Home namma chikmagalur chikamagalur ಹಿಂದೂಪರ ಮುಖಂಡರಿಗೆ ನೋಟೀಸ್‌ – ಹೀಗೆ ಮಾಡಲು ಪೊಲೀಸರಿಗೆ ಯಾವ ಧೈರ್ಯ
chikamagalurHomeLatest Newsnamma chikmagalur

ಹಿಂದೂಪರ ಮುಖಂಡರಿಗೆ ನೋಟೀಸ್‌ – ಹೀಗೆ ಮಾಡಲು ಪೊಲೀಸರಿಗೆ ಯಾವ ಧೈರ್ಯ

Share
Share

ಚಿಕ್ಕಮಗಳೂರು: ದ್ವೇಷ ಭಾಷಣ ಕಾಯ್ದೆಇನ್ನೂ ಜಾರಿಗೆ ಬಂದಿಲ್ಲ. ಆದರೆ ಪೊಲೀಸರು ಜಾರಿಗೆ ಬಾರದ ಕಾಯ್ದೆ ಅಡಿ ಹಿಂದೂಪರ ಮುಖಂಡರಿಗೆ ನೋಟೀಸ್‌ ನೀಡುತ್ತಿದ್ದಾರೆ. ಹೀಗೆ ಮಾಡಲು ಪೊಲೀಸರಿಗೆ ಯಾವ ಧೈರ್ಯ. ಪೊಲೀಸರಿಗೆ ಕಾನೂನಿನ ಅರಿವು ಇಲ್ಲದಿದ್ದರೆ ಅವರಿಗೆ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಸ್ವಯಂ ಸೇವಕ ಸಂಘ ನೂರು ವರ್ಷದಿಂದ ಸಮಾಜದ ನಡುವೆ ಕೆಲಸ ಮಾಡುತ್ತಿದೆ. ಜೊತೆಗೆ ಕುಟುಂಬದ ಮೌಲ್ಯ ಹೆಚ್ಚಿಸಲು ಅಸ್ಪೃಷ್ಯತೆ ಹೋಗಲಾಡಿಸಿ ಸಾಮರಸ್ಯ ಮೂಡಿಸುತ್ತಿದೆ. ಹೀಗಿರುವಾಗ ಪೊಲೀಸರು ಎರ್‌ಎಸ್‌ಎಸ್‌ನ ಪಂಚ ಪರಿವರ್ತನೆ ಕಾರ್ಯಕ್ರಮಕ್ಕೆ ನೋಟೀಸ್‌ ನೀಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪೊಲೀಸರಿಗೆ ಧೈರ್ಯವಿದ್ದರೆ ಯಾವ ಗ್ರಂಥ ಹಾಗೂ ಯಾರು ಮತೀಯ ಗಲಭೆಗೆ ಕಾರಣರಾಗುತ್ತಿವೆಯೋ ಅವರಿಗೆ ಮೊದಲು ನೋಟೀಸ್‌ ನೀಡಲಿ. ಮಕ್ಕಳ ಕೈಗೆ ಕಲ್ಲು ಕೊಟ್ಟು ದೇವರಿಗೆ ಕಲ್ಲು ಹೊಡೆಸುವವರಿಗೆ, ಯಾವ ಮತೀಯ ಗ್ರಂಥ ಜಾಗತಿಕ ಭಯೋತ್ಪಾದನೆಗೆ ಕಾರಣವಾಗುತ್ತಿದೆಯೋ ಅವರಿಗೆಲ್ಲಾ ಮೊದಲು ನೋಟೀಸ್‌ ನೀಡಿ ಎಂದು ಸವಾಲು ಹಾಕಿದರು.

ಭಯೋತ್ಪಾದನೆಗೆ ಕಾರಣರಾಗುತ್ತಿರುವವರಿಗೆ ನೋಟೀಸ್ ನೀಡಲು ಪೊಲೀಸರಿಗೆ ಧೈರ್ಯವಿಲ್ಲವೇ ಎಂದು ಪ್ರಶ್ನಿಸಿದ ಸಿ.ಟಿ.ರವಿ, ರಾಷ್ಟ್ರ ಭಕ್ತಿ ಮೂಡಿಸುವ ಸಂಘಟನೆಗಳಿಗೆ, ವ್ಯಕ್ತಿಗಳಿಗೆ ನೋಟೀಸ್‌ ನೀಡಿ, ಪಾಕಿಸ್ತಾನ್‌ ಜಿಂದಾಬಾದ್‌ ಎನ್ನುವವರಿಗೆ ನೋಟೀಸ್‌ ನೀಡದೆ ಪೊಲೀಸರು ನಗೆಪಾಟಲಿಗೀಡಾಗಿದ್ದಾರೆ ಎಂದು ವ್ಯಂಗ್ಯವಾಡಿದರು.

