Home Latest News ನಗರಸಭೆ ವಿಶೇಷ ಸಾಮಾನ್ಯ ಸಭೆಯಲ್ಲಿ ವಿರೋಧ ಪಕ್ಷದ ಆಕ್ರೋಶ
Latest NewschikamagalurHomenamma chikmagalur

ನಗರಸಭೆ ವಿಶೇಷ ಸಾಮಾನ್ಯ ಸಭೆಯಲ್ಲಿ ವಿರೋಧ ಪಕ್ಷದ ಆಕ್ರೋಶ

Share
Share

ಚಿಕ್ಕಮಗಳೂರು: ನಿಯಮ ಉಲ್ಲಂಘಿಸಿ ಸರ್ವಸದಸ್ಯರ ಸಾಮಾನ್ಯ ಸಭೆಯನ್ನು ಕರೆದಿರುವ ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್‌ರವ ರಿಗೆ ನಗರಸಭೆಯ ಆಡಳಿತ ನಡೆಸುವ ಸಾಮಾರ್ಥ್ಯವಿಲ್ಲ .ಅವರಿಗೆ ನಿಯಮಗಳ ಪರಿಜ್ಞಾನವಿಲ್ಲಾ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಇಂದು ನಡೆದ ನಗರಸಭೆ ವಿಶೇಷ ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ಸದಸ್ಯರು ಒತ್ತಾಯಿಸಿದರು.

ನಗರಸಬೆ ಮಾಜಿ ಮಾಜಿ ಅಧ್ಯಕ್ಷ ವರಸಿದ್ದಿವೇಣು ಗೋಪಾಲ್ ಮಾತನಾಡಿ ನಿಯಮಾನುಸಾರ ಯಾವುದೇ ಸಾಮಾನ್ಯ ಸಭೆ ಕರೆಯುವುದಿದ್ದರೂ ಎಂಟು ದಿನಗಳ ಮುಂಚಿತವಾಗಿ ಸದಸ್ಯರಿಗೆ ಮಾಹಿತಿ ನೀಡಬೇಕು. ವಿಶೇಷ ಸಭೆ. ತುರ್ತು ಸಭೆಗಳಿಗೆ ಕನಿಷ್ಠ ಮೂರು ದಿನದ ಮೊದಲು ಮಾಹಿತಿ ನೀಡಬೇಕು. ನಗರಸಭೆಯ ನಿಯಮಗಳ ಬಗ್ಗೆ ಅಧ್ಯಕ್ಷರಿಗೆ ಮಾಹಿತಿಯಿಲ್ಲಾ. ನಿಯಮ ಉಲ್ಲಂಘಿಸಿ ಕಾನೂನು ಬಾಹಿರವಾಗಿ ನಡೆಸುತ್ತಿರುವ ಈ ಸಭೆಗೆ ನಾವು ಭಾಗವಹಿಸಬೇಕೆ, ಅಭಿವೃದ್ಧಿಯ ಪ್ರಸ್ತಾವನೆಗಳಿಗೆ ನಾವು ಸಮಿತಿ ಸೂಚಿಸಬೇಕೆ ಎಂದು ಆಕ್ರೋಶ ವ್ಯಕ್ತಪಡಿಸಿದರು,

ಮುಂದಿನ ದಿನಗಳಲ್ಲಿ ಯಾವುದೇ ಸಭೆ ಕರೆಯದಿದ್ದರೂ ಕರೆಯುವುದಿದ್ದರೂ ಕನಿಷ್ಠ ೮ ದಿನಗಳ ಮೊದಲು, ತುರ್ತು ಸಭೆಗೆ ಕನಿಷ್ಠ ಮೂರು ದಿನಗಳ ಮೊದಲು ಸಭೆ ಕರೆಯುವಂತೆ ನಿರ್ಣಯ ಕೈಗೊಳ್ಳಲು ಸದಸ್ಯ ಲಕ್ಷ್ಮಣ್ ಆಗ್ರಹಿಸಿದ ಹಿನ್ನೆಲೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಕಳೆದ ಮೂರು ಸಭೆಗಳಿಂದ ಆಡಳಿತ ಪಕ್ಷದ ಸದಸ್ಯರು ನಿರಂತರವಾಗಿ ಗೈರಾಗುತ್ತಿದ್ದು ಅವರದೇ ಪಕ್ಷದ ಅಧ್ಯಕ್ಷರ ಬಗ್ಗೆ ಅಸಮಾಧಾನವಿದೆಯೇ ಎಂದು ಪ್ರಶ್ನಿಸುವ ಮೂಲಕ ಕಾಂಗ್ರ್ರೆಸ್‌ನ ಸದಸ್ಯ ಮುನೀರ್ ಮೂದಲಿಸಿದರು.

