Home namma chikmagalur ಕೋಡಿ ಬಿದ್ದ ಅಯ್ಯನ ಕೆರೆಗೆ ಸಿ.ಟಿ.ರವಿ ಬಾಗಿನ ಅರ್ಪಣೆ
namma chikmagalurchikamagalurHomeLatest News

ಕೋಡಿ ಬಿದ್ದ ಅಯ್ಯನ ಕೆರೆಗೆ ಸಿ.ಟಿ.ರವಿ ಬಾಗಿನ ಅರ್ಪಣೆ

Share
Share

ಚಿಕ್ಕಮಗಳೂರು: ಬೆರಟಿಕೆರೆ ತುಂಬಿಸುವ ಕಾಮಗಾರಿಗೆ ಎದುರಾಗಿರುವ ಸಮಸ್ಯೆಯನ್ನು ಎರಡೂ ಕಡೆ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬಗೆಹರಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.

ಕೋಡಿ ಬಿದ್ದ ಅಯ್ಯನ ಕೆರೆಗೆ ಸೋಮವಾರ ಬಾಗಿನ ಅರ್ಪಿಸಿ ನಂತರ ಮಾತನಾಡಿದ ಅವರು, ಅಯ್ಯನ ಕೆರೆ ಕೋಡಿ ಬಿದ್ದ ನೀರನ್ನ ಲಿಫ್ಟ್ ಮಾಡಿ ಬೆರಟಿ ಕೆರೆ ತುಂಬಿಸುವ ಯೋಜನೆಗೆ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ೯.೯೦ ಕೋಟಿ ರೂ., ಮಂಜೂರು ಮಾಡಿಸಿದ್ದೆವು. ಈಗ ಕಾಮಗಾರಿ ಸಂದರ್ಭದಲ್ಲಿ ವಿವಾದವಾಗಿದೆ. ಇದಕ್ಕೆ ಕಾರಣ ಗೊತ್ತಿಲ್ಲ. ಯಾರಿಗೂ ತೊಂದರೆ ಆಗದಂತೆ ರೈತರಲ್ಲಿರುವ ಆತಂಕ ದೂರ ಮಾಡಲು ಸಮಸ್ಯೆ ಬಗೆಹರಿಸಿ ಕಾಮಗಾರಿ ಮಾಡಬೇಕು. ಯಾರನ್ನೂ ಭಯಕ್ಕೆ ದೂಡದೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕಾಮಗಾರಿ ಕೈಗೆತ್ತಿಕೊಳ್ಳುವ ಕೆಲಸವನ್ನ ಎರಡೂ ಕಡೆ ಶಾಸಕರು, ಸಚಿವರು, ಜಿಲ್ಲಾಡಳಿತ ಮಾಡಬೇಕು ಎಂದು ವಿನಂತಿಸುತ್ತೇನೆ ಎಂದರು.

ನೀರು ಜೀವ ಜಲ. ಅದು ಬದುಕು ಸುಡುವ ಬೆಂಕಿ ಆಗಬಾರದು. ಕೆಳಭಾಗದ ಜನರಿಗೆ ನಮ್ಮ ಪರಿಸ್ಥಿತಿ ಏನಾಗುತ್ತದೆ ಎನ್ನುವ ಭಯ ಇದೆ ಅದನ್ನು ನಿವಾರಿಸಬೇಕು. ಎಷ್ಟು ಪ್ರಮಾಣದ ನೀರು ಯಾವಾಗ ತೆಗೆಯಲಾಗುತ್ತದೆ ಎನ್ನುವುದನ್ನು ಮನವರಿಕೆ ಮಾಡಿ ಕರಾರು ಪತ್ರ ಮಾಡಿಕೊಡಬೇಕು ಎಂದರು.

ಕೆಳಬಾಗದಲ್ಲಿರುವವರು ರೈತರೇ, ಮೇಲ್ಭಾಗದಲ್ಲಿರುವವರೂ ರೈತರೇ, ಎಲ್ಲರೂ ನಮ್ಮವರೇ, ಎಲ್ಲರೂ ಕಳ್ಳು ಬಳ್ಳಿ ಸಂಬಂಧ ಇರುವುದರಿಂದ ಸಮಸ್ಯೆ ಬಗೆಹರಿಸಲು ಅಧಿಕಾರ ಬಳಸಬಾರದು. ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮಸ್ಯೆ ಪರಿಹರಿಸಬೇಕು. ಇದು ಬಗೆಹರಿಸಲಾಗದ ಸಮಸ್ಯೆ ಅಲ್ಲ, ಅಂತರಾಜ್ಯ ವಿವಾದಗಳನ್ನೇ ಬಗೆಹರಿಸುತ್ತೇವೆ. ಇದು ಗ್ರಾಮ ಗ್ರಾಮಗಳ ನಡುವಿನ ಸಮಸ್ಯೆ ಎರಡೂ ಕಡೆಯವರಿಗೆ ಯಾವುದೇ ರೀತಿ ತೊಂದರೆ ಆಗದಂತೆ ಕ್ರಮ ತೆಗೆದುಕೊಳ್ಳಬೇಕು ಎಂದರು.

