Home namma chikmagalur ಬಹುಜನರೇ ಭಾರತದ ದೇಶದ ಅತಿದೊಡ್ಡ ಆಸ್ತಿ
namma chikmagalurchikamagalurHomeLatest News

ಬಹುಜನರೇ ಭಾರತದ ದೇಶದ ಅತಿದೊಡ್ಡ ಆಸ್ತಿ

Share
Share

ಚಿಕ್ಕಮಗಳೂರು:  ಬಹುಜನರು ದೇಶದ ಆಸ್ತಿ. ಭಾರತದ ಬಹುಜನರೇ ದೊಡ್ಡ ಸ ಮುದಾಯವಾಗಿದ್ದು ಎಲ್ಲರೂ ಒಗ್ಗೂಡಿಸಿ ದೇಶದ ಆಡಳಿತ ನಡೆಸುವ ರಾಜಕೀಯ ಪ್ರಜ್ಞೆ ಹೆಚ್ಚಿಸಿದವರು ದಾ ದಾ ಸಾಹೇಬ್ ಕಾನ್ಷಿರಾಮ್‌ಎಂದು ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಟಿ.ರಾಧಾಕೃಷ್ಣ ಹೇಳಿದರು.

ನರಗದ ಜಿಲ್ಲಾ ಬಿಎಸ್ಪಿ ಕಚೇರಿಯಲ್ಲಿ ಜಿಲ್ಲಾ ಸಹೋದರತ್ವ ಸಮಿತಿ ಮಾಸಿಕ ಸಭೆ ಹಾಗೂ ದಾದಾ ಸಾ ಹೇಬ್ ಕಾನ್ಷಿರಾಮ್ ಅವರ ಪರಿನಿರ್ವಾಣ ದಿನದ ಅಂಗವಾಗಿ ಶನಿವಾರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿ ಬಹುಜನರಿಗೆ ರಾಜಕೀಯ ಪ್ರಜ್ಷೆ ಹೆಚ್ಚಿಸಿದ ಕಾನ್ಷಿರಾಮ್ ಪಾತ್ರ ಸ್ಮರಣೀಯ. ದೇಶಾಡಳಿತ ನಡೆಸುವ ಮಾರ್ಗ ತೋರಿದ ರಾಜಕೀಯ ದಾರ್ಶನಿಕ ಕಾನ್ಷಿರಾಮ್ ಅವರನ್ನು ಮರೆಯಲಾಗದು. ಮನುವಾದಿಗಳು ದೇಶವನ್ನು ಆಳುತ್ತಾ ಬಹುಜನರನ್ನು ತುಳಿಯುತ್ತಿದ್ದಾರೆ. ಹೀಗಾಗಿ ಬಹುಜನರ ಕೈಗೆ ಅಧಿಕಾರದ ಚುಕ್ಕಾಣಿ ಸಿಗಬೇಕಿದೆ ಎಂದು ಪ್ರತಿಪಾದಿಸಿದವರು ಎಂದರು.

ಅಸೃಷ್ಟ್ಯರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರನ್ನು ಆಳುವ ವರ್ಗದವರನ್ನಾಗಿ ಮಾಡಿದ ಶ್ರೇ ಯಸ್ಸು ಕಾನ್ಷಿರಾಮ್ ಅವರಿಗೆ ಸಲ್ಲುತ್ತದೆ. ಅಲ್ಲದೇ ಮಾಯಾವತಿ ಅವರನ್ನು ಮೂರು ಭಾರಿ ಮುಖ್ಯಮಂತ್ರಿ ಯನ್ನಾಗಿ ಮಾಡಿ, ಉತ್ತರ ಪ್ರದೇಶದಲ್ಲಿ ಬಡವರಿಗೆ ಭೂಮಿ, ಸಾಲಸೌಲಭ್ಯ ಕಲ್ಪಿಸಿದವರು ಎಂದು ಹೇಳಿ ದರು.

ಬಿಎಸ್ಪಿ ರಾಜ್ಯ ಕಾರ್ಯದರ್ಶಿ ಕೆ.ಬಿ.ಸುಧಾ ಮಾತನಾಡಿ ಭಾರತೀಯರ ಬದುಕಿನಲ್ಲಿ ಭದ್ರವಾಗಿ ಬೆಸೆದು ಕೊಂಡಿರುವ ಪುರೋಹಿತಶಾಹಿಯನ್ನು ವಿರುದ್ಧ ಬುಡ ಸಹಿತ ನಾಶಗೊಳಿಸಿ, ಬಹುಜನ ಸಮಾಜವನ್ನು ಆಳುವ ಸಮಾಜವನ್ನಾಗಿಸುವುದು ಕಾನ್ಷಿರಾಮ್ ಗುರಿಯಾಗಿತ್ತು. ಶೋಷಿತ ಸಮಾಜವು ಆಳುವ ಸಮಾಜ ವಾಗುವುದರಿಂದ ಮಾತ್ರ ಜಾತಿರಹಿತ ಸಮಾಜವನ್ನು ಸೃಷ್ಟಿ ಮಾಡಬಹುದು ಎಂದು ಸಾರಿದವರು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಬಿಎಸ್ಪಿ ತಾಲ್ಲೂಕು ಅಧ್ಯಕ್ಷ ಹೆಚ್.ಕುಮಾರ್ ಮಾತನಾಡಿ ಕಾನ್ಷಿರಾಮ್ ರವರು ಬಿಎಸ್ಪಿಯನ್ನು ಮೂರನೇ ಅತಿದೊಡ್ಡ ರಾಷ್ಟ್ರೀಯ ಪಕ್ಷವಾಗಿಸಿದರು. ತಮಗೆ ಒಲಿದು ಹಲವಾರು ಹುದ್ದೆಗಳನ್ನು ಬದಿಗಿಸಿದವರು. ಅಲ್ಲದೇ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಬಹುದಾದ ಸದಾವಕಾಶ ವನ್ನು ತಳ್ಳಿಹಾಕಿ ಮಯಾವತಿ ಅವರನ್ನು ನಾಯಕಿಯನ್ನಾಗಿ ಸೃಷ್ಟಿಸಿದವರು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಸಹೋದರತ್ವ ಸಮಿತಿಯ ಕಾರ್ಯದರ್ಶಿ ಕೆ.ಎಸ್.ಮಂಜುಳಾ, ಅಸೆಂಬ್ಲಿ ಪ್ರಧಾನ ಕಾರ್ಯದರ್ಶಿಗಳಾದ ಆರ್.ವಸಂತ್, ಸಿದ್ದಯ್ಯ, ಖಜಾಂಚಿ ಟಿ.ಹೆಚ್.ರತ್ನ, ಅಸ್ಮ ಪರ್ವೀನ್, ಕಲಾ ವತಿ, ಲಕ್ಷ್ಮಣ್ ಉಪಸ್ಥಿತರಿದ್ದರು.

People are the biggest asset of India

 

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...