Home Latest News ನಮ್ಮ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ : ಫಕ್ರುದ್ದೀನ್ ಶಾಖಾದ್ರಿ ಆರೋಪ
Latest News

ನಮ್ಮ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ : ಫಕ್ರುದ್ದೀನ್ ಶಾಖಾದ್ರಿ ಆರೋಪ

Share
Share

ಚಿಕ್ಕಮಗಳೂರು : ಶ್ರೀಗುರು ಬಾಬಾಬುಡನ್ ದತ್ತಾತ್ರೇಯ ಸ್ವಾಮಿ ದರ್ಗಾದಲ್ಲಿ ಶಾಖಾದ್ರಿ ವಂಶಸ್ಥರು ಫಾತೇಹ ಆಚರಣೆಯನ್ನು ಪ್ರತಿವರ್ಷ ಆಚರಿಸಿಕೊಂಡು ಬರುತ್ತಿದ್ದು ನ್ಯಾಯಾಲಯದ ಆದೇಶ ಉಲ್ಲಂಘನೆಯಾಗಿಲ್ಲ. ಆದರೆ, ಮುಜರಾಯಿ ಇಲಾಖೆ ನೂತನ ಕಾರ್ಯನಿರ್ವಹಣಾಧಿಕಾರಿ ದರ್ಗಾದಲ್ಲಿ ಫಾತೇಹ ಆಚರಣೆಗೆ ಅವಕಾಶ ನೀಡದೆ ಸಮುದಾಯದ ಭಾವನೆಗೆ ನೋವುಂಟು ಮಾಡಿದ್ದಾರೆ. ಧಾರ್ಮಿಕ ಹಕ್ಕಿನ ನಿರಾಕರಣೆಯಾಗಿದ್ದು ಮುಜರಾಯಿ ಇಲಾಖೆ ಕಾರ್ಯ ನಿರ್ವಹಣಾ ಅಧಿಕಾರಿಯನ್ನ ಬೇರೆಡೆ ವರ್ಗಾವಣೆ ಮಾಡಬೇಕು ಹಾಗೂ ವ್ಯವಸ್ಥಾಪನಾ ಸಮಿತಿಯನ್ನು ಬರಖಾಸ್ತುಗೊಳಿಸಿ ಜಾತ್ಯತೀತ ಸಮಿತಿ ನೇಮಿಸ ಬೇಕೆಂದು ಸೈಯದ್ ಬುಡೇನ್ ಶಾಖಾದ್ರಿ ವಂಶಸ್ಥ ಸೈಯದ್ ಫಕ್ರುದ್ದೀನ್ ಶಾಖಾದ್ರಿ ಸರ್ಕಾರವನ್ನು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ಮೂರು ದಿನಗಳ ಹಿಂದೆ ಇನಾಂ ದತ್ತಾತ್ರೇಯ ಪೀಠ ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಬಾಬಾ ಬುಡನ್ ದರ್ಗಾದಲ್ಲಿ ಸೈಯದ್ ಬುಡೆನ್ ಶಾ ಖಾದ್ರಿ ವಂಶಸ್ಥರಿಂದ ಪ್ರತಿವರ್ಷ ಆಚರಿಸಲ್ಪಡುವ ಫಾತೇಹ ಎಂಬ ಧಾರ್ಮಿಕ ವಿಧಿ ನೆರವೇರಿಸಲು ಸಮುದಾಯದ ಜನರೊಂದಿಗೆ ತೆರಳಿದ್ದು, ಈ ವೇಳೆ ಬಾಬಾಬುಡನ್ ದತ್ತಾತ್ರೇಯ ಸ್ವಾಮಿ ದರ್ಗಾದ ನೂತನ ಕಾರ್ಯ ನಿರ್ವಹಣಾಧಿಕಾರಿ ಫಾತೇಹ ಆಚರಣೆ ಪೊಲೀಸರ ಮೂಲಕ ತಡೆದು ಸಮುದಾಯದವರ ಧಾರ್ಮಿಕ ಆಚರಣೆಗೆ ಅಡ್ಡಿಪಡಿಸಿ ನಮ್ಮ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ ಎಂದರು.

