ತರೀಕೆರೆ : ಪಟ್ಟಣದ ಹಿರಿಯ ಪತ್ರಕರ್ತರು, ಜಿಲ್ಲಾ ಕನ್ನಡ ವಾರಪತ್ರಿಕೆ ಅಂಚೆವಾರ್ತೆ ಸಂಪಾದಕರು ಆದ ಅಂಚೆ ನಾಗಭೂಷಣ್ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ತಾಲೂಕು ಶಾಖೆ ವತಿಯಿಂದ ಅವರ ಜೀವಮಾನದ ಸಾಧನೆ ಪರಿಗಣಿಸಿ ‘ಪತ್ರಿಕಾ ರತ್ನ’ ಪ್ರಶಸ್ತಿ ನೀಡಿ, ಗೌರವಿಸಲಾಯಿತು.
ಜಿಲ್ಲೆಯಲ್ಲೇ ಹಿರಿಯ ಪತ್ರಕರ್ತ ಎ.ವಿ. ನಾಗಭೂ?ಣ್ ಅವರು ಚಿಕ್ಕ ಮಗಳೂರು ಜಿಲ್ಲೆಯ ಮತ್ತು ತರೀಕೆರೆ ತಾಲೂಕಿನ ಸಾಮಾಜಿಕ, ರಾಜಕೀಯ, ಆರ್ಥಿಕ, ಶೈಕ್ಷಣಿಕ, ಕ್ರೀಡಾಕ್ಷೇತ್ರ ಹೀಗೆ ಹಲವು ಕ್ಷೇತ್ರಗಳ ಪ್ರತಿಭೆಗಳನ್ನು ಗುರುತಿಸಿ, ಯುವ ಬರಹಗಾರರನ್ನು, ಲೇಖಕರನ್ನು ಬೆನ್ನು ತಟ್ಟೆ ಪ್ರೋತ್ಸಾಹಿಸಿ, ಸುದೀರ್ಘ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಅಂಚೆ ವಾರ್ತೆ ಪತ್ರಿಕೆಯ ಸಂಪಾದಕರಾಗಿ ಸಲ್ಲಿಸುತ್ತಿರುವ ಪತ್ರಿಕಾ ಸೇವೆಯನ್ನು ಗುರುತಿಸಿ ಅವರಿಗೆ ಪತ್ರಿಕಾ ರತ್ನ ಪ್ರಶಸ್ತಿ ನೀಡಲಾಗಿದೆ ಎಂದು ಪಟ್ಟಣದ ಅರಮನ ಹೋಟೆಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ದಿನಾಚರಣೆ ಸಮಾರಂಭದಲ್ಲಿ ಗೌರವಿಸಲಾಯಿತು ಎಂದು ಸಂಘದ ತಾಲ್ಲೂಕು ಅಧ್ಯಕ್ಷ ಸಿದ್ರಾಮಪ್ಪ ತಿಳಿಸಿದರು.
ಪುರಸಭೆ ಅಧ್ಯಕ್ಷ ವಸಂತಕುಮಾರ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾಧ್ಯಕ್ಷ ಅನಿಲ್ ಆನಂದ್, ಸಂಘದ ಪದಾದಿಕಾರಿಗಳು, ಸದಸ್ಯರು ಭಾಗವಹಿಸಿದ್ದರು ಎಂದರು.
‘Patrika Ratna’ award to Anche Nagbhushan
Leave a comment