Home namma chikmagalur chikamagalur ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಓಮಿನಿ ಪಲ್ಟಿ
chikamagalurCrime NewsHomeLatest Newsnamma chikmagalur

ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಓಮಿನಿ ಪಲ್ಟಿ

Share
Share

ಚಿಕ್ಕಮಗಳೂರು : ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಓಮಿನಿ ಕಾರೊಂದು ಚಾಲಕನ ನಿರ್ಲಕ್ಷ್ಯದಿಂದ ಪಲ್ಟಿಯಾದ ಘಟನೆ ಚಿಕ್ಕಮಗಳೂರು ತಾಲೂಕಿನ ದಿಣ್ಣೆಕೆರೆ ಗ್ರಾಮದ ಬಳಿ ಸಂಭವಿಸಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.

ಕೂದುವಳ್ಳಿಯ ಲಿಟಲ್ ಫ್ಲವರ್ ಪ್ಲೇ ಹೋಮ್ ಗೆ ಸೇರಿದ ಓಮಿನಿ ಕಾರಿನಲ್ಲಿ ಅಪಘಾತ ಸಂಭವಿಸಿದ ವೇಳೆ 12ಕ್ಕೂ ಹೆಚ್ಚು ಪುಟ್ಟ ಮಕ್ಕಳು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಪೋಷಕರು ಹಾಗೂ ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ.

ಮಕ್ಕಳನ್ನು ಶಾಲೆಗೆ ಕರೆತರುವ ಮತ್ತು ಕರೆದೊಯ್ಯುವ ಉದ್ದೇಶಕ್ಕಾಗಿ ಕಮರ್ಷಿಯಲ್ ವಾಹನಗಳನ್ನೇ ಬಳಸಬೇಕು ಎಂಬ ನಿಯಮವಿದ್ದರೂ, ಕಳೆದ ಹಲವು ವರ್ಷಗಳಿಂದ ವೈಟ್‌ಬೋರ್ಡ್ (ಖಾಸಗಿ ಬಳಕೆಯ) ವಾಹನದಲ್ಲೇ ಮಕ್ಕಳನ್ನು ಸಾಗಿಸಲಾಗುತ್ತಿತ್ತು ಎಂಬ ಆರೋಪ ಕೇಳಿ ಬಂದಿದೆ. ಇದರಿಂದ ಮಕ್ಕಳ ಸುರಕ್ಷತೆ ವಿಚಾರದಲ್ಲಿ ಪ್ಲೇ ಹೋಮ್ ಆಡಳಿತ ಮಂಡಳಿಯ ನಿರ್ಲಕ್ಷ್ಯ ಬಯಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.

ಇನ್ನೂ ಆತಂಕಕಾರಿ ಸಂಗತಿಯೆಂದರೆ, ವಾಹನ ಚಲಾಯಿಸುತ್ತಿದ್ದ ವ್ಯಕ್ತಿಗೆ ಮಾನ್ಯ ಚಾಲನಾ ಪರವಾನಗಿ (DL) ಇರಲಿಲ್ಲ ಎನ್ನಲಾಗಿದೆ. ಆತ ಕೇವಲ ಇತ್ತೀಚೆಗೆ ಲರ್ನಸ್್ರ ಲೈಸೆನ್ಸ್ (LLR) ಪಡೆದಿದ್ದನು ಎಂದು ತಿಳಿದುಬಂದಿದ್ದು, ಇಂತಹ ವ್ಯಕ್ತಿಗೆ ಮಕ್ಕಳಿದ್ದ ವಾಹನದ ಜವಾಬ್ದಾರಿ ನೀಡಿರುವುದು ಪ್ರಶ್ನೆಗೆ ಕಾರಣವಾಗಿದೆ.