ಹಿಂದೂ ಧಾರ್ಮಿಕ ಪದ್ಧತಿಯಂತೆ ಕಾಯಿ, ಹೂವು, ಹಣ್ಣುಗಳೊಂದಿಗೆ ಮಾತ್ರ ಫಾರೇಹ ಮಾಡಬೇಕು, ರೊಟ್ಟಿ ಬಾಜಿಯನ್ನು ಗುಹೆಯೊಳಗೆ ಕೊಂಡೊಯ್ಯುವಂತಿಲ್ಲ ಎನ್ನುವ ಮೂಲಕ ನಮ್ಮದಲ್ಲದ ಆಚರಣೆ ಮಾಡಲು ಒತ್ರಾಯಿಸಿದ್ದಾರೆ ಎಂದು ದೂರಿದರು. ಮುಜರಾಯಿ ಇಓ ಅವರು ನ್ಯಾಯಾಲಯದ ಆದೇಶಕ್ಕೆ ಅವಮಾನ ಮಾಡಿದ್ದು, ಹಿಂದಿನಿಂದಲೂ ಈ ಆಚರಣೆ ಇದ್ದರೂ ಇದರ ಪರಿಜ್ಞಾನವಿಲ್ಲದವರಂತೆ ಮಾತನಾಡಿದ್ದಾರೆ. ಫಾತೇಹ ಆಚರಣೆಗೆ ನ್ಯಾಯಾಲಯವೂ ಅವಕಾಶ ನೀಡಿದೆ. 1947 ರ ಮೈಸೂರು ಗೆಜೆಟಿಯರ್‌ನಲ್ಲೂ ಈ ಆರಚರಣೆ ಬಗ್ಗೆ ಉಲ್ಲೇಖವಿದೆ. 1991ರ ನ್ಯಾಯಾಲಯದ ಆದೇಶದಲ್ಲಿ ಇದಕ್ಕೆ ಅವಕಾಶವಿದ್ದರೂ ಅವಕಾಶ ನೀಡಿಲ್ಲ ಎಂದರು.

ಕೂಡಲೇ ಈ ಅಧಿಕಾರಿಯನ್ನು ಬೇರೆಡೆಗೆ ವರ್ಗಾವಣೆ ಮಾಡಬೇಕು. ಅಲ್ಲದೇ ವ್ಯವಸ್ಥಾಪನಾ ಸಮಿತಿಯನ್ನು ಬರಖಾಸ್ತುಗೊಳಿಸಿ ಜಾತ್ಯತೀತ ಸಮಿತಿಯನ್ನು ಸರ್ಕಾರ ರಚಿಸಬೇಕು. ಇಲ್ಲದೇ ದರ್ಗಾದಲ್ಲಿನ ನಮ್ಮ ಧಾರ್ಮಿಕ ಆಚರಣೆಗಳ ಮೇಲ್ವಿಚಾರಣೆಗೆ ಶಾಖಾದ್ರಿ ನೇತೃತ್ವದ ಸಮಿತಿ ರಚನೆ ಮಾಡಬೇಕು, ತಪ್ಪಿದಲ್ಲಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

Share

Leave a comment

Leave a Reply

Your email address will not be published. Required fields are marked *

Don't Miss

ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ

ಚಿಕ್ಕಮಗಳೂರು:  ಬಾಲ ಕಾರ್ಮಿಕರನ್ನು ಯಾವುದೇ ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪ ರಾಧವಾಗಿದ್ದು, ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವ ಮಾಲೀಕರಿಗೆ ೬ ತಿಂಗಳಿಗಿಂತ ಕಡಿಮೆಯಿಲ್ಲದಂತೆ ೨ ವರ್ಷ ಜೈಲು ಶಿಕ್ಷೆ ಹಾ ಗೂ...

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಂಸದರ ಅಸಮಾಧಾನ

ಚಿಕ್ಕಮಗಳೂರು: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ವಿವಿಧ ಏಜೆನ್ಸಿಗಳ ಆಮೆಗತಿಯ ಕಾರ್ಯವೈಖರಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಬಿಗಿ...

Related Articles

ಜು.5ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಚಿಕ್ಕಮಗಳೂರು: ಮಲೆನಾಡಿನ ಜನತೆಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ತಲುಪಿಸುವ ಉದ್ದೇಶದಿಂದ ಆರ್‌ವಿಆರ್ ಹೆಲ್ತ್‌ಕೇರ್ ವತಿಯಿಂದ ಉಚಿತ...

ಡಿಟಿಡಿಸಿ ಎಕ್ಸ್‌ಪ್ರೆಸ್ ಲಿಮಿಟೆಡ್ ವಿರುದ್ಧ ಆಯೋಗದ ತೀರ್ಪು

ಚಿಕ್ಕಮಗಳೂರು: ಸಕಾಲದಲ್ಲಿ ಆಹಾರ ಪದಾರ್ಥವನ್ನು ತಲುಪಿಸದೆ ಆಹಾರ ಸಾಮಗ್ರಿಗಳು ಹಾಳಾಗಲು ಕಾರಣವಾದ ಡಿಟಿಡಿಸಿ ಎಕ್ಸ್‌ಪ್ರೆಸ್ ಲಿಮಿಟೆಡ್...

ಮುತ್ತೋಡಿ ಅರಣ್ಯದಲ್ಲಿ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಚಿರತೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ದ ಮುತ್ತೋಡಿ ಅರಣ್ಯ ವಲಯದಲ್ಲಿ ಪ್ರವಾಸಿಗರಿಗೆ ಅತ್ಯಂತ ಅಪರೂಪದ ಹಾಗೂ ರೋಮಾಂಚನಕಾರಿ ದೃಶ್ಯವೊಂದು...

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ...