ ಈಜು ಕೊಳದಲ್ಲಿ ಸತತ ಅರ್ಧಗಂಟೆಗು ಹೆಚ್ಚು ಕಾಲ ತಲಾ ೧೦೮ ಬಾರಿ ಶ್ರೀ ಆಂಜನೇಯ ಹಾಗೂ ಶ್ರೀ ರಾಮನಾಮವನ್ನು ಜಪಿಸುತ್ತ ಪದ್ಮಾಸನ, ಶಲಬಾಸನ, ವಜ್ರಾಸನ ಸೇರಿದಂತೆ ವಿವಿಧ ಭಂಗಿಗಳನ್ನು ಪ್ರದರ್ಶಿಸುವ ಮೂಲಕ ನೋಡುಗರ ಹುಬ್ಬೇರಿಸುವಂತೆ ಮಾಡಿದರು.

ಸತತ ೩೫ ವರ್ಷಗಳಿಂದ ಯೋಗಾಭ್ಯಾಸದಲ್ಲಿ ತೊಡಗಿರುವ ಅವರು, ನೀರಿನ ಮೇಲೆ ತೇಲುತ್ತಾ ಅತಿಹೆಚ್ಚು ಸಮಯ ಯೋಗ ಪ್ರದರ್ಶಿಸಿ ವಿಶ್ವದಾಖಲೆ ನಿರ್ಮಿಸಬೇಕು ಎನ್ನುವ ಸಂಕಲ್ಪ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಅವರ ಸಾಧನೆಯನ್ನು ಗುರುತಿಸಿ ೨೦೨೩ ರಲ್ಲಿ ಅಂದಿನ ಸಂಸದೆ ಶೋಭಾ ಕರಂದ್ಲಾಜೆ ಅವರು ಪ್ರಸಂಶಿಸಿದ್ದಾರೆ. ೨೦೨೪ ರಲ್ಲಿ ಜಿಲ್ಲಾಡಳಿತ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಪುರಸ್ಕರಿಸಿವೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಮ್ಮ ಯೋಗಾಭ್ಯಾಸದ ಹವ್ಯಾಸಕ್ಕೆ ತುಂಬಾ ಸ್ಪೂರ್ತಿ, ಶಿವಮೊಗ್ಗದ ವರದರಳ್ಳಿ ಶ್ರೀರಧರ ಸ್ವಾಮಿಯವರ ಆಶ್ರಮದ ಕೊಳದಲ್ಲಿ ಮೊದಲ ಬಾರಿಗೆ ಸುಮಾರು ಎರಡೂವರೆ ಗಂಟೆ ಸಮಯ ನೀರಿನ ಮೇಲೆ ತೇಲುತ್ತಾ ಯೋಗ ಪ್ರದರ್ಶಿಸಿದ್ದು, ಅದು ಮುಂದಿನ ಸಾಧನೆಗೆ ದಾರಿಯಾಯಿತು ಎಂದು ರಘು ಹೇಳಿದರು.

ನೀರಿನ ಮೇಲೆ ತೇಲುತ್ತ ಯೋಗಾಸನ ಮಾಡುವುದು ಕಠಿಣ ಎಂದು ಕಾಣಿಸುತ್ತದೆ. ಆದರೆ ಅಭ್ಯಾಸ ಮಾಡಿಕೊಂಡರೆ ತುಂಬಾ ಸರಳ ಜೊತೆಗೆ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವುದಕ್ಕೂ ಬಹಳ ಉಪಕಾರಿ ಎಂದರು. ನೀರಿನಲ್ಲಿ ತೇಲುತ್ತಾ ಯೋಗಾಸನ ಮಾಡುವವರ ಸಂಖ್ಯೆ ತುಂಬಾ ಕಡಿಮೆ. ಇದನ್ನು ಕಲಿಯಲು ಆಸಕ್ತಿ ಇದ್ದವರು ಮುಂದೆ ಬಂದರೆ ತರಬೇತಿ ನೀಡಲು ಸಿದ್ಧರಿದ್ದೇವೆ ಎಂದು ತಿಳಿಸಿದರು.

