Home namma chikmagalur ರೈತಸಂಘ ಸದೃಢಗೊಳಿಸಲು ಜಿಲ್ಲಾ ಸಮಿತಿಗೆ ಪದಾಧಿಕಾರಿ ನಮೇಕ
namma chikmagalurchikamagalurHomeLatest News

ರೈತಸಂಘ ಸದೃಢಗೊಳಿಸಲು ಜಿಲ್ಲಾ ಸಮಿತಿಗೆ ಪದಾಧಿಕಾರಿ ನಮೇಕ

Share
Share

ಚಿಕ್ಕಮಗಳೂರು:  ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲೆಯಲ್ಲಿ ಸಂಘಟನಾತ್ಮಕವಾಗಿ ಬಲಗೊಳ್ಳುತ್ತಿದ್ದು, ಇನ್ನೂ ಹೆಚ್ಚು ಸದೃಢಗೊಳಿಸಲು ಜಿಲ್ಲಾ ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಡಿ. ಮಹೇಶ್ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರೈತರು ಒಗ್ಗಟ್ಟಾಗಿ ಹೋರಾಟ ಮಾಡಿದಲ್ಲಿ ಮಾತ್ರ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂಬುದು ಬಹುತೇಕ ರೈತರಿಗೆ ಮನವರಿಕೆಯಾಗಿದೆ. ಹೀಗಾಗಿ ತಾವೇ ಮುಂದೆ ಬಂದು ಸಂಘದ ಜವಾಬ್ದಾರಿಗಳನ್ನು ಹೊತ್ತುಕೊಳ್ಳುತ್ತಿದ್ದಾರೆ ಎಂದರು.

ರೈತ ಸಂಘದ ಜಿಲ್ಲಾ ಗೌರವಾಧ್ಯಕ್ಷರಾಗಿ ಎಂ.ಸಿ. ಬಸವರಾಜು, ಪ್ರಧಾನ ಕಾರ್ಯದರ್ಶಿ ಎಂ.ಬಿ. ಚಂದ್ರಶೇಖರ್, ಉಪಾಧ್ಯಕ್ಷರಾಗಿ ಶಿವಕುಮಾರ್, ಪುಟ್ಟಸ್ವಾಮಿಗೌಡ, ಕಾರ್ಯಾಧ್ಯಕ್ಷರಾಗಿ ಕಡೂರು ದಯಾನಂದ, ಎನ್.ಆರ್.ಪುರ ಬಸವರಾಜು, ಅಜ್ಜಂಪುರ ಅನಂತಪದ್ಮನಾಭ, ಭಾರತಿ ಮೂಡಿಗೆರೆ, ಕೃಷ್ಣಯ್ಯಗೌಡ ಕೊಪ್ಪ. ಛಾಯಾಪತಿ, ಖಜಾಂಚಿಯಾಗಿ ಕರ್ತಿಕೆರೆ ಲೋಕೇಶ್, ಸಂಘಟನಾ ಕಾರ್ಯದರ್ಶಿಯಾಗಿ ಎಚ್.ಡಿ. ಲೋಕೇಶ್ ಮಹಿಳಾ ಜಿಲ್ಲಾಧ್ಯಕ್ಷರನ್ನಾಗಿ ಕಡೂರು ಹಾಲಮ್ಮ ಸೇರಿದಂತೆ ಒಟ್ಟು ೨೮ ಮಂದಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು ಎಂದು ಹೇಳಿದರು.

ಇದರೊಂದಿಗೆ ಮಯೂರ ಯುವ ಸೇನೆಯ ಸುಮಾರು ೬೦ ಮಂದಿ ಯುವಕರು ರೈತ ಸಂಘಟನೆಯೊಂದಿಗೆ ಸಕ್ರಿಯರಾಗಿದ್ದು ನಮ್ಮೊಂದಿಗೆ ಗುರುತಿಸಿಕೊಂಡಿದ್ದಾರೆ. ಇದರಿಂದ ರೈತ ಸಂಘಟನೆಗೆ ಬಲಬಂದಾಂತಾಗಿದೆ ಎಂದು ತಿಳಿಸಿದರು.
ದೇವನಹಳ್ಳಿ ರೈತರ ಭೂಸ್ವಾನಪ್ರಕ್ರಿಯೆಯನ್ನು ರದ್ದುಮಾಡಿದ ಸರಕಾರದ ಕ್ರಮವನ್ನು ಸ್ವಾಗತಿಸುವುದಾಗಿ ಅವರು ಹೇಳಿದರು.