ಅಲ್ಲದೆ, ಅಪಘಾತಕ್ಕೀಡಾದ ವಾಹನದ ವಿಮೆ (ಇನ್ಸೂರೆನ್ಸ್) ಅವಧಿಯೂ ಮುಕ್ತಾಯಗೊಂಡಿರುವ ಮಾಹಿತಿ ಹೊರಬಿದ್ದಿದೆ. ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೋಷಕರು ಪ್ಲೇ ಹೋಮ್ ಆಡಳಿತ ಮಂಡಳಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಕ್ಕಳ ಜೀವದೊಂದಿಗೆ ಚೆಲ್ಲಾಟವಾಡಿರುವವರ ವಿರುದ್ಧ ಸಂಬಂಧಪಟ್ಟ ಇಲಾಖೆಗಳು ಹಾಗೂ ಸಾರಿಗೆ ಅಧಿಕಾರಿಗಳು ಸಮಗ್ರ ತನಿಖೆ ನಡೆಸಿ, ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪೋಷಕರು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Omni carrying school children overturns

Share

Leave a comment

Leave a Reply

Your email address will not be published. Required fields are marked *

Don't Miss

ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಪುಂಡಾಟ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹೆಬ್ಬೆ ವಲಯ ವ್ಯಾಪ್ತಿಯ ಭದ್ರಾ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಯುವಕರ ತಂಡವೊಂದು ಖಾಸಗಿ ಓಪನ್ ಜೀಪಿನಲ್ಲಿ ಅಕ್ರಮವಾಗಿ ಪ್ರವೇಶಿಸಿ ಕಾಡಾನೆಗಳನ್ನು ಕಾಡಿರುವ ಆರೋಪ ಕೇಳಿಬಂದಿದ್ದು,...

ರೈತ ಸಂಘದ ಡಿ.ರಾಮೇಗೌಡ ಕಲ್ಲಹಳ್ಳಿ ಆಯ್ಕೆ ಕ್ರಮಬದ್ಧ

ಚಿಕ್ಕಮಗಳೂರು: ತಾಲ್ಲೂಕು ಅಧ್ಯಕ್ಷರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ತಾಲ್ಲೂಕು ಸಮಿತಿಯ ಸಭೆಯಲ್ಲಿ ಹಾಜರಿದ್ದ ಪದಾಧಿಕಾರಿಗಳ ನಿರ್ಣಯದಂತೆ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿರುವ ಡಿ.ರಾಮೇಗೌಡ ಕಲ್ಲಹಳ್ಳಿ ಅವರ ಆಯ್ಕೆ ಕ್ರಮಬದ್ಧವಾಗಿದೆ ಎಂದು ಕರ್ನಾಟಕ ರಾಜ್ಯ...

Related Articles

ಜನಪ್ರತಿನಿಧಿ ನಿರ್ಲಕ್ಷ್ಯಕ್ಕೆ ಬೇಸತ್ತು ದಂಪತಿ ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿ

ಮೂಡಿಗೆರೆ: ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ದಂಪತಿ ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾಗಿದ್ದಾರೆ....

ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಅಕ್ರಮವಾಗಿ ರಸ್ತೆ ನಿರ್ಮಾಣ

ಚಿಕ್ಕಮಗಳೂರು: ರಾಜ್ಯದ ಅತ್ಯುನ್ನತ ಶಿಖರವಾದ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಅಕ್ರಮವಾಗಿ ರಸ್ತೆ ನಿರ್ಮಾಣ ಹಾಗೂ...

ಆಲ್ದೂರು ಸಮೀಪ ಅಪರಿಚಿತ ವ್ಯಕ್ತಿ ಶವ ಪತ್ತೆ

ಚಿಕ್ಕಮಗಳೂರು: ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಾಣಿಮಕ್ಕಿ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ...

ಬಿಜೆಪಿ ಮುಖಂಡನಿಂದ ಯುವಕನ ಮೇಲೆ ರಾಡ್‌ನಿಂದ ಹಲ್ಲೆ

ಅಜ್ಜಂಪುರ : ಬೈಕ್ ವೇಗವಾಗಿ ಚಲಾಯಿಸಿದ್ದಾನೆ ಎಂಬ ಕಾರಣಕ್ಕೆ ಯುವಕನ ಮೇಲೆ ರಾಡ್‌ನಿಂದ ಹಲ್ಲೆ ನಡೆಸಿ...