ಭಾರತ ಸಂಸ್ಕಾರಯುತವಾದ ರಾಷ್ಟ್ರ. ಪ್ರಕೃತಿಯನ್ನ ಪಂಚಭೂತಗಳು ಎಂದು ಪೂಜಿಸುತ್ತೇವೆ. ಜಗತ್ತಿನ ಸೃಷ್ಠಿಯಾಗಿರುವುದೇ ನೀರು, ಭೂಮಿ, ಅಗ್ನಿ, ಆಕಾಶ ಮತ್ತು ವಾಯುವಿನಿಂದ. ಈ ಐದು ತತ್ವಗಳು ಎಲ್ಲಾ ವಸ್ತುಗಳಲ್ಲೂ ಇವೆ. ಈ ಕಾರಣಕ್ಕೆ ಭಗವತ್‌ಸ್ವರೂಪಿಯಾಗಿ ಆರಾಧಿಸುವ ಮತ್ತು ಉಪಕಾರ ಸ್ಮರಣೆ ಮಾಡುವುದು ಭಾರತೀಯ ಂಸ್ಕೃತಿ. ಈ ಕಾರಣಕ್ಕೆ ನಮ್ಮ ಪೂರ್ವಿಕರು ಕೆರೆ, ಕಟ್ಟೆ ತುಂಬಿದಾಗ ಗಂಗಾ ಮಾತೆ ಪೂಜಿಸುವ ಪದ್ಧತಿ ತಂದಿದ್ದಾರೆ ಎಂದರು.

ಗಿರಿ ಪ್ರದೇಶದಲ್ಲಿ ಉತ್ತಮ ಮಳೆಯಾಗಿರುವುದರಿಂದ ಅಯ್ಯನ ಕೆರೆ ಮತ್ತು ಮದಗದ ಕೆರೆ ಎರಡೂ ಭರ್ತಿಯಾಗಿ ಗಂಗಾ ಪೂಜೆ ನೆರವೇರಿಸಿದ್ದೇವೆ. ಪ್ರತಿ ವರ್ಷ ಈ ರೀತಿ ಗಂಗೆ ತುಂಬಿ ಹರಿಯಲಿ, ಅದರಿಂದ ಕೆರೆ ಕಟ್ಟೆಗಳು ತುಂಬಿ, ಜನ ಜಾನುವಾರುಗಳು ಸಂತೃಪ್ತಿಯಿಂದ ಇರಲು ಸಾಧ್ಯವಾಗುತ್ತದೆ ಎಂದರು.

ನಾವು ಪ್ರವಾಸೋದ್ಯಮ ಸಚಿವರಾಗಿದ್ದಾಗ ವಿಶೇಷವಾಗಿ ಅಯ್ಯನ ಕೆರೆಗೆ ೮.೮೪ ಕೋಟಿ ರೂ. ಮಂಜೂರು ಮಾಡಿಸಿದ್ದೆವು. ಈಗಲೂ ಅದೇ ಹಣದಲ್ಲಿ ಕೆಲಸ ನಡೆಯುತ್ತಿದೆ. ಇದಲ್ಲದೆ ಲೋಕೋಪಯೋಗಿ ಇಲಾಖೆಯಿಂದ ಒಮ್ಮೆ ೭ ಕೋಟಿ ರೂ. ಮಂಜೂರು ಮಾಡಿಸಿ ಕಾಂಕ್ರಿಟ್ ರಸ್ತೆ ಅಭಿವೃದ್ಧಿ ಪಡಿಸಲಾಗಿತ್ತು. ಸಣ್ಣ ನೀರಾವರಿ ಇಲಾಖೆಯಲ್ಲಿ ಒಮ್ಮೆ ೩.೮೨ ಕೋಟಿ ರೂ. ಕೆರೆ ಏರಿ ದುರಸ್ಥಿಗೆ ಮಂಜೂರು ಮಾಡಿಸಿದ್ದೆವು. ನಾಲ್ಕು ಕಾಲುವೆಗ ಅಬಿವೃದ್ದಿಗೆ ೧೧ ಕೋಟಿ ರೂ. ಸೇರಿ ಒಟ್ಟು ಸಣ್ಣ ನೀರಾವರಿ ಇಲಾಖೆಯಿಂದ ೧೪.೩೨ ಕೋಟಿ ರೂ., ಪ್ರವಾಸೋದ್ಯಮ ಇಲಾಖೆಯಿಂದ ೮.೮೪ ಕೋಟಿ., ಲೋಕೋಪಯೋಗಿ ಇಲಾಖೆ ವತಿಯಿಂದ ೭ ಕೋಟಿ ಮಂಜೂರು ಮಾಡಿಸಿ ಅಭಿವೃದ್ಧಿ ಪಡಿಸಲಾಗಿದೆ ಎಂದರು.

ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಚ್.ಸಿ.ಕಲ್ಮರುಡಪ್ಪ, ಬಿಳೇಕಲ್ಲಹಳ್ಳಿ ಗ್ರಾ.ಪಂ. ಅಧ್ಯಕ್ಷ ಪಾದಮನೆ ಸ್ವಾಮಿ, ಸಖರಾಯಪಟ್ಟಣ ಪಂಚಾಯ್ತಿ ಅಧ್ಯಕ್ಷೆ ರಾಜಮ್ಮ, ಪಿಳ್ಳೇನಹಳ್ಳಿ ಪಂಚಾಯ್ತಿ ಸದಸ್ಯರು, ಜಿ.ಪಂ. ಮಾಜಿ ಉಪಾಧ್ಯಕ್ಷ ಗುಣಸಾಗರ ವಿಜಯಕುಮಾರ್, ಲೋಕೇಶ್, ಲೋಕೇಶ್ ಮಾಸ್ಟರ್, ಪ್ರಕಾಶ್, ಯೋಗೀಶ್, ರಾಜೇಶ್, ದಿನೇಶ್ ಇತರರು ಇದ್ದರು

Offering of CT Ravi bag to Ayyanakere where Kodi died

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...