ಅಧ್ಯಕ್ಷೇ ಸುಜಾತಾ ಶಿವಕುಮಾರ್ ರವರನ್ನು ಈ ಎಲ್ಲಾ ಕಾರಣಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ನ ಸದಸ್ಯರು ತೀವ್ರ ತರಾಟೆಗೆ ತೆಗೆದುಕೊಂಡು ಒಳಪಡಿಸಿದರೂ ತೀವ್ರ ಮುಜುಗರಕ್ಕೆ ಒಳಪಡಿಸಿದರೂ ಸಹ ಬಿಜೆಪಿಯ ಒಬ್ಬನೇ ಒಬ್ಬ ಸದಸ್ಯರು ಸಹ ಅಧ್ಯಕ್ಷರ ಪರವಾಗಿ ಸಮರ್ಥನೆ ಮಾಡಿಕೊಳ್ಳದಿರುವ ಬಗ್ಗೆ ಕಾಂಗ್ರೆಸ್ ನ ಸದಸ್ಯರು ಕುಹಕದ ನಗೆ ಬೀರುತ್ತಿದ್ದದ್ದು ಈ ಸಭೆಯ ವಿಶೇಷ.

ಸಭೆ ಆರಂಭಗೊಳ್ಳುತ್ತಿದ್ದಂತೆ ಬಿಜೆಪಿ ಸದಸ್ಯರ ಅನುಪಸ್ಥತಿಯನ್ನು ಯನ್ನು ದಂಟರಮಕ್ಕಿ ವಾರ್ಡಿನ ಮಂಜುಳಾ ಶ್ರೀನಿವಾಸ್ ಮತ್ತು ಮಾಜಿ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಸಭೆಯನ್ನುಮ ಬಹಿಷ್ಕರಿಸಿ ಹೊರ ನಡೆದು ಆಕ್ರೋಶ ವ್ಯಕ್ತಪಡಿಸಿದ ಘಟನೆಯು ನಡೆಯಿತು. ಸಭೆಯಿಂದ ಹೊರ ನಡೆದು ಉಪಾಧ್ಯಕ್ಷರ ಕೊಠಡಿಯಲ್ಲಿದ್ದಇಬ್ಬರು ಸದಸ್ಯರನ್ನು ಕಾಂಗ್ರೆಸ್ ಪಕ್ಷದ ಸದಸ್ಯರು ಮನವೊಲಿಸಿ ಸಭೆಗೆ ಕರೆದುಕೊಂಡು ಬರುವ ಮೂಲಕ ಸಭೆಗೆ ಅಗತ್ಯವಿದ್ದ ಸಂಖ್ಯಾಬಲವನ್ನು ಕ್ರೂಢೀಕರಿಸಿದರು.

ಕಾಂಗ್ರೆಸ್ ಪಕ್ಷದ ಪಕ್ಷದ ೧೧ ಮಂದಿ ಸದಸ್ಯರು ಬಿಜೆಪಿಯ ಆರು ಮಂದಿ, ಜೆಡಿಎಸ್ ಗೋಪಿ ಸೇರಿದಂತೆ ಒಟ್ಟು ೧೭ಮಂದಿ ಸದಸ್ಯರ ಉಪಸ್ಥಿತಿಯಲ್ಲಿ ಸಭೆ ಆರಂಭವಾಯಿತು. ಸಭೆ ಆರಂಭವಾಗುತ್ತಿದ್ದಂತೆ ಸದಸ್ಯ ಮುನೀರ್ ಮಾತನಾಡಿ ನಗರಸಭೆಯ ಎಸ್ ಎಫ್ ಸಿ , ನಗರೋತ್ಥಾನ ಸೇರಿದಂತೆ ಲಕ್ಷಾಂತರ ರೂಪಾಯಿಗಳ ಅನುದಾನಗಳ ಪಡೆದಿರುವ ಬಿಜೆಪಿ ಸದಸ್ಯರು ಗೈರಾಗುವ ಮೂಲಕ ಅಧ್ಯಕ್ಷರನ್ನು ಅವಮಾನಿಸಿದ್ದಾರೆ. ನಮಗೆ ಯಾವುದೇ ಅನುದಾನ ನೀಡದೆ ಇದ್ದರೂ ಸಹ ನಗರದ ಅಭಿವೃದ್ದಿ ದೃಷ್ಟಿಯಿಂದ ಕಾಂಗ್ರೆಸ್ ಸದಸ್ಯರು ನಾವು ಸಭೆಗೆ ಹಾಜರಾಗಿದ್ದೇವೆ. ಈ ತಾರತಮ್ಯ ಧೋರಣೆಯ ನಡುವೆಯೂ ಅಭಿವೃದ್ಧಿ ಕಾಮಗಾರಿಗಳಿಗೆ ನಾವು ಸಮ್ಮತಿ ಸೂಚಿಸಬೇಕೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಅಧ್ಯೆಕ್ಷೆ ಸುಜಾಶಿವಕುಮಾರ್ ಮಾತನಾಡಿ ಬಿಜೆಪಿಯ ಸದಸ್ಯರು ಮದುವೆ , ಸೇರಿದಂತೆ ಭಾಗವಹಿಸುವುದಾಗಿ ತಮ್ಮ ಗಮನಕ್ಕೆ ತಂದಿದ್ದಾರೆ ಎಂದು ಸಮಜಾಯಿಷಿ ನೀಡಿದರು. ಆಡಳಿತ ಪಕ್ಷದ ಸದಸ್ಯರ ಅನುಪಸ್ಥಿತಿ ಮತ್ತುವಿರೋಧ ಪಕ್ಷಗಳ ಆಕ್ಷೇಪದ ನಡುವೆ ನಗರದ ವಿವಿಧ ವಾರ್ಡ್‌ಗಳ ವಿವಿಧ ಅನುದಾನಗಳ ಅಡಿಯ ಅಭಿವೃದ್ಧಿ ಕಾಮಗಾರಿಗಳು ಇಂದು ನಡೆದ ನಗರಸಭೆ ಸರ್ವ ಸದಸ್ಯರ ವಿಶೇಷ ಸಾಮಾನ್ಯ ಸಭೆಯಲ್ಲಿ ಅನುಮೋದನೆ ಪಡೆದುಕೊಂಡವು.

ನಗರೋತ್ಥಾನ ಕಾಮಗಾರಿ ಆರಂಭಗೊಂಡು ೩ ವರ್ಷಗಳು ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಗುತ್ತಿಗೆದಾರರು ಕಾಮಗಾರಿ ಪೂರ್ಣಗೊಳಿಸುವವರೆಗೂ ಅವರಿಗೆ ಬಿಲ್ ಪಾವತಿಸಬಾರದು ಅಥವಾ ಗುತ್ತಿಗೆದಾರರನ್ನುಕಪ್ಪು ಪಟ್ಟಿಗೆ ಸೇರಿಸಬೇಕೆಂದು ಸದಸ್ಯ ಲಕ್ಷ್ಮಣ್ ಒತ್ತಾಯಿಸಿದರು. ಈ ಸಭೆಯಲ್ಲಿ ನಗರಸಭೆ ಉಪಾಧ್ಯಕ್ಷೆ ಅನು ಮಧುಕರ್, ಪ್ರಭಾರ ಪೌರಾಯುಕ್ತ , ಇಂಜಿಯರ್ ಲೋಕೇಶ್ ಇದ್ದರು.

Opposition party outrage at special general meeting of the Municipal Council

Share

Leave a comment

Leave a Reply

Your email address will not be published. Required fields are marked *

Don't Miss

ಡಾ. ಬಿ.ಆರ್ ಅಂಬೇಡ್ಕರ್ ವಸತಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ

ಚಿಕ್ಕಮಗಳೂರು: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕಡಿಮೆಯಾಗುತ್ತಿರುವುದಕ್ಕೆ ಸರ್ಕಾರದ ವಿವಿಧ ವಸತಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುತ್ತಿರುವುದು ಪ್ರಮುಖ ಕಾರಣವಾಗಿದೆ ಎಂದು ಶಾಸಕಿ ನಯನ ಮೋಟಮ್ಮ ತಿಳಿಸಿದರು. ಅವರು ಇಂದು ಮಳಲೂರು,...

ಆಂಟಿ ಪ್ರೀತ್ಸಿ ಬೆಚ್ಚಿ ಬಿದ್ದ ಯುವಕ !

ಚಿಕ್ಕಮಗಳೂರು: ಸೋಷಿಯಲ್‌ ಮಿಡಿಯಾದಲ್ಲಿ ಪರಿಚಯವಾದ ಹುಡುಗ ,ಹುಡುಗಿಯರು ಪ್ರೀತಿಸಿ ಮೋಸ ಹೋಗುವ ಹಲವು ಘಟನೆಗಳಿವೆ. ಪಾಕಿಸ್ತಾನದ ಗೃಹಿಣಿ ಭಾರತದ ಯುವಕ,ಬಾಂಗ್ಲಾದೇಶ ಹುಡುಗ ಭಾರತದ ಯುವತಿ ಪ್ರೀತಿಯ ಜಾಲದಲ್ಲಿ ಮುಳುಗಿದ ಸುದ್ದಿಗಳನ್ನು ಕೇಳಿತ್ತಿರುವಾಗಲೇ...

Related Articles

ರಸ್ತೆ ಅಪಘಾತದಲ್ಲಿ ದಾವಣಗೆರೆಯ ಉದ್ಯಮಿ ಸಾವು

ಕಡೂರು: ತಾಲ್ಲೂಕಿನ ಕನಕರಾಯನಗುಡ್ಡದ ಬಳಿ ಕಾರು ಮತ್ತು ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರು ಚಾಲಕ...

ಬೀದಿ ನಾಯಿಗಳ ಹಾವಳಿ: 11 ಜನರಿಗೆ ಗಾಯ

ಚಿಕ್ಕಮಗಳೂರು: ನಗರದ ಹೌಸಿಂಗ್ ಬೋರ್ಡ್, ಜಿಲ್ಲಾ ಪಂಚಾಯಿತಿ‌ ಕಚೇರಿ ಸುತ್ತಮುತ್ತ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು,...

ಧರ್ಮಸ್ಥಳ ಪ್ರಕರಣಗಳ ತನಿಖೆ ಎಸ್‌ಐಟಿ ನಿಷ್ಪಕ್ಷಪಾತ ತನಿಖೆಗೆ ಆಗ್ರಹ

ಚಿಕ್ಕಮಗಳೂರು: ಧರ್ಮಸ್ಥಳ ಪೊಲೀಸ್‌ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ತನಿಖೆಯನ್ನು ಎಸ್‌ಐಟಿ ನಿಷ್ಪಕ್ಷಪಾತವಾಗಿ ನಡೆಸಿ...

ಜನಸಾಮಾನ್ಯರ ಏಳಿಗೆಗೆ ಜೀವನ ಮೀಸಲಿಟ್ಟವರು ಹೆಚ್.ಟಿ.ರಾಜೇಂದ್ರ

ಚಿಕ್ಕಮಗಳೂರು: :- ಸಮಾಜದಲ್ಲಿನ ಶೋಷಿತರು, ರೈತರು, ದಲಿತರ ಮೂಲಹಕ್ಕಿಗಾಗಿ ವೈ ಯಕ್ತಿಕ ಜೀವನವನ್ನು ಜನಸಾಮಾನ್ಯರ ಏಳಿಗೆಗೆ...