ಲಕ್ಯಾ ಹೋಬಳಿಯಲ್ಲಿ ಮಳೆ ಬಾರದೆ ಬಿತ್ತಿದ್ದ ಬೀಜಗಳು ಮೊಳಕೆಯೊಡೆಯದೆ ಬೆಳೆ ನಾಶವಾಗಿದೆ ಇಂತಹ ಸಂದರ್ಭ ತೋಟಗಾರಿಕೆ, ಕೃಷಿ ಇಲಾಖೆ ಸಮೀಕ್ಷೆ ಮಾಡಿ ರೈತರಿಗೆ ಆಗಿರುವ ನಷ್ಟದ ವರದಿಯನ್ನು ಸರಕಾರಕ್ಕೆ ಸಲ್ಲಿಸಬೇಕು ಎಂದು ಎಚ್.ಡಿ.ಉಮೇಶ್ ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಯೂರ ಯುವ ಸೇನೆಯ ಅಧ್ಯಕ್ಷ ರಾಘವೇಂದ್ರ, ಕಾರ್ಯದರ್ಶಿ ಸ್ವಾಗತ್, ಸಚಿನ್, ರೈತ ಸಂಘದ ಎಂ.ಬಿ. ಚಂದ್ರಶೇಖರ್, ಬಸವರಾಜು ಮತ್ತಿತರರು ಇದ್ದರು.

Office bearers appointed to district committee to strengthen farmers’ association

Share

Leave a comment

Leave a Reply

Your email address will not be published. Required fields are marked *

Don't Miss

ಗಿರಿ ಪ್ರದೇಶದ ಪ್ರವಾಸೋದ್ಯಮ ಸ್ಥಳಗಳಿಗೆ ತಾತ್ಕಾಲಿಕ ನಿರ್ಬಂಧ

ಚಿಕ್ಕಮಗಳೂರು: : ಜಿಲ್ಲೆಗೆ ಆಗಮಿಸುತ್ತಿರುವ ಪ್ರವಾಸಿಗರು ಮತ್ತು ಸ್ಥಳೀಯ ಜನತೆಯ ಹಿತದೃಷ್ಟಿಯಿಂದ ಗಿರಿ ಪ್ರದೇಶದ ಕೆಲವು ಪ್ರವಾಸೋದ್ಯಮ ಸ್ಥಳಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ...

ದೇವನಹಳ್ಳಿ 1,777 ಎಕರೆ ಭೂ ಸ್ವಾಧೀನ ನೋಟಿಫಿಕೇಶನ್ ರದ್ದು

ಬೆಂಗಳೂರು: ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಸುತ್ತಮುತ್ತಲಿನ ಒಟ್ಟ 13 ಹಳ್ಳಿಗಳ 1,777 ಎಕರೆ ಭೂ ಸ್ವಾಧೀನ ನಿರ್ಧಾರವನ್ನು ರಾಜ್ಯ ಸರ್ಕಾರ ಹಿಂತೆಗೆದುಕೊಂಡಿದೆ. ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ  ನೇತೃತ್ವದಲ್ಲಿ ನಡೆದ ರೈತರು,...

Related Articles

ರೈತ ಸಂಘಟನೆ ದಾರಿ ಬಿಟ್ಟಿತು ? ಎಲ್ಲಿಗೆ ಪಯಣ ಯಾವುದೋ ದಾರಿ !

ಮಾಸದಿರಲಿ ಬದಲಾಯಿಸದಿರಲಿ ರೈತರ ಹೆಗಲ ಮೇಲೇರಿರುವ ಶಾಲಿನ ಹಸಿರು ಬಣ್ಣ. ದೇಶಕ್ಕೆ ಅನ್ನ ಕೊಡುವ ರೈತ...

ದೇಶಭಕ್ತಿಯ ಪ್ರತೀಕ ಮಹಾರಾಣಾ ಪ್ರತಾಪ್‌ಸಿಂಗ್

ಚಿಕ್ಕಮಗಳೂರು:  ಪರಾಕ್ರಮ-ಆದರ್ಶ ದೇಶಭಕ್ತಿಯ ಪ್ರತೀಕ ಮಹಾರಾಣಾ ಪ್ರತಾಪಸಿಂಗ್ ಎಂದು ಕರ್ನಾಟಕ ರಜಪೂತ ಮಹಾಸಭಾ ನಿರ್ದೇಶಕ ಬೆಂಗಳೂರಿನ...

ದತ್ತು ಸಂಸ್ಥೆಯ ಸಿಬ್ಬಂದಿ ಆಯಾ ಅಮಾನತು

ಚಿಕ್ಕಮಗಳೂರು: ನಗರದ ದತ್ತು ಸಂಸ್ಥೆಯ ಸಿಬ್ಬಂದಿ ನಿರ್ಲಕ್ಷ್ಯದಿಂದ ಒಂದು ವರ್ಷ ಮೂರು ತಿಂಗಳ ಹೆಣ್ಣುಮಗು ಸುಟ್ಟ...

ವೈದ್ಯ ಇಲ್ಲದ ಕಳಸ ತಾಲೂಕು ಆಸ್ಪತ್ರೆ

ಚಿಕ್ಕಮಗಳೂರು: ಕಳಸ ತಾಲೂಕು ಆಸ್ಪತ್ರೆಯಲ್ಲಿ ಓರ್ವ ವೈದ್ಯರೂ ಇಲ್ಲದೆ ಜನರು ಚಿಕಿತ್ಸೆಗೆ ಪರದಾಡುವಂತಾಗಿದೆ. ಸುತ್ತಮುತ್ತಲಿನ ಗ್ರಾಮಸ್ಥರು...