Home Latest News ಅನ್ನದಾತನ ಕಣ್ಣಲ್ಲಿ ನೀರು ತರಿಸುತ್ತಿರುವ ಈರುಳ್ಳಿ
Latest News

ಅನ್ನದಾತನ ಕಣ್ಣಲ್ಲಿ ನೀರು ತರಿಸುತ್ತಿರುವ ಈರುಳ್ಳಿ

Share
ಈರುಳ್ಳಿ onion lost from rain chikkamagaluru
Share

ಚಿಕ್ಕಮಗಳೂರು: ರಾಜ್ಯದಲ್ಲಿ ಹಾಗೂ ಜಿಲ್ಲೆಯಲ್ಲಿ ಈರುಳ್ಳಿ ಬೆಳೆಗೆ ಈ ಬಾರಿ ಬಂಪರ್ ಬೆಲೆ ಬಂದಿದೆ, ಇದರಿಂದಾಗಿ ರೈತರ ಕಣ್ಣಲ್ಲಿ ಪನ್ನೀರು ಬರಬೇಕಿತ್ತು ಆದರೆ ಬರುತ್ತಿರುವುದು ಕಣ್ಣೀರು.

ಈರುಳ್ಳಿ ಬೆಳೆಗೆ ಹವಮಾನ ಬಹಳ ಮುಖ್ಯ ಮತ್ತು ಶ್ರಮ ಕೂಡ ಅಷ್ಟೇ ಮುಖ್ಯ. ರೈತರು ಇದಕ್ಕಾಗಿ ತುಂಬಾ ಶ್ರಮ ಹಾಕುತ್ತಾರೆ ಆದರೆ ಪ್ರಕೃತಿ ಕೈ ಕೊಟ್ಟರೆ ಶ್ರಮವೆಲ್ಲಾ ಹೊಳೆಯಲ್ಲಿ ಹುಣಸೇಹಣ್ಣು ಕದರಿದಂತೆ ಆಗುತ್ತದೆ. ಇದೇ ಪರಿಸ್ಥಿತಿ ಜಿಲ್ಲೆಯ ರೈತರಿಗೆ ಒದಗಿದೆ.

ಇದನ್ನು ಓದಿ: ಭಾರಿ ಮಳೆ: ಚಿಕ್ಕಮಗಳೂರಿನಲ್ಲಿ ಸೇತುವೆಗಳು ಜಲಾವೃತ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಂಪರ್ ಕ್ರಾಪ್ ಆಗಿ ರೈತರ ಕೈಗೆ ಸಿಗಬೇಕಿದ್ದ ಈರುಳ್ಳಿ ಇದೀಗ ಹವಮಾನ ವೈಪರೀತ್ಯಗಳಿಂದಾಗಿ ಕೈಗೆ ಬಂದಿದ್ದು ಬಾಯಿಗೆ ಬರಲಿಲ್ಲ ಎಂದು ಬೆಳೆಗಾರರು ಕೊರಗುತ್ತಿದ್ದಾರೆ. ಒಳ್ಳೆಯ ಬೆಲೆಯಿದೆ ಅದರೆ ಅಕಾಲಿಕ ಮಳೆಯಿಂದಾಗಿ ಬೆಳೆಗಾರರಿಗೆ ಭಾರೀ ನಷ್ಟವಾಗಿದೆ. ಅಕಾಲಿಕ ಮಳೆಯಿಂದಾಗಿ ನೂರಕ್ಕೆ ಮೂವತ್ತರಿಂದ ನಲವತ್ತುರಷ್ಟು ಪ್ರತಿಶಃತ ಬೆಳೆ ಸಿಕ್ಕಿದ್ದು ಅರವತ್ತರಷ್ಟು ನಷ್ಟವಾಗಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಜ್ಜಂಪುರ ತಾಲ್ಲೂಕಿನ ಶಿವನಿ ಹೋಬಳಿಯ ಕೆಲ ಭಾಗದಲ್ಲಿ ಅಜ್ಜಂಪುರ ಹೋಬಳಿಯ ಕೆಲ ಭಾಗದಲ್ಲಿ ಅಂದರೆ ಸರಿಸುಮಾರಾಗಿ ಹದಿನೈದು ಸಾವಿರ ಹೆಕ್ಟೇರನಿಂದ ಇಪ್ಪತ್ತು ಸಾವಿರ ಹೆಕ್ಟೇರ್ ನಷ್ಟು ಮತ್ತು ಕಡೂರು ತಾಲ್ಲೂಕಿನ ಹಿರೇನಲ್ಲೂರು ಹೋಬಳಿಯ ಕೆಲ ಭಾಗ ಮತ್ತು ಚೌಳಹಿರಿಯೂರು ಭಾಗದ ಕೆಲವು ಕಡೆ ಈರುಳ್ಳಿ ಬೆಳೆಯಲಾಗುತ್ತದೆ ಆದರೆ ಅಕಾಲಿಕ ಮಳೆಯಿಂದಾಗಿ ರೈತರು ಕಂಡ ಕನಸಿಗೆ ಬೆಂಕಿ ಇಟ್ಟಂಗಾಗಿದೆ. ಬೆಲೆ ಇದೆ ಆದರೆ ಬೆಳೆ ಇಲ್ಲ ಎಂದು ರೈತರು ಕೊರಗುತ್ತಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...