Home namma chikmagalur ಅರಣ್ಯ ಭೂಮಿ ಮಂಜೂರು ಪತ್ತೆ ಮಾಡಲು ಎಸ್‌ಐಟಿ ರಚನೆ ವಿರೋಧ
namma chikmagalurchikamagalurHomeLatest News

ಅರಣ್ಯ ಭೂಮಿ ಮಂಜೂರು ಪತ್ತೆ ಮಾಡಲು ಎಸ್‌ಐಟಿ ರಚನೆ ವಿರೋಧ

Share
Share

ಚಿಕ್ಕಮಗಳೂರು: ಅರಣ್ಯ ಭೂಮಿ ಮಂಜೂರು ಪತ್ತೆಗೆ ಕೇಂದ್ರ ಸರ್ಕಾರ ಎಸ್‌ಐಟಿ ರಚನೆ ಮಾಡಿದ್ದು, ಇದರಿಂದ ಜಿಲ್ಲೆಯ ಸಾವಿರಾರು ಸಣ್ಣ ರೈತರು ಭೂಮಿಯ ಹಕ್ಕು ಕಳೆದುಕೊಳ್ಳಲಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಚ್.ಎಚ್.ದೇವರಾಜ್ ಹೇಳಿದರು.

‘1980ರ ನಂತರ ಮಂಜೂರಾದ ಅರಣ್ಯ ಭೂಮಿ ಗುರುತಿಸಲು ಎಸ್‌ಐಟಿ ಮುಂದಾಗಿದೆ. ಇದರಿಂದ ಮಲೆನಾಡಿನ ರೈತರು ತೊಂದರೆಗೆ ಸಿಲುಕಲಿದ್ದಾರೆ. ಈ ಸಮಸ್ಯೆ ಪರಿಹಾರಕ್ಕೆ ಮಲೆನಾಡು ಭಾಗದ ಜನಪ್ರತಿನಿಧಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.

ಜಿಲ್ಲೆಯಲ್ಲಿ ಈ ಹಿಂದೆ ಸಾವಿರಾರು ಎಕರೆ ಕಂದಾಯ ಭೂಮಿಯನ್ನು ಅರಣ್ಯ ಇಲಾಖೆಗೆ ನೀಡಿದೆ. ಇಂತಹ ಭೂಮಿ ಯನ್ನು ಡೀಮ್ಡ್ (ಪರಿಭಾವಿತ) ಅರಣ್ಯ ಎಂದು ಘೋಷಿಸಲಾಗಿದೆ. ಪರಿಭಾವಿತ ಅರಣ್ಯದಲ್ಲಿ ಸಾವಿರಾರು ರೈತರ ಭೂಮಿ ಇದೆ. ಇವರೆಲ್ಲರೂ ಸಣ್ಣ ಮತ್ತು ಅತಿ ಸಣ್ಣ ರೈತರು. ಶಾಸಕರ ಅಧ್ಯಕ್ಷತೆಯ ಭೂಸಕ್ರಮೀಕರಣ ಸಮಿತಿಗಳು ಕಾನೂನು ಬದ್ಧವಾಗಿ ಈ ರೈತರಿಗೆ ಭೂಮಿ ಮಂಜೂರು ಮಾಡಿವೆ. ಸಾಗುವಳಿ ಚೀಟಿಯನ್ನೂ ಪಡೆದುಕೊಂಡಿದ್ದಾರೆ. ಇಂತಹ ಭೂಮಿ ಯನ್ನು ಅರಣ್ಯ ಎಂದು ಗುರುತಿಸಿ ಸಾಗುವಳಿ ಚೀಟಿ ರದ್ದು ಮಾಡಿದರೆ ರೈತರು ಭೂಮಿ ಕಳೆದು ಕೊಳ್ಳ ಲಿದ್ದಾರೆ’ ಎಂದು ಹೇಳಿದರು.

ಕೇಂದ್ರ ಸರ್ಕಾರ ಅರಣ್ಯ ಭೂಮಿಗಳ ಮಂಜೂರಾತಿಯನ್ನು ರದ್ದು ಮಾಡಲು ಎಸ್‌ಐಟಿ ರಚನೆಗೆ ಆದೇಶಿಸಿದೆ. ಇದು ರೈತ ವಿರೋಧಿ ನೀತಿಯಾಗಿದೆ. ಮಂಜೂರಾತಿ ರದ್ದು ಮಾಡಿದರೆ ರೈತರಿಗೆ ಅನ್ಯಾಯವಾಗಲಿದೆ ಎಂದರು.

ಎಸ್‌ಐಟಿ ಹೆಸರಿನಲ್ಲಿ ಸಣ್ಣ ರೈತರ ಮೇಲೆ ಗದಾ ಪ್ರಹಾರ ನಡೆಸುವುದನ್ನು ಸಹಿಸಲು ಸಾಧ್ಯವಿಲ್ಲ. ಸಮಸ್ಯೆ ಪರಿಹಾರ ಸಂಬಂಧ ಚಿಕ್ಕಮಗಳೂರು, ಕೊಡಗು, ಹಾಸನ ಸೇರಿ ಮಲೆನಾಡು ಭಾಗದ ಜನಪ್ರತಿನಿಧಿಗಳು ಕೂಡಲೇ ಸಭೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸಮಸ್ಯೆ ಮನವರಿಕೆ ಮಾಡಬೇಕು ಎಂದು ಆಗ್ರಹಿಸಿದರು.

ಕಂದಾಯ ಇಲಾಖೆ, ಅರಣ್ಯ ಇಲಾಖೆ ಜಂಟಿ ಸರ್ವೆ ಪೂರ್ಣಗೊಳಿಸಿ ಅರಣ್ಯ ಇಲಾಖೆಗೆ ವರ್ಗಾಯಿಸಿರುವ ಕಂದಾಯ ಭೂಮಿಯನ್ನು ಹಿಂಪಡೆಯ ಬೇಕು. ಆ ಭೂಮಿಯನ್ನು ಎಲ್ಲಾ ವರ್ಗದ ಭೂರಹಿತರಿಗೆ ಹಂಚಿಕೆ ಮಾಡಬೇಕು.ಸರ್ಕಾರಿ ಉದ್ದೇಶ ಗಳಿಗೆ ಮೀಸಲಿಡಬೇಕು ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಅತೀಕ್‌ ಕೈಸರ್, ಪುಟ್ಟೇಗೌಡ, ಹಿರೇಮಗ ಳೂರು ರಾಮಚಂದ್ರ, ಲೋಕೇಶ್, ಸಂತೋಷ್ ಉಪಸ್ಥಿತರಿದ್ದರು.

Opposition to formation of SIT to investigate forest land allocation

Share

Leave a comment

Leave a Reply

Your email address will not be published. Required fields are marked *

Don't Miss

ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯ

ಚಿಕ್ಕಮಗಳೂರು : ಇತಿಹಾಸ ಪ್ರಸಿದ್ಧ ಅಂತರಘಟ್ಟೆ ಜಾತ್ರಾ ಮಹೋತ್ಸವದಲ್ಲಿ ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯವಾಗಿದೆ. ರೇಸಿಗೆ ಬಿದ್ದ ಎತ್ತಿನಗಾಡಿಗಳ ಪೈಪೋಟಿ ಮಧ್ಯೆ ಎತ್ತಿನ ಗಾಡಿ ತೇರಿಗೆ ಡಿಕ್ಕಿಯೊಡೆದಿದೆ....

ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರ ಅಮಾನತು

ಚಿಕ್ಕಮಗಳೂರು: ಆಸ್ತಿ ಗುರುತಿನ ಸ್ವತ್ತಿನ ಚಕ್ಕುಬಂಧಿಯನ್ನು ಅಕ್ರಮವಾಗಿ ತಿದ್ದುಪಡಿ ಮಾಡಿರುವ ಹಿನ್ನೆಲೆಯಲ್ಲಿ ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಸೇವೆಯಿಂದ ಅಮಾನತ್ತುಗೊಳಿಸಿ ಬುಧವಾರ ಆದೇಶಿಸಿದ್ದಾರೆ. ಪಟ್ಟಣದ...

Related Articles

ಜಿಲ್ಲೆಯಲ್ಲಿ ಮಲೆನಾಡು ಡ್ರೈವಿಂಗ್ ಸ್ಕೂಲ್ ಅಸೋಸಿಯೇಷನ್ ಸ್ಥಾಪನೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಲೆನಾಡು ಡ್ರೈವಿಂಗ್ ಸ್ಕೂಲ್ ಅಸೋಸಿಯೇಶನ್ ಸ್ಥಾಪಿಸಿದ್ದು, ಮುಂದಿನ ದಿನಗಳಲ್ಲಿ ರಸ್ತೆ ಸುರಕ್ಷತೆ ಬಗ್ಗೆ...

ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ

ಚಿಕ್ಕಮಗಳೂರು: ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ ಸಾಧನೆ ಮಾಡಿರುವ ಶಾಸಕರು ಉಳಿದಿರುವ...

ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ವಾಹನ ವಶ

ಚಿಕ್ಕಮಗಳೂರು : ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಕೆಎಂ ರಸ್ತೆಯ...

ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನದದು ಕಳವು

ಚಿಕ್ಕಮಗಳೂರು : ತಾಲೂಕಿನ ಕಂಚೇನಹಳ್ಳಿಯಲ್ಲಿ ಹಾಡಹಗಲೇ ಕಳ್ಳತನ ನಡೆದಿದ್ದು ರೈತ ಉಮೇಶ್ ಎಂಬುವವರ ಮನೆಯಿಂದ ಲಕ್ಷಾಂತರ...