Home namma chikmagalur ಭಾರಿ ಮಳೆ ಕರಾವಳಿ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್
namma chikmagalurchikamagalurHomeLatest News

ಭಾರಿ ಮಳೆ ಕರಾವಳಿ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್

Share
Share

ಬೆಂಗಳೂರು: ದೇಶದ ಹಲವು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟದಿಂದ ಭೂಕುಸಿತ, ಪ್ರವಾಹ ಸೃಷ್ಟಿಯಾಗಿದೆ. ಹಲವು ಸಾವು ಸಂಭವಿಸಿದ್ದು, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಇತ್ತ ಕರ್ನಾಟಕದಲ್ಲೂ ಭಾರಿ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳು, ಮಲೆನಾಡು ಹಾಗೂ ಕೊಡಗು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ.

ಮಳೆ ಬೆನ್ನಲ್ಲೇ ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ನೀಡಿದ್ದರೆ,ಬೆಂಗಲೂರು ಸೇರಿದಂತೆ ರಾಜ್ಯದ ಇತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಭಾರಿ ಮಳೆ ಪರಿಣಾಮ ರಾಜ್ಯದ 5 ಜಿಲ್ಲೆಗಳ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ.

ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಹೀಗಾಗಿ ರಾಜ್ಯದ 5 ಜಿಲ್ಲೆಯ ಶಾಲಾ ಕಾಲೇಜಿಗೆ ಇಂದು (ಆಗಸ್ಟ್ 28) ರಜೆ ಘೋಷಿಸಲಾಗಿದೆ.

ಈ ಪೈಕಿ ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಕೆಲ ತಾಲೂಕಿನ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಇನ್ನುಳಿದಂತೆ ಉಡುಪಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.

ಯಾದಗಿರಿ ಜಿಲ್ಲೆಯ ಶಾಲಾ ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ಯಾದಿಗಿರಿ ಜಿಲ್ಲಾಧಿಕಾರಿ ಹರ್ಷಲ್ ಬೋಯರ್ ಆದೇಶ ಮಾಡಿದ್ದಾರೆ. ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಹೋಗಲು ಆಗದಂತ ಸ್ಥಿತಿ ನಿರ್ಮಾಣವಾಗಿದೆ. ಜೊತೆಗೆ ವಿದ್ಯಾರ್ಥಿಗಳ‌ ಆರೋಗ್ಯದ ಹಿದೃಷ್ಟಿಯಿಂದ ರಜೆ ಘೋಷಣೆ ಮಾಡಲಾಗಿದೆ.

ಭಾರಿ ಮಳೆಯಾಗುತ್ತಿರುವ ಕಾರಣ ಬೀದರ್ ಜಿಲ್ಲೆಯ ಔರಾದ್ ಶಾಲಾ ಕಾಲೇಜಿಗೆ ಇಂದು ರಜೆ ಘೋಷಿಸಲಾಗಿದೆ. ತಹಸೀಲ್ದಾರ ಮಹೇಶ ಪಾಟೀಲ್ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಭಾರಿ ಮಳೆಗೆ ಮುನ್ನಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ.

Orange alert for coastal districts due to heavy rain

 

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಪುಸ್ತಕ ಸಂಸ್ಕೃತಿ-ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ

ಚಿಕ್ಕಮಗಳೂರು: ಪುಸ್ತಕ ಸಂಸ್ಕೃತಿ ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ ಎಂದು ನ್ಯೂಸ್ ಕಿಂಗ್ ಆನ್ಲೈನ್ ಪತ್ರಿಕೆಯ ಸಂಪಾದಕ...

ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ ಕಾರು

ಕಳಸ: ಸೇತುವೆಗೆ ತಡೆಗೋಡೆ ಇಲ್ಲದ ಪರಿಣಾಮ ಪ್ರವಾಸಿಗರ ಕಾರೊಂದು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ...

ಸ್ವಾತಂತ್ರ್ಯೋತ್ಸವದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ 

ಚಿಕ್ಕಮಗಳೂರು: ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮುಗಿದ ಬೆನ್ನಲ್ಲೇ ದಲಿತ...

‘ದೇಶ ಮೊದಲು’ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಿ

ಚಿಕ್ಕಮಗಳೂರು:  ಸ್ವಾತಂತ್ರ್ಯದ ೮೦ನೇ ವರ್ಷದ ಸಂಭ್ರಮ ಕೇವಲ ಹಬ್ಬದ ಆಚರಣೆಯಾಗದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ,...