ಯೋಗಾಭ್ಯಾಸದಿಂದ ಆರೋಗ್ಯಕ್ಕಾಗುವ ಪ್ರಯೋಜನಗಳ ಬಗ್ಗೆ ಭಾರತ ಸೇರಿದಂತೆ ವಿಶ್ವಕ್ಕೆ ಮನವರಿಕೆ ಮಾಡಿಕೊಟ್ಟವರು ಪ್ರಧಾನಿ ನರೇಂದ್ರ ಮೋದಿ ಅವರು, ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸುತ್ತಿರುವುದಕ್ಕೂ ಮೋದಿ ಅವರೇ ಕಾರಣಕರ್ತರು. ಯೋಗದಿಂದ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯ. ದಿನವಿಡೀ ಉಲ್ಲಸಿತ ಮನಸ್ಸು, ಒತ್ತಡ ರಹಿತ ಜೀವನ ಸಾಧಿಸಲು ಸಹಕಾರಿ ಎಂದು ಅಭಿಪ್ರಾಯಿಸಿದರು.

Notary V.K. Raghu demonstrates a yoga pose while floating on water

Share

Leave a comment

Leave a Reply

Your email address will not be published. Required fields are marked *

Don't Miss

ಪೊಲೀಸ್ ಕಾನ್‌ಸ್ಟೇಬಲ್ ಲಿಖಿತ ಪರೀಕ್ಷೆಗೆ 451 ಅಭ್ಯರ್ಥಿಗಳ ಗೈರು

ಚಿಕ್ಕಮಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದ ಭಾನುವಾರ ರಾಜ್ಯಾದ್ಯಂತ ನಡೆದ ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್) ಹುದ್ದೆಗಳ ಲಿಖಿತ ಪರೀಕ್ಷೆಯು ಚಿಕ್ಕಮಗಳೂರು ಜಿಲ್ಲೆಯ ೧೬ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಡೆತಡೆ ಇಲ್ಲದೆ...

ವಿಧಾನ ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಇಂದು ಪ್ರಮಾಣ ವಚನ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ನೂತನ ಸದಸ್ಯೆಯಾಗಿ ನೇಮಕಗೊಂಡಿರುವ ಶ್ರೀಮತಿ ಗಾಯತ್ರಿ ಶಾಂತೇಗೌಡ ಅವರು ಸೋಮವಾರ (ಆಗಸ್ಟ್ 3) ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ...

Related Articles

ದೇವಸ್ಥಾನ ಪ್ರವೇಶದ ವಿಚಾರಕ್ಕೆ ಬಾಲಕನ ಮೇಲೆ ಕತ್ತಿಯಿಂದ ಹಲ್ಲೆಗೆ ಯತ್ನ

ಚಿಕ್ಕಮಗಳೂರು: ದೇವಸ್ಥಾನ ಪ್ರವೇಶದ ವಿಚಾರಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿಗೆ ಸೇರಿದ 16 ವರ್ಷದ ಬಾಲಕನಿಗೆ ಅವಾಚ್ಯವಾಗಿ...

ಸ್ಕೂಟರ್ ಮರದ ಬಿಳಲಿಗೆ ಡಿಕ್ಕಿಗೆ ಮಹಿಳೆ ಸ್ಥಳದಲ್ಲೇ ಸಾವು

ಕಡೂರು: ಸ್ಕೂಟರ್ ನಿಯಂತ್ರಣ ತಪ್ಪಿ ಆಲದ ಮರದ ಬಿಳಲಿಗೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಕುಳಿತಿದ್ದ...

ಜಲಜೀವನ್ ಮಿಷನ್ ಕಾಮಗಾರಿ ಸ್ಥಳದಿಂದ ಜನರೇಟರ್, ಪೈಪ್ ಕಳವು

ಚಿಕ್ಕಮಗಳೂರು: ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಪೈಪ್‌ಲೈನ್ ಕಾಮಗಾರಿಗೆ ಬಳಸುತ್ತಿದ್ದ 10 ಕೆವಿಎ ಡೀಸೆಲ್...

ಬೀರೂರಿನ ಫೈನಾನ್ಸ್ ಕಂಪನಿಗೆ ₹9.91 ಲಕ್ಷ ವಂಚನೆ

ಬೀರೂರು: ಬೇರೊಬ್ಬ ವ್ಯಕ್ತಿಯಂತೆ ನಟಿಸಿ ಫೈನಾನ್ಸ್‌ನಲ್ಲಿ ಗಿರವಿ ಇಟ್ಟಿರುವ ಚಿನ್ನ ಬಿಡಿಸಿಕೊಡುವುದಾಗಿ ನಂಬಿಸಿ ನವರತ್ನ ಗೋಲ್ಡ್...