ಅಕ್ರಮ ಬಾಂಗ್ಲಾದೇಶೀಯರನ್ನು ಹಿಡಿದುಕೊಟ್ಟವರ ಮೇಲೆಯೇ ಪೊಲೀಸರು ದೂರು ದಾಖಲಿಸುತ್ತಾರೆ. ಆದರೆ 1500 ರೂ. ಪಡೆದು ಅಕ್ರಮ ಬಾಂಗ್ಲಾದೇಶಿ ಪ್ರಜೆಗಳಿಗೆ ಆಧಾರ್‌ ಕಾರ್ಡ್‌ ಮಾಡಿಕೊಡುವ ದೇಶದ್ರೋಹಿಗಳನ್ನು ಹಿಡಿಯುವುದಿಲ್ಲ. ಪೊಲೀಸರಿಗೆ ನಾಚಿಕೆಯಾಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ನೋಟೀಸ್‌ ನೀಡುವ ಮೂಲಕ ನಮ್ಮನ್ನು ಎದುರಿಸಬಹುದು ಎಂದು ಪೊಲೀಸರು ತಿಳಿದುಕೊಂಡರೆ ಅದು ತಪ್ಪು ತಿಳಿವಳಿಕೆ. ನೋಟೀಸ್‌ ನೀಡುವ ಮೂಲಕ ನಮ್ಮನ್ನು ಹೆದರಿಸಲೂ ಸಾಧ್ಯವಾಗುವುದಿಲ್ಲ. ಜೊತೆಗೆ ನಾವು ಸತ್ಯ ಹೇಳುವುದನ್ನು ನಿಲ್ಲಿಸಲೂ ಸಾಧ್ಯವಾಗುವುದಿಲ್ಲ ಎಂದು ಹೇಳಿದರು.

Notice to pro-Hindu leaders – How dare the police do this?

Share

Leave a comment

Leave a Reply

Your email address will not be published. Required fields are marked *

Don't Miss

ಹಿರಿಯ ನಾಗರಿಕರಿಗೆ 3.12 ಲಕ್ಷ ರೂ ವಂಚನೆ

ಚಿಕ್ಕಮಗಳೂರು: ಸೈಬರ್ ಕ್ರಿಮಿನಲ್‌ಗಳ ಜಾಲಕ್ಕೆ ಸಿಲುಕಿ ಹಿರಿಯ ನಾಗರಿಕರೊಬ್ಬರು ಬರೋಬ್ಬರಿ 3.12 ಲಕ್ಷ ಕಳೆದುಕೊಂಡಿದ್ದಾರೆ. ನಗರದಲ್ಲಿ ವಾಸವಾಗಿರುವ 62 ವರ್ಷದ ವೆಂಕಟೇಶ್ ಇತ್ತೀಚೆಗೆ ಅವರ ಮೊಬೈಲ್‌ಗೆ ಬಂದಿದ್ದ ಒಂದು ಅಪರಿಚಿತ ಎಪಿಕೆ...

ಜಿಲ್ಲೆಯ ಒಟ್ಟು 15 ಮಂದಿಯ ಗಡಿಪಾರಿಗೆ ಶಿಫಾರಸ್ ಪತ್ರ

ಚಿಕ್ಕಮಗಳೂರು: ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್, ಭಜರಂಗದಳದ ಮುಖಂಡ ಶ್ಯಾಮ್ ವಿ ಗೌಡ, ಮುಸ್ಲಿಂ ಸಮುದಾಯದ 10 ಮಂದಿ ಸೇರಿ ಜಿಲ್ಲೆಯ ಒಟ್ಟು 15 ಮಂದಿಯ ಗಡಿಪಾರಿಗೆ ಜಿಲ್ಲಾ...

Related Articles

ಎಸ್.ಬಿದರೆಯ ಬೆಂಕಿ ಲಕ್ಷ್ಮೀ ರಂಗನಾಥಸ್ವಾಮಿ ಬ್ರಹ್ಮ ರಥೋತ್ಸವ

ಕಡೂರು: ತಾಲ್ಲೂಕಿನ ಸಖರಾಯಪಟ್ಟಣ ಹೋಬಳಿ ಎಸ್.ಬಿದರೆಯ ಬೆಂಕಿ ಲಕ್ಷ್ಮೀ ರಂಗನಾಥಸ್ವಾಮಿ ಬ್ರಹ್ಮ ರಥೋತ್ಸವವು ಮಂಗಳವಾರ ಶ್ರದ್ಧಾ...

ಚಿಕ್ಕಮಗಳೂರು ನಗರದ ಐ.ಜಿ. ರಸ್ತೆಯಲ್ಲಿದ್ದ ಇಂದಿರಾ ಕ್ಯಾಂಟೀನ್ ಸ್ಥಳಾಂತರ

ಚಿಕ್ಕಮಗಳೂರು : ನಗರದ ಐ.ಜಿ. ರಸ್ತೆಯ ಬಸ್ ನಿಲ್ದಾಣದ ಸಮೀಪವಿರುವ ಇಂದಿರಾ ಕ್ಯಾಂಟೀನ್ ಅನ್ನು ಸ್ಥಳಾಂತರ...

ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳು ಮನೆ ಬಾಗಿಲಿಗೆ

ಚಿಕ್ಕಮಗಳೂರು: ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ...

ಶಾಸಕ ಜಿ.ಹೆಚ್. ಶ್ರೀನಿವಾಸ್ ವಿರುದ್ಧ ಪ್ರತಿಭಟನೆ

ಅಜ್ಜಂಪುರ : ಶಾಸಕ ಜಿ.ಹೆಚ್. ಶ್ರೀನಿವಾಸ್ ದಲಿತ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು...